Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಎಷ್ಟೇ ರೂಲ್ಸ್ ಮಾಡಿದ್ರೂ ನೋ ಯೂಸ್​! ಸಿಇಟಿ ವಿದ್ಯಾರ್ಥಿಗಳದ್ದು ಅದೇ ರಾಗ, ಅದೇ ಹಾಡು

2025ನೇ ಸಾಲಿನ ಸಿಇಟಿ ಪರೀಕ್ಷೆಯ ಮೊದಲ ದಿನವೇ ಅನೇಕ ವಿದ್ಯಾರ್ಥಿಗಳು ಪರೀಕ್ಷಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕಟ್ಟುನಿಟ್ಟಿನ ನಿಯಮಗನ್ನು ಮಾಡಿದ್ದರೂ ಅನೇಕ ವಿದ್ಯಾರ್ಥಿಗಳು ಫುಲ್ ತೋಳಿನ ಶರ್ಟ್, ಗಡಿಯಾರ ಮತ್ತು ಆಭರಣಗಳನ್ನು ಧರಿಸಿಕೊಂಡು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು. ವಿದ್ಯಾರ್ಥಿಗಳನ್ನ ಪರೀಶೀಲನೆ ಮಾಡುವಷ್ಟರಲ್ಲಿ ಸಿಬ್ಬಂದಿಗಳು ಸುಸ್ತಾಗಿ ಹೋಗಿದ್ದಾರೆ.

ಕೆಇಎ ಎಷ್ಟೇ ರೂಲ್ಸ್ ಮಾಡಿದ್ರೂ ನೋ ಯೂಸ್​! ಸಿಇಟಿ ವಿದ್ಯಾರ್ಥಿಗಳದ್ದು ಅದೇ ರಾಗ, ಅದೇ ಹಾಡು
ಕೆಇಎ ಎಷ್ಟೇ ರೂಲ್ಸ್ ಮಾಡಿದ್ರೂ ನೋ ಯೂಸ್​! ಸಿಇಟಿ ವಿದ್ಯಾರ್ಥಿಗಳದ್ದು ಅದೇ ರಾಗ, ಅದೇ ಹಾಡು
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on:Apr 16, 2025 | 12:28 PM

ಬೆಂಗಳೂರು, ಏಪ್ರಿಲ್ 16: ನಿನ್ನೆಯಿಂದ 2025ರ ಸಿಇಟಿ (KCET) ಪರೀಕ್ಷೆಗಳು ಆರಂಭವಾಗಿದ್ದು, ಇಂದು ಮತ್ತು ನಾಳೆ ಕೂಡ ಪರೀಕ್ಷೆಗಳು ನಡೆಯಲಿವೆ. ಆದರೆ ಕೆಇಎ ಎಷ್ಟೇ ರೂಲ್ಸ್ ಮಾಡಿದರೂ ವಿದ್ಯಾರ್ಥಿಗಳದ್ದು (students) ಅದೇ ರಾಗ.. ಅದೇ ಹಾಡು ಎನ್ನುವಂತಾಗಿದೆ. ಮೊದಲ‌ ದಿನವೇ ಸಾಕಷ್ಟು ವಿದ್ಯಾರ್ಥಿಗಳು ರೂಲ್ಸ್ ಬ್ರೇಕ್ ಮಾಡಿದ್ದಾರೆ. ಫುಲ್ ತೋಳು ಶರ್ಟ್, ಮೊಬೈಲ್, ವಾಚ್, ಉಂಗುರ ಧರಿಸಿ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸಿದ್ದರು. ಸಿಬ್ಬಂದಿಗಳು ವಿದ್ಯಾರ್ಥಿಗಳನ್ನ ಪರೀಶೀಲನೆ ಮಾಡುವಷ್ಟರಲ್ಲಿ ಸುಸ್ತಾಗಿ ಹೋಗಿದ್ದಾರೆ.

ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ ಮತ್ತು ಯೋಗ ಹಾಗೂ ಬಿ.ಎಸ್ಸಿ ನರ್ಸಿಂಗ್​ ಮುಂತಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ನಡೆಸಲಾಗಿದೆ. ಇದೇ ಮೊದಲ ಬಾರಿಗೆ ಪೇಸಿಯಲ್ ಎಂಟ್ರಿ ಅಳವಡಿಕೆ ಮಾಡಲಾಗಿದೆ. ನಿನ್ನೆ ಹೊರಭಾಗ ಹಾಗೂ ಗಡಿನಾಡು ಕನ್ನಡಿಗರಿಗಾಗಿ ಕಡ್ಡಾಯ ಕನ್ನಡ ಪರೀಕ್ಷೆ ನಡೆದಿದೆ.

ಇದನ್ನೂ ಓದಿ: KCET Exam 2025: ಸಿಇಟಿ ಪರೀಕ್ಷೆ ಹಾಲ್ ಟಿಕೆಟ್​ ಬಿಡುಗಡೆ, ಆನ್​ಲೈನ್​ನಲ್ಲಿ ಡೌನ್‌ಲೋಡ್ ಮಾಡುವುದು ಹೇಗೆ?

ಇದನ್ನೂ ಓದಿ
Image
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
Image
KCET Exam ಹಾಲ್ ಟಿಕೆಟ್​ ಬಿಡುಗಡೆ, ಆನ್​ಲೈನ್​ನಲ್ಲಿ ಡೌನ್‌ಲೋಡ್ ಮಾಡಿ
Image
ಇನ್ಮುಂದೆ ಸಿಇಟಿ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ: ಕೆಇಎ ಹೊಸ ನಿಯಮ
Image
ಕೆಸಿಇಟಿ ಫಲಿತಾಂಶ 2024 ಗೊಂದಲಕ್ಕೆ ತೆರೆ ಎಳೆದ ಕೆಇಎ ನಿರ್ದೇಶಕ,ಹೇಳಿದಿಷ್ಟು

ಒಟ್ಟು ಈ ಬಾರಿ ಸಿಇಟಿ ಪರೀಕ್ಷೆಗೆ 3ಲಕ್ಷದ 31ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದಾರೆ. ಒಟ್ಟು 755 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನ ನಡೆಸಲಾಗುತ್ತಿದೆ. ಇಂದು 10:30 ರಿಂದ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2:30 ರಿಂದ ರಾಸಾಯನಶಾಸ್ತ್ರ, ಏಪ್ರೀಲ್ 17 ರಂದು ಬೆಳ್ಳಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವಶಾಸ್ತ್ರ ಪರೀಕ್ಷೆ ನಡೆಯಲ್ಲಿದೆ. ಆದರೆ ಕೆಇಎ ಎಷ್ಟೇ ರೂಲ್ಸ್ ಮಾಡಿದರೂ ವಿದ್ಯಾರ್ಥಿಗಳದ್ದು ಅದೇ ರಾಗ.. ಅದೇ ಹಾಡಾಗಿದೆ.

ಏಕೆಂದರೆ ಎಕ್ಸಾಂಗೆ ಸಾಕಷ್ಟು ರೂಲ್ಸ್ ಮಾಡಿದರೂ ರೂಲ್ಸ್ ಬ್ರೇಕ್ ಮಾಡಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಫುಲ್ ತೋಳು ಶರ್ಟ್, ಮೊಬೈಲ್, ವಾಚ್, ಉಂಗುರ ಧರಿಸಿ ವಿದ್ಯಾರ್ಥಿಗಳು ಬರುತ್ತಿದ್ದಾರೆ. ವಿದ್ಯಾರ್ಥಿಗಳ ಪರಿಶೀಲನೆ ನಡೆಸಿ ಪರೀಕ್ಷೆ ಹಾಲ್​ಗೆ ಕಳಿಸುವುದು ಕೆಇಎ ಅಧಿಕಾರಿಗಳಿಗೆ ದೊಡ್ಡ ತಲೆಬಿಸಿಯಾಗಿದೆ. ಮತ್ತೊಂದೆಡೆ ಕೆಇಎ ಕಠಿಣ ನಿಯಮಕ್ಕೆ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನೂ ಈ ಬಾರಿ ಸಿಇಟಿ ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳಲಾಗಿದೆ. ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷೆ ನಡೆಸಲಾಗುತ್ತಿದೆ. ಜೊತೆಗೆ ಫೇಸ್ ರೆಕಗ್ನೈಸೇಷನ್ ಮೂಲಕ ವಿದ್ಯಾರ್ಥಿಗಳ ಡಿಟೇಲ್ಸ್​​ ಪರಿಶೀಲಿಸಲಾಗುತ್ತಿದೆ. ಇನ್ನೂ ಪರೀಕ್ಷೆಗೆ ವಸ್ತ್ರ ಸಂಹಿತೆ ಕೂಡ ಜಾರಿ ಮಾಡಲಾಗಿತ್ತು. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಯಾವುದೇ ರೀತಿ ತುಂಬು ತೋಳಿನ ಶರ್ಟ್, ಜೀನ್ಸ್ ಪ್ಯಾಂಟ್, ಹೆಚ್ಚಿನ ಪ್ಯಾಕೇಟ್ ಇರುವ ಪ್ಯಾಂಟ್‌ಗಳನ್ನ ಧರಿಸುವಂತಿಲ್ಲ. ಜೊತೆಗೆ ಯಾವುದೇ ರೀತಿ ಮೆಟಲ್ ವಸ್ತುಗಳನ್ನ ಧರಿಸುವಂತಿಲ್ಲ ಎಂದು ಮೊದಲೇ ತಿಳಿಸಲಾಗಿತ್ತು. ಆದರೆ ಮೊದಲ ದಿನವೇ ವಿದ್ಯಾರ್ಥಿಗಳು ರೂಲ್ಸ್ ಬ್ರೇಕ್ ಮಾಡಿದ್ದಾರೆ.

ಇದನ್ನೂ ಓದಿ: ಪರೀಕ್ಷಾ ಪ್ರಾಧಿಕಾರದ ಎಡವಟ್ಟು, ಹಾಲ್​ ಟಿಕೆಟ್​​ನಲ್ಲಿ ಮಲ್ಲೇಶ್ವರಂ 18ನೇ ಕ್ರಾಸ್ ಬದಲು 13ನೇ ಕ್ರಾಸ್ ನಮೂದು!

ಪರೀಕ್ಷೆ ಬರೆಯಲು ಬಂದಿದ್ದ ಬಹುತೇಕ ವಿದ್ಯಾರ್ಥಿಗಳು ತುಂಬು ತೋಳಿನ ಶರ್ಟ್, ಜೀನ್ಸ್ ಪ್ಯಾಂಟ್ ಹಾಗೂ ಉಂಗುರ, ಓಲೆ ಸರ ಧರಿಸಿಕೊಂಡು ಬಂದಿದ್ದರು. ಪ್ರತಿಯೊಬ್ಬ ವಿದ್ಯಾರ್ಥಿಗಳನ್ನ ಪರೀಶೀಲಿಸಿ ಪರೀಕ್ಷಾ ಕೊಠಡಿಯೊಳಗೆ ಕಳುಹಿಸುವಷ್ಟರಲ್ಲಿ ಸಿಬ್ಬಂದಿ ನಿಜಕ್ಕೂ ಕೂಡ ಹರಸಾಹಸವನ್ನೇ ಪಟ್ಟರು. ಒಟ್ಟಿನಲ್ಲಿ ಮೊದಲನೇ ದಿನದ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಇನ್ನೂ ಎರಡು ದಿನಗಳ ಪರೀಕ್ಷೆ ಇದೆ ರೀತಿ ಕಟ್ಟುನಿಟ್ಟಿನ ಕ್ರಮಗಳಲ್ಲಿ ನಡೆಯಲಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:27 pm, Wed, 16 April 25

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್