AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CV Raman Fellowship: ಸಿವಿ ರಾಮನ್ ಫೆಲೋಶಿಪ್, ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುತ್ತಿದೆ ಸುವರ್ಣವಕಾಶ; ಕೂಡಲೇ ಅರ್ಜಿ ಸಲ್ಲಿಸಿ

ಭಾರತ ಮತ್ತು ಫ್ರಾನ್ಸ್‌ನ ಸಂಶೋಧನಾ ವಿದ್ಯಾರ್ಥಿಗಳಿಗೆ ಸಿ.ವಿ. ರಾಮನ್ ಫೆಲೋಶಿಪ್ ಅದ್ಭುತ ಅವಕಾಶ ನೀಡುತ್ತಿದೆ. ಪಿಎಚ್‌ಡಿ ಮತ್ತು ಮಾಸ್ಟರ್ಸ್ ವಿದ್ಯಾರ್ಥಿಗಳು ಭಾರತ ಅಥವಾ ಫ್ರಾನ್ಸ್‌ನಲ್ಲಿ ಸಂಶೋಧನೆ ನಡೆಸಲು ಅರ್ಜಿ ಸಲ್ಲಿಸಬಹುದು. ಭೂ ವಿಜ್ಞಾನ, ವಸ್ತು ವಿಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಫೆಲೋಶಿಪ್ ಲಭ್ಯವಿದೆ. ಅರ್ಜಿ ಸಲ್ಲಿಸಲು ಅಧಿಕೃತ ವೆಬ್​​​ಸೈಟ್​​ಗೆ ಭೇಟಿ ನೀಡಿ. ಗರಿಷ್ಠ ವಯಸ್ಸು 30 ವರ್ಷಗಳು.

CV Raman Fellowship: ಸಿವಿ ರಾಮನ್ ಫೆಲೋಶಿಪ್, ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುತ್ತಿದೆ ಸುವರ್ಣವಕಾಶ; ಕೂಡಲೇ ಅರ್ಜಿ ಸಲ್ಲಿಸಿ
Cv Raman Fellowship
ಅಕ್ಷತಾ ವರ್ಕಾಡಿ
|

Updated on: Mar 26, 2025 | 12:46 PM

Share

ನೀವು ವಿಜ್ಞಾನ ವಿದ್ಯಾರ್ಥಿಯಾಗಿದ್ದರೆ ಮತ್ತು ಸಂಶೋಧನೆಯಲ್ಲಿ ಆಸಕ್ತಿ ಹೊಂದಿದ್ದರೆ, ಸಿವಿ ರಾಮನ್ ಫೆಲೋಶಿಪ್ ನಿಮಗೆ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. ಭಾರತ ಮತ್ತು ಫ್ರಾನ್ಸ್‌ನ ಸಂಶೋಧನಾ ವಿದ್ಯಾರ್ಥಿಗಳ ನಡುವಿನ ವಿನಿಮಯವನ್ನು ಉತ್ತೇಜಿಸಲು ಈ ಫೆಲೋಶಿಪ್ ಅನ್ನು ಪ್ರಾರಂಭಿಸಲಾಗಿದೆ. ಇದನ್ನು ಸಿವಿ ರಾಮನ್ ಮತ್ತು ಫ್ರೆಂಚ್ ನೊಬೆಲ್ ಪ್ರಶಸ್ತಿ ವಿಜೇತ ಪ್ರೊಫೆಸರ್ ಜಾರ್ಜ್ ಚಾರ್ಪಕ್ ಅವರ ಗೌರವಾರ್ಥವಾಗಿ ಸ್ಥಾಪಿಸಲಾಗಿದೆ.

ಸಿ.ವಿ. ರಾಮನ್ ಫೆಲೋಶಿಪ್ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಭಾರತ ಅಥವಾ ಫ್ರಾನ್ಸ್‌ನ ವಿಶ್ವವಿದ್ಯಾಲಯಗಳು ಮತ್ತು ಸಂಶೋಧನಾ ಸಂಸ್ಥೆಗಳಲ್ಲಿ ತಮ್ಮ ಯೋಜನೆಯ ಒಂದು ಭಾಗವನ್ನು ಕೈಗೊಳ್ಳಲು ಅವಕಾಶವನ್ನು ನೀಡುತ್ತದೆ. ಇದು ಸಂಶೋಧನೆಯಲ್ಲಿ ಸಹಯೋಗವನ್ನು ಉತ್ತೇಜಿಸುವುದಲ್ಲದೆ, ವಿದ್ಯಾರ್ಥಿಗಳಿಗೆ ಎರಡೂ ದೇಶಗಳ ಸಾಂಸ್ಕೃತಿಕ ವೈವಿಧ್ಯತೆಯನ್ನು ಅನುಭವಿಸಲು ಅವಕಾಶವನ್ನು ನೀಡುತ್ತದೆ.

ಯಾರು ಅರ್ಜಿ ಸಲ್ಲಿಸಬಹುದು?

ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಶೋಧನಾ ಸಂಸ್ಥೆಯಲ್ಲಿ ನೋಂದಣಿಯಾಗಿರುವ ಭಾರತೀಯ ಅಥವಾ ಫ್ರೆಂಚ್ ಪಿಎಚ್‌ಡಿ ವಿದ್ಯಾರ್ಥಿಗಳು ಈ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸಲು ಅರ್ಹರು. ಇದಲ್ಲದೆ, ಫ್ರೆಂಚ್ ಮಾಸ್ಟರ್ ವಿದ್ಯಾರ್ಥಿಗಳು ಭಾರತದಲ್ಲಿ ಸಂಶೋಧನಾ ಕಾರ್ಯಕ್ಕೂ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಮಯದಲ್ಲಿ ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು. ಈ ಹಿಂದೆ CEFIPRA ನಿಂದ ಸಹಾಯ ಪಡೆದಿರುವ ಅಥವಾ ಈಗಾಗಲೇ ಶಾಶ್ವತ ಹುದ್ದೆಗಳಲ್ಲಿ ಉದ್ಯೋಗದಲ್ಲಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

ಇದನ್ನೂ ಓದಿ: ಗೂಗಲ್​ ವಿದ್ಯಾರ್ಥಿಗಳಿಗಾಗಿ ಕಲ್ಪಿಸುತ್ತಿದೆ ಸುರ್ವಣಾವಕಾಶ; ಸಮ್ಮರ್ ಇಂಟರ್ನ್‌ಶಿಪ್ ಪ್ರೋಗ್ರಾಂ ಈ ಕೂಡಲೇ ಅರ್ಜಿ ಸಲ್ಲಿಸಿ

ಯಾವ ಕ್ಷೇತ್ರಗಳಲ್ಲಿ ಫೆಲೋಶಿಪ್ ಲಭ್ಯವಿದೆ?

ಈ ಫೆಲೋಶಿಪ್ ಅಡಿಯಲ್ಲಿ ಹಲವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳು ಸೇರಿವೆ. ಇವುಗಳಲ್ಲಿ, ಭೂಮಿ ಮತ್ತು ಪರಿಸರ ವಿಜ್ಞಾನ, ವಸ್ತು ವಿಜ್ಞಾನ, ಭೌತಶಾಸ್ತ್ರ ಮತ್ತು ರಾಸಾಯನಿಕ ವಿಜ್ಞಾನಗಳು ಪ್ರಮುಖವಾದವು. ಈ ಕ್ಷೇತ್ರಗಳನ್ನು ಸಂಶೋಧನೆ ಮತ್ತು ನಾವೀನ್ಯತೆ ವಿಷಯದಲ್ಲಿ ಪ್ರಮುಖವೆಂದು ಪರಿಗಣಿಸಲಾಗುತ್ತದೆ ಮತ್ತು ವಿದ್ಯಾರ್ಥಿಗಳು ಅವುಗಳಲ್ಲಿ ಅತ್ಯುತ್ತಮ ಅವಕಾಶಗಳನ್ನು ಪಡೆಯಬಹುದು.

ಅರ್ಜಿ ಪ್ರಕ್ರಿಯೆ:

ಅರ್ಜಿ ಸಲ್ಲಿಸಲು, ನೀವು www.cefipra.org ನಲ್ಲಿ ನೋಂದಾಯಿಸಿಕೊಳ್ಳಬೇಕು. ಅರ್ಜಿ ಪ್ರಕ್ರಿಯೆಯು ಏಪ್ರಿಲ್/ಮೇ ತಿಂಗಳಲ್ಲಿ ಪ್ರಾರಂಭವಾಗಿ ಜೂನ್/ಜುಲೈನಲ್ಲಿ ಕೊನೆಗೊಳ್ಳುತ್ತದೆ. ಅರ್ಜಿಯೊಂದಿಗೆ, ಅಭ್ಯರ್ಥಿಯು ತನ್ನ ಸಿವಿ, ಫೋಟೋ, ಸಂಶೋಧನಾ ಪ್ರಸ್ತಾವನೆ, ಪಾಸ್‌ಪೋರ್ಟ್‌ನ ಸ್ಕ್ಯಾನ್ ಮಾಡಿದ ಪ್ರತಿ, ಪಿಎಚ್‌ಡಿ ನೋಂದಣಿ ಪ್ರಮಾಣಪತ್ರ, ಶಿಫಾರಸು ಪತ್ರ ಮತ್ತು ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಸಲ್ಲಿಸಬೇಕು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ