AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್; ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕ್ರಾಂತಿ: ಬಸವರಾಜ ಬೊಮ್ಮಾಯಿ

Basavaraj Bommai: ಸಪ್ಟೆಂಬರ್ 5 ರಂದು ಹೇಗೆ ಶಿಕ್ಷಕರ ದಿನಾಚರಣೆ ಮಾಡ್ತೇವೋ ಹಾಗೇ ಶಿಕ್ಷಣದಲ್ಲಿ ಕ್ರಾಂತಿ ಆದರೆ, ರಾಷ್ಟ್ರೀಯ ನೀತಿ ಯಶಸ್ವಿಯಾದ್ರೆ, ಆಗಸ್ಟ್‌ 23 ರಂದು ರಾಷ್ಟ್ರೀಯ ನೀತಿ ದಿನಾಚರಣೆ ಆಗಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್; ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಕ್ರಾಂತಿ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Aug 24, 2021 | 10:03 AM

Share

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮೂಲಕ ದೊಡ್ಡ ಬದಲಾವಣೆ ಆಗಲಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಯಶಸ್ವಿಯಾದರೆ, ಆಗಸ್ಟ್ 23 ಎಜುಕೇಷನ್ ಡೇ ಆಗಲಿದೆ. ರಾಜ್ಯದಲ್ಲಿ ಡಿಜಿಟಲೀಕರಣ ಹೊಸ ನೀತಿ ಜಾರಿಗೆ ತರುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ (ಆಗಸ್ಟ್ 23) ಹೇಳಿಕೆ ನೀಡಿದ್ದಾರೆ. ಮೊದಲು ಜ್ಞಾನ, ನಂತರ ವಿಜ್ಞಾನ, ಬಳಿಕ ತಂತ್ರಜ್ಞಾನ. ಆದರೆ ಈಗ ತಂತ್ರಾಂಶ ಜ್ಞಾನ ಮುಂಚೂಣಿಯಲ್ಲಿ ಇದೆ. ಹಾಗಾಗಿ ಡಿಜಿಟಲೈಸೇಷನ್ ಈಗ ಬಹಳ ಮುಖ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾಕತಾಳೀಯವೋ ಏನೋ ಗೊತ್ತಿಲ್ಲ. ಕೊವಿಡ್ ನಿಂದ ಶಾಲೆಗಳು ತೆರೆಯಲು ಆಗಿರಲಿಲ್ಲ, ಇವತ್ತು ಶಾಲೆಗಳಿಗೆ ಮಕ್ಕಳು ಬಂದಿದ್ದಾರೆ. ಇನ್ನೊಂದೆಡೆ ಇವತ್ತು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ದಿನ. ಈ ಎರಡು ಕಾರಣಗಳಿಂದಾಗಿ ಇವತ್ತು ಲಿಬರೇಷನ್ ಡೇ . ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಯಶಸ್ವಿಯಾದ್ರೆ ಆಗಸ್ಟ್ 23 ಎಜ್ಯುಕೇಶನ್ ಡೇ ಆಗಲಿದೆ. ಭವಿಷ್ಯವನ್ನು ಕಟ್ಟುವ ಕೆಲಸ ಮಾಡಲಾಗಿದೆ. ಇಡೀ ದೇಶದಲ್ಲೇ ಅಮೂಲ್ಯ ಬದಲಾವಣೆ ಆಗಿದೆ. ಜಡ್ಡುಗಟ್ಟಿದ್ದ ವ್ಯವಸ್ಥೆಗೆ ಲಿಬರೇಷನ್ ಸಿಕ್ಕಿದೆ ಎಂದು ಸಿಎಂ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ನೀತಿ ಯಶಸ್ವಿಯಾದ್ರೆ, ಸಪ್ಟೆಂಬರ್ 5 ರಂದು ಹೇಗೆ ಶಿಕ್ಷಕರ ದಿನಾಚರಣೆ ಮಾಡ್ತೇವೋ ಹಾಗೇ ಶಿಕ್ಷಣದಲ್ಲಿ ಕ್ರಾಂತಿ ಆದರೆ ಆಗಸ್ಟ್‌ 23 ರಂದು ರಾಷ್ಟ್ರೀಯ ನೀತಿ ದಿನಾಚರಣೆ ಆಗಲಿದೆ. ನರೇಂದ್ರ ಮೋದಿ ದೂರದೃಷ್ಟಿ ಇರುವ ಮುತ್ಸದ್ಧಿ. ಅವರ ದೂರದೃಷ್ಟಿಯ ಫಲ ಈ ರಾಷ್ಟ್ರೀಯ ಶಿಕ್ಷಣ ನೀತಿ. ‌ಒಬ್ಬ ರಾಜಕಾರಣಿಗೆ ಮುಂದಿನ ಚುನಾವಣೆ ಮೇಲೆ ಗಮನ ಇರುತ್ತದೆ. ಆದ್ರೆ ಒಬ್ಬ ಮುತ್ಸದ್ಧಿಗೆ ಮುಂದಿನ ಜನಾಂಗದ ಮೇಲೆ ಗಮನ ಇರುತ್ತದೆ. ಕರ್ನಾಟಕದಲ್ಲಿ ಡಿಜಿಟಲೀಕರಣ ಹೊಸ ನೀತಿಯನ್ನ ಜಾರಿಗೆ ತರುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಐಪ್ಯಾಡ್ ನೀಡುತ್ತೇವೆ. ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್ ಒದಗಿಸುತ್ತೇವೆ.  ನನ್ನ ಕರ್ನಾಟಕ ಜ್ಞಾನವಂತ ರಾಜ್ಯವಾಗಬೇಕು. ಆಗ ಮಾತ್ರ ಕರ್ನಾಟಕ ಕಲ್ಯಾಣ ಕರ್ನಾಟಕ ಆಗಲಿದೆ. ಕೊರೊನಾ ಸಂಕಷ್ಟದಿಂದ ಸರ್ಕಾರಕ್ಕೆ ಆರ್ಥಿಕ ಸಮಸ್ಯೆ ಇದೆ. ಆದರೆ ಹೊಸ ಯೋಜನೆಗಳಿಗೆ ಯಾವುದೇ ಸಮಸ್ಯೆ ಆಗಲ್ಲ. ರಾಷ್ಟ್ರೀಯ ಶಿಕ್ಷಣ ನೀತಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಶಿಕ್ಷಣಕ್ಕೆ ಮುಂದಿನ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ: ಶಾಲೆಗಳಿಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ; 1 ರಿಂದ 8ನೇ ತರಗತಿ ಆರಂಭದ ಬಗ್ಗೆಯೂ ಚರ್ಚೆ

ಕೊರೊನಾ ನಿರ್ವಹಣೆ, ನೆರೆಹಾನಿ ಕುರಿತು ಬಸವರಾಜ ಬೊಮ್ಮಾಯಿ ಸಭೆ; ನೆರೆಹಾನಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಲು ಸೂಚನೆ

Published On - 2:58 pm, Mon, 23 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!