AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಸ್ಟ್​ ಕ್ಲಾಸ್​​ನಲ್ಲಿ ದ್ವಿತೀಯ ಪಿಯುಸಿ ಪಾಸಾದ ಹೈದರಾಬಾದ್​ನ ಸಯಾಮಿ ಅವಳಿಗಳು

ಸಯಾಮಿ ಅವಳಿ ಮಕ್ಕಳ ಸಾಧನೆಗೆ ಆದಿವಾಸಿ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸತ್ಯವತಿ ರಾಥೋಡ್ ಅಭಿನಂದಿಸಿದ್ದಾರೆ. ಅವಳಿ ಮಕ್ಕಳ ಉನ್ನತ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಫಸ್ಟ್​ ಕ್ಲಾಸ್​​ನಲ್ಲಿ ದ್ವಿತೀಯ ಪಿಯುಸಿ ಪಾಸಾದ ಹೈದರಾಬಾದ್​ನ ಸಯಾಮಿ ಅವಳಿಗಳು
ತೆಲಂಗಾಣದ ಸಯಾಮಿ ಅವಳಿಗಳುImage Credit source: News18
TV9 Web
| Edited By: |

Updated on: Jun 29, 2022 | 11:59 AM

Share

ಹೈದರಾಬಾದ್: ಹೈದರಾಬಾದ್ ಮೂಲದ ಸಯಾಮಿ ಅವಳಿ ಮಕ್ಕಳಾದ ವೀಣಾ ಮತ್ತು ವಾಣಿ ತೆಲಂಗಾಣದ (Telangana) ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ತೆಲಂಗಾಣ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ವೀಣಾ 1000 ಅಂಕಗಳಿಗೆ 712 ಅಂಕಗಳನ್ನು ಪಡೆದಿದ್ದಾರೆ. ವಾಣಿ 1000 ಅಂಕಗಳಿಗೆ 707 ಅಂಕಗಳನ್ನು ಪಡೆದಿದ್ದಾರೆ.

ಈ ಸಯಾಮಿ ಅವಳಿ ಮಕ್ಕಳ ಸಾಧನೆಗೆ ಆದಿವಾಸಿ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸತ್ಯವತಿ ರಾಥೋಡ್ ಅಭಿನಂದಿಸಿದ್ದಾರೆ. ಅವಳಿ ಮಕ್ಕಳ ಉನ್ನತ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸಲಿದೆ ಎಂದು ಅವರು ಭರವಸೆ ನೀಡಿದ್ದಾರೆ. ವೀಣಾ-ವಾಣಿ ತಮ್ಮ ಸಾಧನೆಯ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ತಾವಿಬ್ಬರೂ ಚಾರ್ಟೆಡ್ ಅಕೌಂಟೆಂಟ್ಸ್ (ಸಿಎ) ಆಗಲು ಬಯಸಿರುವುದಾಗಿ ತಿಳಿಸಿದ್ದಾರೆ. 2020ರಲ್ಲಿ 10ನೇ ತರಗತಿಯಲ್ಲಿ ವೀಣಾ 9.3 GPA ಮತ್ತು ವಾಣಿ 9.2 GPA ಗಳಿಸಿದ್ದರು.

ಇದನ್ನೂ ಓದಿ: Trending: ಒಂದೇ ದಿನ, ಒಂದೇ ಆಸ್ಪತ್ರೆಯಲ್ಲಿ ಗಂಡುಮಕ್ಕಳಿಗೆ ಜನ್ಮನೀಡಿದ ಅವಳಿ ಸಹೋದರಿಯರು!

ವೀಣಾ-ವಾಣಿ 2003ರಲ್ಲಿ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯಲ್ಲಿ ದಂಪತಿಗೆ ಅವಳಿ ಮಕ್ಕಳಾಗಿ ಜನಿಸಿದರು. ಅವರ ಚಿಕಿತ್ಸೆಗೆ ಹಣವಿಲ್ಲದ ಕಾರಣ ಅವರ ಪೋಷಕರು ಅವರನ್ನು ಕರೆದೊಯ್ಯಲು ನಿರಾಕರಿಸಿದ್ದರು. ಅವಳಿ ಮಕ್ಕಳನ್ನು 12 ವರ್ಷದವರೆಗೆ ನಿಲೋಫರ್ ಆಸ್ಪತ್ರೆಯಲ್ಲಿರಿಸಲಾಗಿತ್ತು. ನಂತರ ಅವರನ್ನು ಸ್ಟೇಟ್ ಹೋಮ್‌ಗೆ ಸ್ಥಳಾಂತರಿಸಲಾಯಿತು.

ವೈದ್ಯರು ಈ ಸಯಾಮಿ ಅವಳಿಗಳನ್ನು ಬೇರ್ಪಡಿಸಲು ಪ್ರಯತ್ನಿಸಿದರೂ ಯಶಸ್ವಿಯಾಗಲಿಲ್ಲ. ಭಾರತ, ಯುನೈಟೆಡ್ ಕಿಂಗ್‌ಡಮ್ ಮತ್ತು ಸಿಂಗಾಪುರದ ಹಲವಾರು ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಕ ತಜ್ಞರು ವರ್ಷಪೂರ್ತಿ ಈ ಅವಳಿಗಳನ್ನು ಬೇರ್ಪಡಿಸಲು ಪ್ರಯತ್ನಿಸಿದ್ದರು. ಈ ಆಪರೇಷನ್​ಗೆ ಸುಮಾರು 10 ಕೋಟಿ ರೂ. ವೆಚ್ಚವಾಗಲಿದೆ ಎಂದು ಈ ಹಿಂದೆ ಅಂದಾಜಿಸಲಾಗಿತ್ತು. ಆದರೂ ಅವರ ರಕ್ತನಾಳಗಳು ಸಿಕ್ಕಿಹಾಕಿಕೊಂಡಿರುವುದರಿಂದ ಆ ಆಪರೇಷನ್ ಅಪಾಯಕಾರಿಯಾಗಿದೆ ಎಂದು ಕೈಬಿಡಲಾಗಿತ್ತು.

ತೆಲಂಗಾಣದ ದ್ವಿತೀಯ ಪಿಯುಸಿಯಲ್ಲಿ ಒಟ್ಟು 4,42,895 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ವಿದ್ಯಾರ್ಥಿಗಳಲ್ಲಿ 67.82% ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೆ, 1,59,432 ವಿದ್ಯಾರ್ಥಿಗಳು ಎ ಗ್ರೇಡ್ ಗಳಿಸಿದ್ದಾರೆ.

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ