AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಸ್​ಆರ್​ ನಿಧಿ ಮೂಲಕ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಮಾದರಿ ಸರಕಾರಿ ಶಾಲೆ ನಿರ್ಮಾಣ; ಡಿಕೆ ಶಿವಕುಮಾರ್​

ರಾಜ್ಯದ ಪ್ರತಿ ಜಿಲ್ಲೆಯ ತಾಲೂಕುಗಳಲ್ಲಿ ಮಾದರಿ ಸರಕಾರಿ ಶಾಲೆಗಳು ತಲೆ ಎತ್ತಲಿದ್ದು, ಶಿಕ್ಷಣಕ್ಕಾಗಿ ಬೆಂಗಳೂರಿಗೆ ಓಡಾಡುವ ಪರದಾಟ ತಪ್ಪಿಸಲು ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ಸಿಎಸ್​ಆರ್​ ನಿಧಿ ಮೂಲಕ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಮಾದರಿ ಸರಕಾರಿ ಶಾಲೆ ನಿರ್ಮಾಣ; ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 06, 2023 | 4:18 PM

Share

ರಾಮನಗರ,ಅ.06: ‘ನಮ್ಮ ಜಿಲ್ಲೆಗೆ ಇಂದು ಸಂತೋಷದ ದಿನ. ಗ್ರಾಮೀಣ ಪ್ರದೇಶದಲ್ಲಿ ಸಿಎಸ್​ಆರ್(CSR) ನಿಧಿ ಮೂಲಕ ರಾಜ್ಯದಲ್ಲಿ ಮಾದರಿ ಸರಕಾರಿ ಶಾಲೆ ಕಟ್ಟಬೇಕು ಎಂಬ ಉದ್ದೇಶ ಈಗ ಕುದೂರಿನ ಮೂಲಕ ನನಸಾಗಿದೆ ಎಂದು ಡಿಸಿಎಂ ಡಿ‌ಕೆ ಶಿವಕುಮಾರ್ (DK Shivakumar) ಹೇಳಿದರು. ರಾಮನಗರದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ‘288 ಶೌಚಾಲಯ ನಿರ್ಮಿಸಿದ್ದ ಟಯೋಟ ಸಂಸ್ಥೆ, ಈಗ ಶಾಲೆಗಳಿಗಾಗಿ 16 ಕೋಟಿ ವೆಚ್ಚ ಮಾಡಲು ಮುಂದೆ ಬಂದಿದೆ. ಹೀಗಾಗಿ ಇಲ್ಲಿ ಐದು ಕೋಟಿ‌ ವೆಚ್ಚದಲ್ಲಿ ಕೆಪಿಎಸ್ ಶಾಲೆ ನಿರ್ಮಾಣಗೊಳ್ಳಲಿದೆ ಎಂದರು.

ಪ್ರತಿ ತಾಲೂಕಿನಲ್ಲಿಯು ಇಂತಹ ಶಾಲೆಗಳು ತಲೆ ಎತ್ತಲಿವೆ

ಇದೊಂದೆ ಅಲ್ಲ, ಜಿಲ್ಲೆಯ ಪ್ರತಿ ತಾಲೂಕಿನಲ್ಲಿಯು ಇಂತಹ ಶಾಲೆಗಳು ತಲೆ ಎತ್ತಲಿವೆ. ಶಿಕ್ಷಣಕ್ಕಾಗಿ ಬೆಂಗಳೂರಿಗೆ ಓಡಾಡುವ ಪರದಾಟ ತಪ್ಪಿಸಲು ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಇನ್ನು ರಾಜ್ಯದಲ್ಲಿನ ಎಲ್ಲ ಕಾರ್ಖಾನೆಗಳು ಈ ವರ್ಷ ಎರಡು ಸಾವಿರ ಶಾಲೆ ನಿರ್ಮಿಸುವಂತೆ ಮನವಿ ಮಾಡಿದ್ದಾರೆ. ಇದರ ಜೊತೆಗೆ ಶಿಕ್ಷಕರ ಕೊರತೆಯನ್ನು ನಿಗಿಸುವ ಕೆಲಸವನ್ನು ಸರಕಾರ ಮಾಡಲಿದೆ ಎಂದು ಹೇಳಿದರು.

ಇದನ್ನೂ ಓದಿ:ಬೀದರ್: ಶಾಲೆ ಕಿರಿದಾದರೂ ಸಾಧನೆ ಹಿರಿದು: ಸರಕಾರಿ ಶಾಲೆಯ‌ ಆವರಣದಲ್ಲಿ ಕಿರು ಉದ್ಯಾನವನ

ಇನ್ನು ಇದೇ ವೇಳೆ ರಾಮನಗರ ಉಸ್ತುವಾರಿ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ ‘ ಪ್ರತೀ ಗ್ರಾಮ ಪಂಚಾಯತಿ ಮಟ್ಟದಲ್ಲಿ ಉತ್ತಮ ಶಾಲೆ ಆಗಬೇಕು ಎಂದು ನಿನ್ನೆಯಷ್ಟೇ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದರು. ಇವತ್ತು ರಾಮನಗರ ಜಿಲ್ಲೆಯಲ್ಲಿ ಶಂಕುಸ್ಥಾಪನೆ ಮಾಡಿದ್ದಾರೆ.  ಇಡೀ ರಾಜ್ಯದಲ್ಲಿ ಪ್ರತೀ ಪಂಚಾಯತಿ ಮಟ್ಟದಲ್ಲಿ ಶಾಲೆ ಮಾಡುವ ಗುರಿ ಇದಾಗಿದೆ ಎಂದರು.

ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಒಂದು ವಿಡಿಯೋ ನೋಡಿದ್ದೆ, ಅವರು ಉತ್ತಮ ಶಾಲೆ ಮಾಡೋದಾದ್ರೆ, ನಾವು ಯಾಕೆ ಮಾಡೋಕ್ಕಾಗಲ್ಲ ಅಂದುಕೊಂಡೆ. ಇವತ್ತು ಸಿಎಸ್ಆರ್ ಫಂಡ್​ನಲ್ಲಿ ಮಾಡಲಾಗುತ್ತಿದೆ. ಇದೊಂದೆ ಅಲ್ಲ, ಇಡೀ ರಾಜ್ಯದಲ್ಲಿ ಈ ರೀತಿಯ ಹೈಟೆಕ್ ಶಾಲೆ ಮಾಡಲಾಗುತ್ತಿದೆ. ಇನ್ನು ನಾವು ಚುನಾವಣೆ ಮುಂಚೆ ಶಕ್ತಿ ಯೋಜನೆ ಹೇಳಿದಾಗ ಮಾಡ್ತಾರಾ? ಎನ್ನುವ ಮಾತು ಬಂದಿತ್ತು. ಸರ್ಕಾರ ಬಂದ 15 ದಿನಗಳಲ್ಲಿ ಶಕ್ತಿ ಯೋಜನೆ ಜಾರಿಗೆ ಬಂತು. ಇದುವರೆಗೂ 74 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ವಿರೋಧ ಪಕ್ಷಗಳು ಏನೇ ಹೇಳಿಕೊಳ್ಳಲಿ, ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!