AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CET Exam 2024: ಔಟ್ ಆಫ್ ಸಿಲೆಬಸ್​​ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ: ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ

ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ನಾಲ್ಕು ವಿಷಯಗಳ ಒಟ್ಟು 50 ಔಟ್ ಆಫ್‌ ಸಿಲಬಸ್ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ತಜ್ಞರ ಸಮಿತಿ ಶಿಫಾರಸಿಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ. ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಮಾಡುವ ಸಾಧ್ಯತೆ ಇದೆ.

CET Exam 2024: ಔಟ್ ಆಫ್ ಸಿಲೆಬಸ್​​ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ: ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Vinay Kashappanavar
| Edited By: |

Updated on:Apr 28, 2024 | 10:57 PM

Share

ಬೆಂಗಳೂರು, ಏಪ್ರಿಲ್​ 28: ಸಿಇಟಿ ಪರೀಕ್ಷೆ (CET Exam) ಗೊಂದಲ ಪರಿಶೀಲನೆಗೆ ನಾಲ್ವರು ಸದಸ್ಯರನ್ನೊಳಗೊಂಡ ತಜ್ಞರ ಸಮಿತಿ ಇತ್ತೀಚೆಗೆ ವರದಿ ಸಲ್ಲಿಸಿತ್ತು. ಇದೀಗ ತಜ್ಞರ ಸಮಿತಿಯ ವರದಿ ಅನ್ವಯ ಕ್ರಮಕೈಗೊಳ್ಳಲು ಸರ್ಕಾರ ನಿರ್ಧಾರ ಮಾಡಿದ್ದು, ಮರು ಸಿಇಟಿ ಪರೀಕ್ಷೆ ನಡೆಸದಂತೆ ವರದಿ ಸಲ್ಲಿಸಿದೆ. ಔಟ್ ಆಫ್ ಸಿಲೆಬಸ್‌ನ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನ ಮಾಡಲಾಗಿದೆ. ಗ್ರೇಸ್ ಮಾರ್ಕ್ಸ್ ಆಧಾರದಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದ್ದು, ಮೇ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟ ಮಾಡುವ ಸಾಧ್ಯತೆ ಇದೆ.

ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ನಾಲ್ಕು ವಿಷಯಗಳ ಒಟ್ಟು 50 ಔಟ್ ಆಫ್‌ ಸಿಲಬಸ್ ಪ್ರಶ್ನೆಗಳನ್ನು ಕೈಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ತಜ್ಞರ ಸಮಿತಿ ಶಿಫಾರಸಿಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: CET Exam 2024: ಸಿಇಟಿ ಪರೀಕ್ಷೆ ಗೊಂದಲ: ವರದಿ ಸಲ್ಲಿಸಿದ ತಜ್ಞರ ಸಮಿತಿ, ಮುಂದಿನ ವಾರ ಸರ್ಕಾರ ನಿರ್ಧಾರ ಸಾಧ್ಯತೆ

ಏಪ್ರಿಲ್‌ 18 ಹಾಗೂ 19ರಂದು ಸಿಇಟಿ ಪರೀಕ್ಷೆ ನಡೆದಿತ್ತು. 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ವಿದ್ಯಾರ್ಥಿಗಳು ಸೇರಿದಂತೆ ಕೆಲ ಉಪನ್ಯಾಸಕರು ಆರೋಪ ಮಾಡಿದ್ದರು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರದಲ್ಲಿ ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೇಳಲಾಗಿತ್ತು. ಹೀಗಾಗಿ ಈ ಗೊಂದಲ ಪರಿಹರಿಸಲು ಸರ್ಕಾರ ನಾಲ್ವರು ಸದಸ್ಯರನ್ನೊಳಗೊಂಡ ತಜ್ಞರ ಸಮಿತಿಯೊಂದನ್ನು ಇತ್ತೀಚೆಗೆ ರಚಿಸಿತ್ತು.

ಇದನ್ನೂ ಓದಿ: CET Exam: ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ: ಕಂಗಾಲಾದ ವಿದ್ಯಾರ್ಥಿಗಳು, ಪೋಷಕರು

ಕೆಇಎ ಮಾಡಿರುವ ಈ ಎಡವಟ್ಟಿಗೆ ವಿದ್ಯಾರ್ಥಿಗಳ ಪೋಷಕರು ಕೂಡ ಕಂಗಲಾಗಿದ್ದರು. ತಮ್ಮ ಮಕ್ಕಳ ಭವಿಷ್ಯದ ಕುರಿತು ಅವರು ಚಿಂತಿತರಾಗಿರುವುದು ಕಂಡು ಬಂದಿತ್ತು. ಹಲವಾರು ವಿಷಯಗಳ ಕೈ ಬಿಟ್ಟಿರುವ ಪಠ್ಯಗಳ ಮತ್ತು ವಿಷಯಗಳ ಕುರಿತು ಪ್ರಶ್ನೆಗಳನ್ನ ಕೇಳುವುದು ಏನು ಅಗತ್ಯವಿತ್ತು. ಇದು ನಮ್ಮ ಮಕ್ಕಳ ಭವಿಷ್ಯದ ಮೇಲೆ ಮಾನಸಿಕ ಸೀಮಿತದ ಮೇಲೆ ಪರಿಣಾಮ ಬೀರುತ್ತದೆ ಎಂಬ ಆತಂಕವನ್ನು ಪೋಷಕರು ಹೊರಹಾಕಿದ್ದರು. ಈ ಕುರಿತು ಟಿವಿ 9 ಡಿಜಿಟಲ್​​ನೊಂದಿಗೆ ಮಾತನಾಡಿದ್ದ ಹಲವಾರು ಪೋಷಕರು, ಸಿಟಿಇ ಪರೀಕ್ಷೆಯಲ್ಲಿ ಕೇಳಲಾದ ಪ್ರಶ್ನೆಗಳ ಕುರಿತು ತೀವ್ರ ಆತಂಕವನ್ನು ಹೊರ ಹಾಕಿದ್ದರು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:52 pm, Sun, 28 April 24

Follow Us
Vinay Kashappanavar
Vinay Kashappanavar
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!