AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET Exam 2024: ಔಟ್ ಆಫ್ ಸಿಲೆಬಸ್​​ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ: ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ

ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ನಾಲ್ಕು ವಿಷಯಗಳ ಒಟ್ಟು 50 ಔಟ್ ಆಫ್‌ ಸಿಲಬಸ್ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ತಜ್ಞರ ಸಮಿತಿ ಶಿಫಾರಸಿಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ. ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಮಾಡುವ ಸಾಧ್ಯತೆ ಇದೆ.

CET Exam 2024: ಔಟ್ ಆಫ್ ಸಿಲೆಬಸ್​​ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ: ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Vinay Kashappanavar
| Edited By: |

Updated on:Apr 28, 2024 | 10:57 PM

Share

ಬೆಂಗಳೂರು, ಏಪ್ರಿಲ್​ 28: ಸಿಇಟಿ ಪರೀಕ್ಷೆ (CET Exam) ಗೊಂದಲ ಪರಿಶೀಲನೆಗೆ ನಾಲ್ವರು ಸದಸ್ಯರನ್ನೊಳಗೊಂಡ ತಜ್ಞರ ಸಮಿತಿ ಇತ್ತೀಚೆಗೆ ವರದಿ ಸಲ್ಲಿಸಿತ್ತು. ಇದೀಗ ತಜ್ಞರ ಸಮಿತಿಯ ವರದಿ ಅನ್ವಯ ಕ್ರಮಕೈಗೊಳ್ಳಲು ಸರ್ಕಾರ ನಿರ್ಧಾರ ಮಾಡಿದ್ದು, ಮರು ಸಿಇಟಿ ಪರೀಕ್ಷೆ ನಡೆಸದಂತೆ ವರದಿ ಸಲ್ಲಿಸಿದೆ. ಔಟ್ ಆಫ್ ಸಿಲೆಬಸ್‌ನ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ ಮಾಡಲಾಗಿದೆ. ಗ್ರೇಸ್ ಮಾರ್ಕ್ಸ್ ಆಧಾರದಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದ್ದು, ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಮಾಡುವ ಸಾಧ್ಯತೆ ಇದೆ.

ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ನಾಲ್ಕು ವಿಷಯಗಳ ಒಟ್ಟು 50 ಔಟ್ ಆಫ್‌ ಸಿಲಬಸ್ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ತಜ್ಞರ ಸಮಿತಿ ಶಿಫಾರಸಿಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: CET Exam 2024: ಸಿಇಟಿ ಪರೀಕ್ಷೆ ಗೊಂದಲ: ವರದಿ ಸಲ್ಲಿಸಿದ ತಜ್ಞರ ಸಮಿತಿ, ಮುಂದಿನ ವಾರ ಸರ್ಕಾರ ನಿರ್ಧಾರ ಸಾಧ್ಯತೆ

ಏಪ್ರಿಲ್‌ 18 ಹಾಗೂ 19ರಂದು ಸಿಇಟಿ ಪರೀಕ್ಷೆ ನಡೆದಿತ್ತು. 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ವಿದ್ಯಾರ್ಥಿಗಳು ಸೇರಿದಂತೆ ಕೆಲ ಉಪನ್ಯಾಸಕರು ಆರೋಪ ಮಾಡಿದ್ದರು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರದಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿತ್ತು. ಹೀಗಾಗಿ ಈ ಗೊಂದಲ ಪರಿಹರಿಸಲು ಸರ್ಕಾರ ನಾಲ್ವರು ಸದಸ್ಯರನ್ನೊಳಗೊಂಡ ತಜ್ಞರ ಸಮಿತಿಯೊಂದನ್ನು ಇತ್ತೀಚೆಗೆ ರಚಿಸಿತ್ತು.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ: ಕಂಗಾಲಾದ ವಿದ್ಯಾರ್ಥಿಗಳು, ಪೋಷಕರು

ಕೆಇಎ ಮಾಡಿರುವ ಈ ಎಡವಟ್ಟಿಗೆ ವಿದ್ಯಾರ್ಥಿಗಳ ಪೋಷಕರು ಕೂಡ ಕಂಗಲಾಗಿದ್ದರು. ತಮ್ಮ ಮಕ್ಕಳ ಭವಿಷ್ಯದ ಕುರಿತು ಅವರು ಚಿಂತಿತರಾಗಿರುವುದು ಕಂಡು ಬಂದಿತ್ತು. ಹಲವಾರು ವಿಷಯಗಳ ಕೈ ಬಿಟ್ಟಿರುವ ಪಠ್ಯಗಳ ಮತ್ತು ವಿಷಯಗಳ ಕುರಿತು ಪ್ರಶ್ನೆಗಳನ್ನ ಕೇಳುವುದು ಏನು ಅಗತ್ಯವಿತ್ತು. ಇದು ನಮ್ಮ ಮಕ್ಕಳ ಭವಿಷ್ಯದ ಮೇಲೆ ಮಾನಸಿಕ ಸೀಮಿತದ ಮೇಲೆ ಪರಿಣಾಮ ಬೀರುತ್ತದೆ ಎಂಬ ಆತಂಕವನ್ನು ಪೋಷಕರು ಹೊರಹಾಕಿದ್ದರು. ಈ ಕುರಿತು ಟಿವಿ 9 ಡಿಜಿಟಲ್​​ನೊಂದಿಗೆ ಮಾತನಾಡಿದ್ದ ಹಲವಾರು ಪೋಷಕರು, ಸಿಟಿಇ ಪರೀಕ್ಷೆಯಲ್ಲಿ ಕೇಳಲಾದ ಪ್ರಶ್ನೆಗಳ ಕುರಿತು ತೀವ್ರ ಆತಂಕವನ್ನು ಹೊರ ಹಾಕಿದ್ದರು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:52 pm, Sun, 28 April 24

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?