AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2026: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ ಯಾಕೆ ಗೊತ್ತೇ? ಅಸಲಿ ಕಾರಣ ಬಹಿರಂಗ!

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮುಂದೂಡಿಕೆಯಾಗಿರುವುದು ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳು, ಪೋಷಕರ ನಿರಾಸೆಗೆ ಕಾರಣವಾಗಿದೆ. ಸದ್ಯ, ಫಲಿತಾಂಶ ಪ್ರಕಟಿಸಲು ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಕೆಎಸ್ಇಎಬಿ ಪತ್ರ ಬರೆದಿದೆ. ಅನುಮತಿ ಸಿಕ್ಕ ಕೂಡಲೇ ಸೆಕೆಂಡ್ ಪಿಯುಸಿ ರಿಸಲ್ಟ್ ಘೋಷಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಫಲಿತಾಂಶ ಮುಂದೂಡಿಕೆಗೆ ಕಾರಣ ಏನೆಂಬ ಮಾಹಿತಿ ಇಲ್ಲಿದೆ.

Karnataka 2nd PUC Result 2026: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ ಯಾಕೆ ಗೊತ್ತೇ? ಅಸಲಿ ಕಾರಣ ಬಹಿರಂಗ!
ಸಾಂದರ್ಭಿಕ ಚಿತ್ರImage Credit source: Google
ಗಣಪತಿ ಶರ್ಮಾ
| Edited By: |

Updated on:Apr 07, 2026 | 7:52 AM

Share

ಬೆಂಗಳೂರು, ಏಪ್ರಿಲ್ 7: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd Puc Result) ಇಂದು (ಏಪ್ರಿಲ್ 7) ಪ್ರಕಟವಾಗಲಿದೆ ಎಂದು ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಿರಾಸೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿದೆ. ಆದರೆ, ಫಲಿತಾಂಶ ಪ್ರಕಟಿಸುವುದನ್ನು ಮುಂದೂಡಿಕೆ ಮಾಡಲು ಅಸಲಿ ಕಾರಣ ಏನೆಂಬುದು ಈಗ ಬಹಿರಂಗವಾಗಿದೆ.

ಚುನಾವಣಾ ನೀತಿ ಸಂಹಿತೆ ಅಡ್ಡಿ

ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ಏಪ್ರಿಲ್ 9ರಂದು ಮತದಾನ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಸಾಮಾನ್ಯವಾಗಿ ಫಲಿತಾಂಶವನ್ನು ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಾಗುತ್ತದೆ. ಆದರೆ, ನೀತಿ ಸಂಹಿತೆ ಇರುವುದರಿಂದ ಸಚಿವರು ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗದಿಂದ ಅನುಮತಿ ಪಡೆಯಬೇಕಾಗುತ್ತದೆ.

ಚುನಾವಣಾ ಆಯೋಗದ ಅನುಮತಿಗೆ ಕಾಯುತ್ತಿರುವ ಮಂಡಳಿ

ಫಲಿತಾಂಶ ಪ್ರಕಟಿಸಲು ಅನುಮತಿ ಕೋರಿ ಕೆಎಸ್ಇಎಬಿ ಈಗಾಗಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಆಯೋಗವು ಅನುಮತಿ ನೀಡಿದ ತಕ್ಷಣವೇ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲು ಮಂಡಳಿ ಸರ್ವ ಸಿದ್ಧತೆ ಮಾಡಿಕೊಂಡಿದೆ. 2018 ಮತ್ತು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಅಧಿಕಾರಿಗಳ ಮೂಲಕ ಫಲಿತಾಂಶ ಪ್ರಕಟಿಸಲಾಗಿತ್ತು. ಆದರೆ ಈ ಬಾರಿ ಆಯೋಗದ ಒಪ್ಪಿಗೆ ಸಿಗದ ಕಾರಣ ಅನಿವಾರ್ಯವಾಗಿ ವಿಳಂಬವಾಗಿದೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಆನ್​ಲೈನ್​ನಲ್ಲಿ ನೋಡುವುದು ಹೇಗೆ?

ಸೆಕೆಂಟ್ ಪಿಯುಸಿ ಫಲಿತಾಂಶ ಪ್ರಕಟವಾದ ನಂತರ ಆನ್​ಲೈನ್​ನಲ್ಲಿ ನೋಡುವುದು ಹೇಗೆಂಬ ಮಾಹಿತಿ ಇಲ್ಲಿದೆ.

  • ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.
  • ಭವಿಷ್ಯದ ಉಲ್ಲೇಖಕ್ಕಾಗಿ ಇದರ ಪ್ರಿಂಟ್‌ಔಟ್ ತೆಗೆದುಕೊಳ್ಳಿ.

ಇದನ್ನೂ ಓದಿ: ದ್ವಿತೀಯ ಪಿಯು ಫಲಿತಾಂಶದ ಬಗ್ಗೆ ಬಿಗ್​ ಅಪ್​ಡೇಟ್, ವಿದ್ಯಾರ್ಥಿಗಳಿಗೆ-ಪೋಷಕರಿಗೆ ನಿರಾಸೆ

ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದಿದ್ದ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇಲಾಖೆಯು ನಿಗದಿತ ಗುರಿಯಂತೆ ಮೌಲ್ಯಮಾಪನ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಮುಗಿಸಿದೆ. ಆಯೋಗದಿಂದ ಒಪ್ಪಿಗೆ ಸಿಕ್ಕ ಕೂಡಲೇ ಫಲಿತಾಂಶ ಪ್ರಕಟ ಮಾಡಲಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:10 am, Tue, 7 April 26

Follow Us
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?