AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ನೇ ತರಗತಿ NCERT ಪಠ್ಯಕ್ರಮದಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದ ಅಧ್ಯಾಯವನ್ನು ಸೇರಿಸಲಾಗಿದೆ

ಅಧ್ಯಾಯವು ರಾಷ್ಟ್ರೀಯ ಯುದ್ಧ ಸ್ಮಾರಕದ (NWM) ಇತಿಹಾಸ, ಮಹತ್ವ ಮತ್ತು ಪರಿಕಲ್ಪನೆಯನ್ನು ಎತ್ತಿ ತೋರಿಸುತ್ತದೆ' ಎಂದು ಸಚಿವಾಲಯ ಹೇಳಿದೆ.

7 ನೇ ತರಗತಿ NCERT ಪಠ್ಯಕ್ರಮದಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದ ಅಧ್ಯಾಯವನ್ನು ಸೇರಿಸಲಾಗಿದೆ
ರಾಷ್ಟ್ರೀಯ ಯುದ್ಧ ಸ್ಮಾರಕ
ನಯನಾ ಎಸ್​ಪಿ
ನಯನಾ ಎಸ್​ಪಿ|

Updated on: Aug 31, 2023 | 6:55 PM

Share

NCERT ಪಠ್ಯಕ್ರಮದ ಭಾಗವಾಗಿ 7 ನೇ ತರಗತಿಯ ವಿದ್ಯಾರ್ಥಿಗಳಿಗೆ ‘ನಮ್ಮ ಕೆಚ್ಚೆದೆಯ ಸೈನಿಕರಿಗೆ ಗೌರವ’ ಎಂಬ ಶೀರ್ಷಿಕೆಯ ರಾಷ್ಟ್ರೀಯ ಯುದ್ಧ ಸ್ಮಾರಕದ ಅಧ್ಯಾಯವನ್ನು ಸೇರಿಸಲಾಗಿದೆ. ಈ ಉಪಕ್ರಮವನ್ನು ರಕ್ಷಣಾ ಸಚಿವಾಲಯ ಮತ್ತು ಶಿಕ್ಷಣ ಸಚಿವಾಲಯ ಜಂಟಿಯಾಗಿ ಕೈಗೊಳ್ಳುತ್ತಿದೆ. ಶಾಲಾ ಮಕ್ಕಳಲ್ಲಿ ದೇಶಭಕ್ತಿ, ಕರ್ತವ್ಯ ನಿಷ್ಠೆ, ಧೈರ್ಯ ಮತ್ತು ತ್ಯಾಗದ ಮೌಲ್ಯಗಳನ್ನು ಬೆಳೆಸುವುದು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಈ ಉಪಕ್ರಮದ ಉದ್ದೇಶವಾಗಿದೆ ಎಂದು ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಅಧ್ಯಾಯವು ರಾಷ್ಟ್ರೀಯ ಯುದ್ಧ ಸ್ಮಾರಕದ (NWM) ಇತಿಹಾಸ, ಮಹತ್ವ ಮತ್ತು ಪರಿಕಲ್ಪನೆಯನ್ನು ಹೈಲೈಟ್ ಮಾಡುತ್ತದೆ. “ಸ್ವಾತಂತ್ರ್ಯದ ನಂತರ ರಾಷ್ಟ್ರದ ಸೇವೆಯಲ್ಲಿ ಸಶಸ್ತ್ರ ಪಡೆಗಳ ಧೈರ್ಯಶಾಲಿಗಳು ಮಾಡಿದ ಅತ್ಯುನ್ನತ ತ್ಯಾಗದ ಬಗ್ಗೆಯೂ ಇದು ಮಾತನಾಡಲಿದೆ” ಎಂದು ಪ್ರಕಟಣೆ ತಿಳಿಸಿದೆ.

ಈ ಅಧ್ಯಾಯವನ್ನು ಪರಸ್ಪರ ಪತ್ರಗಳನ್ನು ಹಂಚಿಕೊಳ್ಳುವ ಇಬ್ಬರು ಸ್ನೇಹಿತರ ನಡುವಿನ ಸಂವಾದವಾಗಿ ಪ್ರದರ್ಶಿಸಲಾಗುತ್ತಿದೆ, ಧೈರ್ಯಶಾಲಿಗಳು ಮಾಡಿದ ತ್ಯಾಗದಿಂದಾಗಿ ಅವರು ಅನುಭವಿಸುವ ಸ್ವಾತಂತ್ರ್ಯಕ್ಕಾಗಿ ಕೃತಜ್ಞತೆಯ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. “ಐಕಾನಿಕ್ ಸ್ಮಾರಕಕ್ಕೆ ಭೇಟಿ ನೀಡಿದಾಗ ಮಕ್ಕಳ ಮನಸ್ಸು ಮತ್ತು ಹೃದಯದಲ್ಲಿ ಉಂಟಾಗುವ ಆಳವಾದ ಭಾವನಾತ್ಮಕ ಪ್ರಭಾವ ಮತ್ತು ಸಂಪರ್ಕವನ್ನು ಎನ್‌ಸಿಇಆರ್‌ಟಿಯ ಲೇಖಕರು ಸೃಜನಾತ್ಮಕವಾಗಿ ಹೊರತಂದಿದ್ದಾರೆ” ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ: 10ನೇ ತರಗತಿಯ ನಂತರ ವಿದ್ಯಾರ್ಥಿಗಳಿಗೆ 2023ರ ಟಾಪ್ ಉಚಿತ ಆನ್‌ಲೈನ್ ಕೋರ್ಸ್‌ಗಳ ಪಟ್ಟಿ

ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 25, 2019 ರಂದು ನವದೆಹಲಿಯಲ್ಲಿ ಸ್ಥಾಪಿಸಿದರು. “ಜನರಲ್ಲಿ ತ್ಯಾಗ ಮತ್ತು ರಾಷ್ಟ್ರೀಯ ಮನೋಭಾವವನ್ನು ಬೆಳೆಸಲು ಮತ್ತು ರಾಷ್ಟ್ರವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಸೈನಿಕರಿಗೆ ಸೂಕ್ತವಾದ ಗೌರವವನ್ನು ಸಲ್ಲಿಸಲು ಇದನ್ನು ಸ್ಥಾಪಿಸಲಾಗಿದೆ” ಎಂದು ಪ್ರಕಟಣೆ ತಿಳಿಸಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ