AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE ಕ್ಲಾಸ್​ 10 ಮತ್ತು 12 ಅಂತಿಮ ಪರೀಕ್ಷೆಗಳು ಏಪ್ರಿಲ್​ 26 ರಿಂದ ಪ್ರಾರಂಭ, ಆಫ್​ಲೈನ್​ ಅಲ್ಲ

CBSE ಕ್ಲಾಸ್​ 10 ಮತ್ತು 12 ವಿದ್ಯಾರ್ಥಿಗಳಗೆ ಥಿಯರಿ ಪರೀಕ್ಷೆಗಳು ಏಪ್ರಿಲ್​ 26 ರಿಂದ ಆರಂಭವಾಗಲಿದೆ. ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಸಿಬಿಎಸ್​ಇ ಎಕ್ಸಾಮಿನೇಶನ್​ ಕಂಟ್ರೋಲರ್ ಸಾನ್ಯಂ ಭಾರದ್ವಾಜ್ ಹೇಳಿದ್ದಾರೆ.

CBSE ಕ್ಲಾಸ್​ 10 ಮತ್ತು 12 ಅಂತಿಮ ಪರೀಕ್ಷೆಗಳು ಏಪ್ರಿಲ್​ 26 ರಿಂದ ಪ್ರಾರಂಭ, ಆಫ್​ಲೈನ್​ ಅಲ್ಲ
CBSE ಕ್ಲಾಸ್​ 10, 12 ಅಂತಿಮ ಪರೀಕ್ಷೆಗಳು ಏಪ್ರಿಲ್​ 26 ರಿಂದ, ಆಫ್​ಲೈನ್​ ಅಲ್ಲ
TV9 Web
| Edited By: |

Updated on:Feb 10, 2022 | 8:42 AM

Share

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸೆಂಟ್ರಲ್​ ಬೋರ್ಡ್​​ ಆಫ್​​ ಸೆಕೆಂಡರಿ ಎಜುಕೇಶನ್​ (ಸಿಬಿಎಸ್​ಇ Central Board of Secondary Education -CBSE) 10 ಮತ್ತು 12 ನೇ ತರಗತಿಯ ಅಂತಿಮ ಪರೀಕ್ಷೆಗಳನ್ನು ಏಪ್ರಿಲ್​ 26 ರಿಂದ ನಡೆಸಲು ತೀರ್ಮಾನಿಸಿದೆ. ಮುಖ್ಯ ಸಂಗತಿಯೆಂದರೆ ಪರೀಕ್ಷೆಗಳು ಆಫ್​ಲೈನ್​ ಅಲ್ಲ, ಆಯಾ ಶಾಲಾ ಕಾಲೇಜುಗಳಲ್ಲಿಯೇ ಈ ಹಿಂದಿನ ವರ್ಷಗಳ ಮಾದರಿಯಲ್ಲಿ ನಡೆಯಲಿವೆ. ಇನ್ನು ಪ್ರಶ್ನೆ ಪತ್ರಿಕೆಗಳು ಈ ಹಿಂದೆ ಮಂಡಳಿ ಪ್ರಕಟಿಸಿದ್ದ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಅನುಗುಣವಾಗಿಯೇ ಜರುಗಲಿವೆ ಎಂದು ತಿಳಿದುಬಂದಿದೆ.

ಸಿಬಿಎಸ್​ಇಗೆ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಿದ ಬಳಿಕ ಮತ್ತು ದೇಶದಲ್ಲಿ ಕೊರೊನಾ ಸೋಂಕಿನ ಗತಿಯನ್ನು ಗಮನದಲ್ಲಿಟ್ಟುಕೊಂಡು CBSE ಕ್ಲಾಸ್​ 10 ಮತ್ತು 12 ಅಂತಿಮ ಪರೀಕ್ಷೆಗಳನ್ನು ಏಪ್ರಿಲ್​ 26 ರಿಂದ ಶಾಲೆಗಳಲ್ಲಿಯೇ ಪ್ರಾರಂಭಿಸಿಲು ನಿರ್ಧರಿಸಲಾಗಿದೆ ಎಂದು ಸಿಬಿಎಸ್​ಇ ಎಕ್ಸಾಮಿನೇಶನ್​ ಕಂಟ್ರೋಲರ್ ಸಾನ್ಯಂ ಭಾರದ್ವಾಜ್ (CBSE Examination Controller Sanyam Bhardwaj)​ ತಿಳಿಸಿದ್ದಾರೆ. ​

CBSE ಕ್ಲಾಸ್​ 10 ಮತ್ತು 12 ವಿದ್ಯಾರ್ಥಿಗಳಗೆ ಥಿಯರಿ ಪರೀಕ್ಷೆಗಳು ಏಪ್ರಿಲ್​ 26 ರಿಂದ ಆರಂಭವಾಗಲಿದೆ. ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.

CBSE to conduct final board exam for Classes 10 and12 from April 26

CBSE ಕ್ಲಾಸ್​ 10 ಮತ್ತು 12 ವಿದ್ಯಾರ್ಥಿಗಳಗೆ ಥಿಯರಿ ಪರೀಕ್ಷೆಗಳು ಏಪ್ರಿಲ್​ 26 ರಿಂದ ಆರಂಭವಾಗಲಿದೆ

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಘೋಷಣೆ: ಬೆಂಗಳೂರು: ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿರುವ ಬಗ್ಗೆ ಘೋಷಣೆ ಮಾಡಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದಿನಾಂಕ ಘೋಷಣೆ ಮಾಡಲಾಗಿದೆ. ಪ್ರಕಟಣೆಯಂತೆ ಏಪ್ರಿಲ್​ 16 ರಂದು ಗಣಿತ ವಿಷಯದ ಪರೀಕ್ಷೆ, ಏಪ್ರಿಲ್ 18 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 20 ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ, ಏಪ್ರಿಲ್ 22 ರಂದು ತರ್ಕಶಾಸ್ತ್ರ ಪರೀಕ್ಷೆ, ಏಪ್ರಿಲ್ 23 ರಂದು ಮನಃಶಾಸ್ತ್ರ, ಕೆಮಿಸ್ಟ್ರಿ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.

ಏಪ್ರಿಲ್ 25 ರಂದು ಅರ್ಥಶಾಸ್ತ್ರ ಪರೀಕ್ಷೆ, ಏಪ್ರಿಲ್ 26 ರಂದು ಹಿಂದಿ ಭಾಷಾ ಪರೀಕ್ಷೆ, ಏಪ್ರಿಲ್​​ 28 ರಂದು ಕನ್ನಡ ಭಾಷಾ ಪರೀಕ್ಷೆ, ಏಪ್ರಿಲ್​​ 30 ರಂದು ಸಮಾಜಶಾಸ್ತ್ರ, ಕಂಪ್ಯೂಟರ್​​ ಸೈನ್ಸ್​ ಪರೀಕ್ಷೆ ನಡೆಯಲಿದೆ. ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ, ಮೇ 4 ರಂದು ಇಂಗ್ಲಿಷ್​​ ಭಾಷಾ ಪರೀಕ್ಷೆ, ಮೇ 6 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 16 ರಿಂದ ಮೇ 6ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ ಮಾಡಲಾಗಿದೆ.

ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

ಎಸ್ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಜ.6 ಸಂಜೆ ಪ್ರಕಟಿಸಿತ್ತು. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್​​ 28ರಿಂದ ಏಪ್ರಿಲ್​ 11ರವರೆಗೆ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಮಾರ್ಚ್​ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ / ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.

ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್​ಸೈಟ್​ನಲ್ಲಿ ಸಲ್ಲಿಸಬಹುದು.

Published On - 8:37 am, Thu, 10 February 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ