AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್; ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕ್ರಾಂತಿ: ಬಸವರಾಜ ಬೊಮ್ಮಾಯಿ

Basavaraj Bommai: ಸಪ್ಟೆಂಬರ್ 5 ರಂದು ಹೇಗೆ ಶಿಕ್ಷಕರ ದಿನಾಚರಣೆ ಮಾಡ್ತೇವೋ ಹಾಗೇ ಶಿಕ್ಷಣದಲ್ಲಿ ಕ್ರಾಂತಿ ಆದರೆ, ರಾಷ್ಟ್ರೀಯ ನೀತಿ ಯಶಸ್ವಿಯಾದ್ರೆ, ಆಗಸ್ಟ್‌ 23 ರಂದು ರಾಷ್ಟ್ರೀಯ ನೀತಿ ದಿನಾಚರಣೆ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್; ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕ್ರಾಂತಿ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: Skanda

Updated on:Aug 24, 2021 | 10:03 AM

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮೂಲಕ ದೊಡ್ಡ ಬದಲಾವಣೆ ಆಗಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಯಶಸ್ವಿಯಾದರೆ, ಆಗಸ್ಟ್ 23 ಎಜುಕೇಷನ್ ಡೇ ಆಗಲಿದೆ. ರಾಜ್ಯದಲ್ಲಿ ಡಿಜಿಟಲೀಕರಣ ಹೊಸ ನೀತಿ ಜಾರಿಗೆ ತರುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ (ಆಗಸ್ಟ್ 23) ಹೇಳಿಕೆ ನೀಡಿದ್ದಾರೆ. ಮೊದಲು ಜ್ಞಾನ, ನಂತರ ವಿಜ್ಞಾನ, ಬಳಿಕ ತಂತ್ರಜ್ಞಾನ. ಆದರೆ ಈಗ ತಂತ್ರಾಂಶ ಜ್ಞಾನ ಮುಂಚೂಣಿಯಲ್ಲಿ ಇದೆ. ಹಾಗಾಗಿ ಡಿಜಿಟಲೈಸೇಷನ್ ಈಗ ಬಹಳ ಮುಖ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಕತಾಳೀಯವೋ ಏನೋ ಗೊತ್ತಿಲ್ಲ. ಕೊವಿಡ್ ನಿಂದ ಶಾಲೆಗಳು ತೆರೆಯಲು ಆಗಿರಲಿಲ್ಲ, ಇವತ್ತು ಶಾಲೆಗಳಿಗೆ ಮಕ್ಕಳು ಬಂದಿದ್ದಾರೆ. ಇನ್ನೊಂದೆಡೆ ಇವತ್ತು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ದಿನ. ಈ ಎರಡು ಕಾರಣಗಳಿಂದಾಗಿ ಇವತ್ತು ಲಿಬರೇಷನ್ ಡೇ . ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಯಶಸ್ವಿಯಾದ್ರೆ ಆಗಸ್ಟ್ 23 ಎಜ್ಯುಕೇಶನ್ ಡೇ ಆಗಲಿದೆ. ಭವಿಷ್ಯವನ್ನು ಕಟ್ಟುವ ಕೆಲಸ ಮಾಡಲಾಗಿದೆ. ಇಡೀ ದೇಶದಲ್ಲೇ ಅಮೂಲ್ಯ ಬದಲಾವಣೆ ಆಗಿದೆ. ಜಡ್ಡುಗಟ್ಟಿದ್ದ ವ್ಯವಸ್ಥೆಗೆ ಲಿಬರೇಷನ್ ಸಿಕ್ಕಿದೆ ಎಂದು ಸಿಎಂ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ನೀತಿ ಯಶಸ್ವಿಯಾದ್ರೆ, ಸಪ್ಟೆಂಬರ್ 5 ರಂದು ಹೇಗೆ ಶಿಕ್ಷಕರ ದಿನಾಚರಣೆ ಮಾಡ್ತೇವೋ ಹಾಗೇ ಶಿಕ್ಷಣದಲ್ಲಿ ಕ್ರಾಂತಿ ಆದರೆ ಆಗಸ್ಟ್‌ 23 ರಂದು ರಾಷ್ಟ್ರೀಯ ನೀತಿ ದಿನಾಚರಣೆ ಆಗಲಿದೆ. ನರೇಂದ್ರ ಮೋದಿ ದೂರದೃಷ್ಟಿ ಇರುವ ಮುತ್ಸದ್ಧಿ. ಅವರ ದೂರದೃಷ್ಟಿಯ ಫಲ ಈ ರಾಷ್ಟ್ರೀಯ ಶಿಕ್ಷಣ ನೀತಿ. ‌ಒಬ್ಬ ರಾಜಕಾರಣಿಗೆ ಮುಂದಿನ ಚುನಾವಣೆ ಮೇಲೆ ಗಮನ ಇರುತ್ತದೆ. ಆದ್ರೆ ಒಬ್ಬ ಮುತ್ಸದ್ಧಿಗೆ ಮುಂದಿನ ಜನಾಂಗದ ಮೇಲೆ ಗಮನ ಇರುತ್ತದೆ. ಕರ್ನಾಟಕದಲ್ಲಿ ಡಿಜಿಟಲೀಕರಣ ಹೊಸ ನೀತಿಯನ್ನ ಜಾರಿಗೆ ತರುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಐಪ್ಯಾಡ್ ನೀಡುತ್ತೇವೆ. ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್ ಒದಗಿಸುತ್ತೇವೆ.  ನನ್ನ ಕರ್ನಾಟಕ ಜ್ಞಾನವಂತ ರಾಜ್ಯವಾಗಬೇಕು. ಆಗ ಮಾತ್ರ ಕರ್ನಾಟಕ ಕಲ್ಯಾಣ ಕರ್ನಾಟಕ ಆಗಲಿದೆ. ಕೊರೊನಾ ಸಂಕಷ್ಟದಿಂದ ಸರ್ಕಾರಕ್ಕೆ ಆರ್ಥಿಕ ಸಮಸ್ಯೆ ಇದೆ. ಆದರೆ ಹೊಸ ಯೋಜನೆಗಳಿಗೆ ಯಾವುದೇ ಸಮಸ್ಯೆ ಆಗಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಶಿಕ್ಷಣಕ್ಕೆ ಮುಂದಿನ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಾಲೆಗಳಿಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ; 1 ರಿಂದ 8ನೇ ತರಗತಿ ಆರಂಭದ ಬಗ್ಗೆಯೂ ಚರ್ಚೆ

ಕೊರೊನಾ ನಿರ್ವಹಣೆ, ನೆರೆಹಾನಿ ಕುರಿತು ಬಸವರಾಜ ಬೊಮ್ಮಾಯಿ ಸಭೆ; ನೆರೆಹಾನಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಲು ಸೂಚನೆ

Published On - 2:58 pm, Mon, 23 August 21

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ