AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Single Girl Child Scholarship: ಪ್ರತಿಭಾನ್ವಿತ ಬಡ ವಿದ್ಯಾರ್ಥಿನಿಯರಿಗೆ CBSEಯಿಂದ ಸ್ಕಾಲರ್‌ಶಿಪ್; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಸಿಬಿಎಸ್‌ಇ 'ಸಿಂಗಲ್ ಗರ್ಲ್ ಚೈಲ್ಡ್' ಮೆರಿಟ್ ಸ್ಕಾಲರ್‌ಶಿಪ್‌ಗೆ ಆನ್‌ಲೈನ್ ಅರ್ಜಿಗಳು ತೆರೆದಿವೆ. 10ನೇ ತರಗತಿಯಲ್ಲಿ ಶೇ.70 ಅಂಕ ಗಳಿಸಿರುವ, 11 ಮತ್ತು 12ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯರಿಗೆ ಮಾಸಿಕ 500ರೂ. ವಿದ್ಯಾರ್ಥಿವೇತನ ಸಿಗುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 23 ಕೊನೆಯ ದಿನ. ಅರ್ಹತಾ ಮಾನದಂಡಗಳು ಮತ್ತು ಅರ್ಜಿ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ಇಲ್ಲಿ ಒದಗಿಸಲಾಗಿದೆ.

CBSE Single Girl Child Scholarship: ಪ್ರತಿಭಾನ್ವಿತ ಬಡ ವಿದ್ಯಾರ್ಥಿನಿಯರಿಗೆ CBSEಯಿಂದ ಸ್ಕಾಲರ್‌ಶಿಪ್; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
Cbse Single Girl Child Scholarship
ಅಕ್ಷತಾ ವರ್ಕಾಡಿ
|

Updated on: Sep 26, 2025 | 6:17 PM

Share

ಸಿಬಿಎಸ್‌ಇ ‘ಸಿಂಗಲ್ ಗರ್ಲ್ ಚೈಲ್ಡ್ ಮೆರಿಟ್ ಸ್ಕಾಲರ್‌ಶಿಪ್’ ಯೋಜನೆಗೆ ಆನ್‌ಲೈನ್ ಅರ್ಜಿಗಳನ್ನು ತೆರೆದಿದೆ. ಈ ವಿದ್ಯಾರ್ಥಿವೇತನ ಯೋಜನೆಯು ನಿರ್ದಿಷ್ಟವಾಗಿ ಸಿಬಿಎಸ್‌ಇ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾದ ಮತ್ತು ಈಗ 11 ಮತ್ತು 12 ನೇ ತರಗತಿಗಳಲ್ಲಿ ತಮ್ಮ ಅಧ್ಯಯನವನ್ನು ಮುಂದುವರಿಸುತ್ತಿರುವ ಪ್ರತಿಭಾನ್ವಿತ ಬಾಲಕಿಯರಿಗೆ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 23 ಎಂದು ನಿಗದಿಪಡಿಸಲಾಗಿದೆ.

ಇರುವ ಓರ್ವ ಮಗಳನ್ನು ಉತ್ತಮ ವಿದ್ಯೆ ಕೊಡಿಸಿ, ಆಕೆಯನ್ನು ಸಬಲರಾನ್ನಾಗಿ ಮಾಡಬೇಕು ಎಂದು ಯೋಚಿಸುವ ಅನೇಕ ಪೋಷಕರಿಗೆ ಆಸರೆಯಾಗಿರುವುದು ಸಿಇಬಿಎಸ್​ಸಿಯ ಸಿಂಗಲ್ ಗರ್ಲ್ ಚೈಲ್ಡ್’ ಮೆರಿಟ್ ಸ್ಕಾಲರ್‌ಶಿಪ್. ಈ ವಿದ್ಯಾರ್ಥಿವೇತನಕ್ಕೆ ಅರ್ಹತೆ ಪಡೆಯಲು, ಹುಡುಗಿಯರು 10 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಕನಿಷ್ಠ ಶೇ.70 ಅಂಕಗಳನ್ನು ಗಳಿಸಿರಬೇಕು.

ಈ ವರ್ಷ ಈ ಯೋಜನೆಯಲ್ಲಿ ಎರಡು ವಿಭಾಗ:

  • ವಿದ್ಯಾರ್ಥಿವೇತನ 2025: 2025 ರಲ್ಲಿ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿ ಈಗ 11 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯರಿಗೆ.
  • ನವೀಕರಣ 2024: ಕಳೆದ ವರ್ಷ ಈ ವಿದ್ಯಾರ್ಥಿವೇತನವನ್ನು ಪಡೆದಿದ್ದ ಮತ್ತು ಈಗ ಅದನ್ನು ಮುಂದುವರಿಸಲು ಬಯಸುವ ಹೆಣ್ಣುಮಕ್ಕಳಿಗೆ.‘

ಅರ್ಹತೆ ಏನು?

  • ವಿದ್ಯಾರ್ಥಿಯು ಪೋಷಕರ ಏಕೈಕ ಮಗಳಾಗಿರಬೇಕು.
  • 10ನೇ ತರಗತಿಯಲ್ಲಿ ಶೇ.70 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
  • CBSE ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರಬೇಕು.
  • 10ನೇ ತರಗತಿಯವರೆಗೆ ಬೋಧನಾ ಶುಲ್ಕ ತಿಂಗಳಿಗೆ ₹2,500 ಮೀರಬಾರದು. 11 ಮತ್ತು 12ನೇ ತರಗತಿಗಳಿಗೆ, ಮಿತಿ ತಿಂಗಳಿಗೆ 3,000ರೂ. (ಎನ್‌ಆರ್‌ಐ ವಿದ್ಯಾರ್ಥಿನಿಯರಿಗೆ 6,000ರೂ. ವರೆಗೆ ವಿನಾಯಿತಿ ಇದೆ).
  • ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂ. ಮೀರಬಾರದು.
  • ವಿದ್ಯಾರ್ಥಿಯ ಉತ್ತಮ ನಡವಳಿಕೆ ಮತ್ತು ನಿಯಮಿತ ಹಾಜರಾತಿ ಕೂಡ ಅಗತ್ಯ.

ಇದನ್ನೂ ಓದಿ: SBIನಿಂದ ಬಡ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​​; 20 ಲಕ್ಷ ರೂ.ಗಳವರೆಗೆ ವಿದ್ಯಾರ್ಥಿವೇತನ ಪಡೆಯಲು ಅವಕಾಶ

ಏನು ಪ್ರಯೋಜನ?

ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಮಾಸಿಕ 500ರೂ, ವರೆಗೆ ವಿದ್ಯಾರ್ಥಿವೇತನ ದೊರೆಯುತ್ತದೆ. ಈ ವಿದ್ಯಾರ್ಥಿವೇತನವು ಗರಿಷ್ಠ ಎರಡು ವರ್ಷಗಳವರೆಗೆ ಇರುತ್ತದೆ. ಆರಂಭಿಕ ವಿದ್ಯಾರ್ಥಿವೇತನದ ನಂತರ, ಅವರು 11 ನೇ ತರಗತಿಯಲ್ಲಿ ಶೇ. 70 ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿ 12 ನೇ ತರಗತಿಗೆ ಬಡ್ತಿ ಪಡೆದರೆ ಮಾತ್ರ ಅದನ್ನು ನವೀಕರಿಸಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ವಿದ್ಯಾರ್ಥಿ ಓದುತ್ತಿರುವ ಶಾಲೆಯು ಅರ್ಜಿಯನ್ನು ಪರಿಶೀಲಿಸುತ್ತದೆ. ಅರ್ಜಿಯು ಅಪೂರ್ಣವಾಗಿದ್ದರೆ ಅಥವಾ ಶಾಲೆಯಿಂದ ಪರಿಶೀಲಿಸದಿದ್ದರೆ, ಅದನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಪ್ರಕ್ರಿಯೆಯ ಸಮಯದಲ್ಲಿ ಪೋಷಕರು ತಮ್ಮ ಆದಾಯದ ಅಫಿಡವಿಟ್ (ನೋಟರೈಸ್ಡ್ ಸ್ಟಾಂಪ್ ಪೇಪರ್‌ನಲ್ಲಿ) ಮತ್ತು ಶುಲ್ಕ ಚೀಟಿಗಳನ್ನು ಸಹ ಅಪ್‌ಲೋಡ್ ಮಾಡಬೇಕಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ