AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE ಕ್ಲಾಸ್​ 10 ಮತ್ತು 12 ಅಂತಿಮ ಪರೀಕ್ಷೆಗಳು ಏಪ್ರಿಲ್​ 26 ರಿಂದ ಪ್ರಾರಂಭ, ಆಫ್​ಲೈನ್​ ಅಲ್ಲ

CBSE ಕ್ಲಾಸ್​ 10 ಮತ್ತು 12 ವಿದ್ಯಾರ್ಥಿಗಳಗೆ ಥಿಯರಿ ಪರೀಕ್ಷೆಗಳು ಏಪ್ರಿಲ್​ 26 ರಿಂದ ಆರಂಭವಾಗಲಿದೆ. ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಸಿಬಿಎಸ್​ಇ ಎಕ್ಸಾಮಿನೇಶನ್​ ಕಂಟ್ರೋಲರ್ ಸಾನ್ಯಂ ಭಾರದ್ವಾಜ್ ಹೇಳಿದ್ದಾರೆ.

CBSE ಕ್ಲಾಸ್​ 10 ಮತ್ತು 12 ಅಂತಿಮ ಪರೀಕ್ಷೆಗಳು ಏಪ್ರಿಲ್​ 26 ರಿಂದ ಪ್ರಾರಂಭ, ಆಫ್​ಲೈನ್​ ಅಲ್ಲ
CBSE ಕ್ಲಾಸ್​ 10, 12 ಅಂತಿಮ ಪರೀಕ್ಷೆಗಳು ಏಪ್ರಿಲ್​ 26 ರಿಂದ, ಆಫ್​ಲೈನ್​ ಅಲ್ಲ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 10, 2022 | 8:42 AM

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸೆಂಟ್ರಲ್​ ಬೋರ್ಡ್​​ ಆಫ್​​ ಸೆಕೆಂಡರಿ ಎಜುಕೇಶನ್​ (ಸಿಬಿಎಸ್​ಇ Central Board of Secondary Education -CBSE) 10 ಮತ್ತು 12 ನೇ ತರಗತಿಯ ಅಂತಿಮ ಪರೀಕ್ಷೆಗಳನ್ನು ಏಪ್ರಿಲ್​ 26 ರಿಂದ ನಡೆಸಲು ತೀರ್ಮಾನಿಸಿದೆ. ಮುಖ್ಯ ಸಂಗತಿಯೆಂದರೆ ಪರೀಕ್ಷೆಗಳು ಆಫ್​ಲೈನ್​ ಅಲ್ಲ, ಆಯಾ ಶಾಲಾ ಕಾಲೇಜುಗಳಲ್ಲಿಯೇ ಈ ಹಿಂದಿನ ವರ್ಷಗಳ ಮಾದರಿಯಲ್ಲಿ ನಡೆಯಲಿವೆ. ಇನ್ನು ಪ್ರಶ್ನೆ ಪತ್ರಿಕೆಗಳು ಈ ಹಿಂದೆ ಮಂಡಳಿ ಪ್ರಕಟಿಸಿದ್ದ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಅನುಗುಣವಾಗಿಯೇ ಜರುಗಲಿವೆ ಎಂದು ತಿಳಿದುಬಂದಿದೆ.

ಸಿಬಿಎಸ್​ಇಗೆ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಿದ ಬಳಿಕ ಮತ್ತು ದೇಶದಲ್ಲಿ ಕೊರೊನಾ ಸೋಂಕಿನ ಗತಿಯನ್ನು ಗಮನದಲ್ಲಿಟ್ಟುಕೊಂಡು CBSE ಕ್ಲಾಸ್​ 10 ಮತ್ತು 12 ಅಂತಿಮ ಪರೀಕ್ಷೆಗಳನ್ನು ಏಪ್ರಿಲ್​ 26 ರಿಂದ ಶಾಲೆಗಳಲ್ಲಿಯೇ ಪ್ರಾರಂಭಿಸಿಲು ನಿರ್ಧರಿಸಲಾಗಿದೆ ಎಂದು ಸಿಬಿಎಸ್​ಇ ಎಕ್ಸಾಮಿನೇಶನ್​ ಕಂಟ್ರೋಲರ್ ಸಾನ್ಯಂ ಭಾರದ್ವಾಜ್ (CBSE Examination Controller Sanyam Bhardwaj)​ ತಿಳಿಸಿದ್ದಾರೆ. ​

CBSE ಕ್ಲಾಸ್​ 10 ಮತ್ತು 12 ವಿದ್ಯಾರ್ಥಿಗಳಗೆ ಥಿಯರಿ ಪರೀಕ್ಷೆಗಳು ಏಪ್ರಿಲ್​ 26 ರಿಂದ ಆರಂಭವಾಗಲಿದೆ. ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.

CBSE to conduct final board exam for Classes 10 and12 from April 26

CBSE ಕ್ಲಾಸ್​ 10 ಮತ್ತು 12 ವಿದ್ಯಾರ್ಥಿಗಳಗೆ ಥಿಯರಿ ಪರೀಕ್ಷೆಗಳು ಏಪ್ರಿಲ್​ 26 ರಿಂದ ಆರಂಭವಾಗಲಿದೆ

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಘೋಷಣೆ: ಬೆಂಗಳೂರು: ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿರುವ ಬಗ್ಗೆ ಘೋಷಣೆ ಮಾಡಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ದಿನಾಂಕ ಘೋಷಣೆ ಮಾಡಲಾಗಿದೆ. ಪ್ರಕಟಣೆಯಂತೆ ಏಪ್ರಿಲ್​ 16 ರಂದು ಗಣಿತ ವಿಷಯದ ಪರೀಕ್ಷೆ, ಏಪ್ರಿಲ್ 18 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 20 ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ, ಏಪ್ರಿಲ್ 22 ರಂದು ತರ್ಕಶಾಸ್ತ್ರ ಪರೀಕ್ಷೆ, ಏಪ್ರಿಲ್ 23 ರಂದು ಮನಃಶಾಸ್ತ್ರ, ಕೆಮಿಸ್ಟ್ರಿ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.

ಏಪ್ರಿಲ್ 25 ರಂದು ಅರ್ಥಶಾಸ್ತ್ರ ಪರೀಕ್ಷೆ, ಏಪ್ರಿಲ್ 26 ರಂದು ಹಿಂದಿ ಭಾಷಾ ಪರೀಕ್ಷೆ, ಏಪ್ರಿಲ್​​ 28 ರಂದು ಕನ್ನಡ ಭಾಷಾ ಪರೀಕ್ಷೆ, ಏಪ್ರಿಲ್​​ 30 ರಂದು ಸಮಾಜಶಾಸ್ತ್ರ, ಕಂಪ್ಯೂಟರ್​​ ಸೈನ್ಸ್​ ಪರೀಕ್ಷೆ ನಡೆಯಲಿದೆ. ಮೇ 2 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ, ಮೇ 4 ರಂದು ಇಂಗ್ಲಿಷ್​​ ಭಾಷಾ ಪರೀಕ್ಷೆ, ಮೇ 6 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ ಪರೀಕ್ಷೆ ನಡೆಯಲಿದೆ. ಏಪ್ರಿಲ್ 16 ರಿಂದ ಮೇ 6ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಪ್ರಕಟ ಮಾಡಲಾಗಿದೆ.

ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

ಎಸ್ಎಸ್​ಎಲ್​ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಜ.6 ಸಂಜೆ ಪ್ರಕಟಿಸಿತ್ತು. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಮಾರ್ಚ್​​ 28ರಿಂದ ಏಪ್ರಿಲ್​ 11ರವರೆಗೆ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಮಾರ್ಚ್​ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಏಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ / ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ.

ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯಕ್ಕೂ ಪ್ರಶ್ನಪತ್ರಿಕೆ ಓದಲು 15 ನಿಮಿಷ ಕಾಲಾವಕಾಶ ನೀಡಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ. ವೇಳಾಪಟ್ಟಿಗೆ ಅಭ್ಯರ್ಥಿಗಳು / ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್​ಸೈಟ್​ನಲ್ಲಿ ಸಲ್ಲಿಸಬಹುದು.

Published On - 8:37 am, Thu, 10 February 22

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ