AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ನೂತನ 9 ವಿಶ್ವವಿದ್ಯಾಲಯಗಳನ್ನು ವರ್ಚ್ಯುವಲ್ ಮೂಲಕ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ನಾವು ಐಐಟಿ ಮಾದರಿಯಲ್ಲಿ ಕೆಐಟಿ ಮಾಡುತ್ತೇವೆ. ನಮ್ಮ ವಿದ್ಯಾರ್ಥಿಗಳು ಐಐಟಿ ಮುಂದೆ ನಿಲ್ಲೋದು ಬೇಡ. ನಮ್ಮ ಕೆಐಟಿಗಳು, ಐಐಟಿ ಮಾದರಿಯಲ್ಲಿ ನಿರ್ಮಾಣವಾಗಬೇಕು ಎಂಬುದು ನಮ್ಮ ಉದ್ದೇಶ. ಈ ಹಿನ್ನೆಲೆ ವಿಶ್ವದ ಬೇರೆ ಬೇರೆ ವಿಶ್ವವಿದ್ಯಾಲಯಗಳ ಜೊತೆ ನಾವು ಒಡಂಬಡಿಕೆ ಮಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ತಿಳಿಸಿದರು.

Follow us
ವಿವೇಕ ಬಿರಾದಾರ
|

Updated on:Mar 28, 2023 | 11:15 AM

ಬೆಂಗಳೂರು: ನಮ್ಮ ಸರ್ಕಾರ ಶಿಕ್ಷಣ (Education) ಹಾಗೂ ಆರೋಗ್ಯಕ್ಕೆ (Health) ಹೆಚ್ಚು ಒತ್ತು ನೀಡಿದೆ. ಬಜೆಟ್‌ (Budget) ನಲ್ಲಿ ಕೂಡ ಶೇ 12 ರಷ್ಟು ಶಿಕ್ಷಣ ಮತ್ತು ಆರೋಗ್ಯಕ್ಕೆ ಮೀಸಲಾಗಿಟ್ಟಿದ್ದೇವೆ. ಸಚಿವ ಅಶ್ವತ್ಥ್ ನಾರಾಯಣ (Ashwath Narayan) ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ. ಒಬ್ಬ ರಾಜಕಾರಣಿಯ ಕಣ್ಣು ಮುಂದಿನ ಚುನಾವಣೆ ಮೇಲಿರುತ್ತದೆ. ಒಬ್ಬ ಮುತ್ಸದ್ಧಿಯ ಕಣ್ಣು ಮುಂದಿನ ಜನಾಂಗದ ಮೇಲಿರುತ್ತೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಅಶ್ವತ್ಥ್ ಉತ್ತಮ ಕೆಲಸ ಮಾಡಿದ್ದಾರೆ. ಅಶ್ವತ್ಥ್ ಕಾರಿಗೆ ಫಸ್ಟ್​, ಸೆಕೆಂಡ್ ಗೇರ್ ಇಲ್ಲ, ಏನಿದ್ದರೂ ಟಾಪ್ ಗೇರ್ ಎಂದು ಸಚಿವ ಅಶ್ವತ್ಥ್ ನಾರಾಯಣ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹಾಡಿಹೊಗಳಿದರು.

ಬೆಂಗಳೂರಿನ ಜ್ಞಾನಜ್ಯೋತಿ ವಿಶ್ವವಿದ್ಯಾನಿಲಯದಿಂದ ಸಭಾಂಗಣದಿಂದ ವರ್ಚ್ಯುವಲ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯಾದ್ಯಂತ 9 ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿದರು. ಮತ್ತು 7 ಇಂಜಿನಿಯರ್​​​ ಕಾಲೇಜುಗಳ ಉನ್ನತೀಕರಣಕ್ಕೆ ಚಾಲನೆ ನೀಡಿದರು. ಚಾಮರಾಜನಗರ, ಮಂಡ್ಯ, ಬೀದರ್​, ಕೊಡಗು, ಕೊಪ್ಪಳ, ಬಾಗಲಕೋಟೆ, ಹಾವೇರಿ,  ಕೋಲಾರ ಮತ್ತು ರಾಯಚೂರಲ್ಲಿ ನೂತನ ವಿಶ್ವವಿದ್ಯಾಲಯಗಳು ತೆಲೆ ಎತ್ತಿವೆ.

ಇದನ್ನೂ ಓದಿ: 30 ಸೆಕೆಂಡುಗಳಲ್ಲಿ ಹಾಲಿನ ಕಲಬೆರಕೆ ಪತ್ತೆ ಹಚ್ಚುವ ಸಾಧನ; ಐಐಟಿ ಮದ್ರಾಸ್ ಸಂಶೋಧಕರು ಆವಿಷ್ಕಾರ

ಕಾರ್ಯಕ್ರಮದಲ್ಲಿ ಸೇರಿದ ವಿದ್ಯಾರ್ಥಿಗಳು ಜೋಷ್‌ ನೋಡಿ ಇದು ನಮ್ಮ ಯುವಕರು, ಮತ್ತು ಇದು ನಮ್ಮ ಯುವಕರ ಶಕ್ತಿ. ಕರ್ನಾಟಕದ ಭವ್ಯ ಭವಿಷ್ಯ ಬರೆಯುವ ದಿನ ಎಂದು ಸಿಎಂ ಬೊಮ್ಮಾಯಿ ಖುಷಿಪಟ್ಟರು.

ವಿಶ್ವವಿದ್ಯಾಲಯಗಳನ್ನು ಹೊಸದು ಮಾಡಿದ ಹಾಗೆ, ನಾವು ಐಐಟಿ ಮಾದರಿಯಲ್ಲಿ ಕೆಐಟಿ ಮಾಡುತ್ತೇವೆ. ನಮ್ಮ ವಿದ್ಯಾರ್ಥಿಗಳು ಐಐಟಿ ಮುಂದೆ ನಿಲ್ಲೋದು ಬೇಡ. ನಮ್ಮ ಕೆಐಟಿಗಳು, ಐಐಟಿ ಮಾದರಿಯಲ್ಲಿ ನಿರ್ಮಾಣವಾಗಬೇಕು ಎಂಬುದು ನಮ್ಮ ಉದ್ದೇಶ. ಈ ಹಿನ್ನೆಲೆ ವಿಶ್ವದ ಬೇರೆ ಬೇರೆ ವಿಶ್ವವಿದ್ಯಾಲಯಗಳ ಜೊತೆ ನಾವು ಒಡಂಬಡಿಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು. ಇನ್ನು ಕಾರ್ಯಕ್ರಮದಲ್ಲಿ ಸಚಿವರಾದ ಅಶ್ವತ್ಥ್​​​ ನಾರಾಯಣ, ಮುರುಗೇಶ್​​ ನಿರಾಣಿ ಉಪಸ್ಥಿತರಿದ್ದರು.

ಚಾಮರಾಜನಗರ ವಿಶ್ವವಿದ್ಯಾಲಯಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಹೆಸರು ನಾಮಕರಣ ‌

ಚಾಮರಾಜನಗರ ವಿಶ್ವವಿದ್ಯಾಲಯ ಉದ್ಘಾಟನಾ  ಸಮಾರಂಭದಲ್ಲಿ ಶಾಸಕ ಪುಟ್ಟರಂಗಶೆಟ್ಟಿ , ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ನೂತನ ಉಪಕುಲಪತಿ ಪ್ರೊ ಗಂಗಾಧರ್ ಮೊದಲಾದವರು‌ ಭಾಗಿಯಾಗಿದ್ದರು. ಚಾಮರಾಜನಗರ ನೂತನ ವಿ.ವಿ.ಗೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಹೆಸರು ನಾಮಕರಣ ‌ಮಾಡಬೇಕು. ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ ನೂತನ ವಿ.ವಿ. ಉದ್ಘಾಟಿಸಿಬೇಕಿತ್ತು ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 am, Tue, 28 March 23

ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ