AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಠ ಪ್ರವಚನ ಮುಗಿದಿಲ್ಲ; ಪದವಿ ಪರೀಕ್ಷೆಗಳನ್ನು 1 ತಿಂಗಳು ಮುಂದೂಡಲು ವಿವಿಗಳಿಗೆ ಸೂಚನೆ

ಕೊರೊನಾ ಬಳಿಕ ಇದೀಗ ಹಿಜಾಬ್ ವಿವಾದ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಕರ್ನಾಟಕ ರಾಜ್ಯಾದಂತ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆ ಬಳಿಕ, ಇದೀಗ ಕಾಲೇಜು ಮತ್ತೆ ಆರಂಭವಾಗಿದೆ.

ಪಾಠ ಪ್ರವಚನ ಮುಗಿದಿಲ್ಲ; ಪದವಿ ಪರೀಕ್ಷೆಗಳನ್ನು 1 ತಿಂಗಳು ಮುಂದೂಡಲು ವಿವಿಗಳಿಗೆ ಸೂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 16, 2022 | 9:14 PM

Share

ಬೆಂಗಳೂರು: ಕೊರೊನಾ ಸೋಂಕು, ಒಮಿಕ್ರಾನ್ ಸೋಂಕು ಹೆಚ್ಚಳ, ಅತಿಥಿ ಉಪನ್ಯಾಸಕರ ಮುಷ್ಕರದಿಂದ ಪಾಠ ಪ್ರವಚನ ಮುಗಿದಿಲ್ಲ. ಹೀಗಾಗಿ ಪದವಿ ಪರೀಕ್ಷೆಗಳನ್ನು 1 ತಿಂಗಳು ಮುಂದೂಡಲು ವಿಶ್ವ ವಿದ್ಯಾಲಯಗಳಿಗೆ ಸೂಚನೆ ನೀಡಲಾಗಿದೆ. ವಿಶ್ವವಿದ್ಯಾಲಯಗಳ ವಿಸಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಎಸಿಎಸ್​ ಜಿ.ಕುಮಾರ್ ನಾಯಕ್ ಈ ಬಗ್ಗೆ ಸೂಚನೆ ನೀಡಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ವಿವಿಗಳ ಸೆಮಿಸ್ಟರ್ ಪರೀಕ್ಷೆ 1 ತಿಂಗಳ ಕಾಲ ಮುಂದೂಡಿ ಎಂದು ಉನ್ನತ ಶಿಕ್ಷಣ ಇಲಾಖೆ ಎಸಿಎಸ್ ತಿಳಿಸಿದ್ದಾರೆ.

ಕೊರೊನಾ ಬಳಿಕ ಇದೀಗ ಹಿಜಾಬ್ ವಿವಾದ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಕರ್ನಾಟಕ ರಾಜ್ಯಾದಂತ ಮೂರು ದಿನಗಳ ಕಾಲ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆ ಬಳಿಕ, ಇದೀಗ ಕಾಲೇಜು ಮತ್ತೆ ಆರಂಭವಾಗಿದೆ. ಆದರೂ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಮತ್ತೆ ಮೊದಲಿನಂತೆ ಆರಂಭವಾಗಿಲ್ಲ. ನಿಷೇಧಾಜ್ಞೆ ಜಾರಿಯಲ್ಲಿದೆ.

ಅಷ್ಟೇ ಅಲ್ಲದೆ, ಇಂದಿನಿಂದ ನಿಷೇಧಾಜ್ಞೆ ಜಾರಿ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಶಾಲಾ-ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಿ ಆದೇಶಿಸಲಾಗಿದೆ. ಇಂದಿನಿಂದ ಫೆಬ್ರವರಿ 23ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಇರಲಿದೆ. ಇಂದು ಚಿಕ್ಕಮಗಳೂರು ನಗರದ ಕಾಲೇಜುಗಳಲ್ಲಿ ಪ್ರತಿಭಟನೆಗಳು ನಡೆದಿದ್ದವು. ವಿದ್ಯಾರ್ಥಿನಿಯರು ಪ್ರತಿಭಟಿಸುವಾಗ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು. ಕಾಲೇಜು ಮುಂಭಾಗ ಬೃಹತ್ ಜನಸ್ತೋಮ, ಪೋಷಕರು ಸೇರಿದ್ದರು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. 144 ಸೆಕ್ಷನ್ ಜಾರಿ ಮಾಡಿ ಡಿಸಿ ಕೆ ಎನ್ ರಮೇಶ್ ಆದೇಶ ನೀಡಿದ್ದಾರೆ.

ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ವಿಜಯನಗರ ಜಿಲ್ಲೆಯ ಕಾಲೇಜುಗಳ ಬಳಿ ಕೂಡ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಆದೇಶ ನೀಡಿದ್ದಾರೆ. ಕಾಲೇಜು ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರಲಿದೆ.

ಇದನ್ನೂ ಓದಿ: Karnataka Hijab Row: ದುಪಟ್ಟಾವನ್ನೇ ಧರಿಸಲು ಅನುಮತಿಗೆ ಮನವಿ; ಹಿಜಾಬ್ ವಿವಾದ ವಿಚಾರಣೆ ನಾಳೆಗೆ ಮುಂದೂಡಿಕೆ

ಇದನ್ನೂ ಓದಿ: Karnataka Hijab Row: ಹಿಜಾಬ್ ಗಲಾಟೆ ನಡೆದ ಶಾಲೆಯಲ್ಲಿ ಮಕ್ಕಳಿಗೆ ಡಿಸಿ, ಎಸ್​ಪಿಯಿಂದ ಪಾಠ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ