AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BC Nagesh: ಸಂಘರ್ಷ ಪರಿಸ್ಥಿತಿ ಉದ್ಭವಿಸಿದರೆ ಶಾಲಾ ಕಾಲೇಜುಗಳಿಗೆ ರಜೆ ಕೊಡಿ: ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಟ್ಟ ಕರ್ನಾಟಕ ಸರ್ಕಾರ

ರ್ನಾಟಕದಲ್ಲಿ ಸುಮಾರು ಐದು ಸಾವಿರ ಪಿಯು ಕಾಲೇಜುಗಳಿವೆ. ಈ ಪೈಕಿ ಕೇವಲ 10ರಿಂದ 12 ಕಾಲೇಜುಗಳಲ್ಲಿ ಸಂಘರ್ಷ ಉಂಟಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ (BC Nagesh) ಹೇಳಿದರು.

BC Nagesh: ಸಂಘರ್ಷ ಪರಿಸ್ಥಿತಿ ಉದ್ಭವಿಸಿದರೆ ಶಾಲಾ ಕಾಲೇಜುಗಳಿಗೆ ರಜೆ ಕೊಡಿ: ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಟ್ಟ ಕರ್ನಾಟಕ ಸರ್ಕಾರ
ಶಿಕ್ಷಣ ಸಚಿವ ಬಿ ಸಿ ನಾಗೇಶ್ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 08, 2022 | 4:13 PM

Share

ಬೆಂಗಳೂರು: ಕರ್ನಾಟಕದಲ್ಲಿ ಸುಮಾರು ಐದು ಸಾವಿರ ಪಿಯು ಕಾಲೇಜುಗಳಿವೆ. ಈ ಪೈಕಿ ಕೇವಲ 10ರಿಂದ 12 ಕಾಲೇಜುಗಳಲ್ಲಿ ಸಂಘರ್ಷ ಉಂಟಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ (BC Nagesh) ಹೇಳಿದರು. ಕಾನೂನು ಸುವ್ಯವಸ್ಥೆ ಸಮಸ್ಯೆಯಾಗಿರುವ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಗಳಿಗೆ ನೀಡಲಾಗಿದೆ. ಈಗಲೂ ರಾಜ್ಯದೆಲ್ಲೆಡೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಲೇ ಇವೆ. ಕೆಲವು ಕಡೆ ಯೂನಿಫಾರ್ಮ್ ಹಾಕಿಕೊಂಡು ಕಾಲೇಜುಗಳಿಗೆ ಬರುತ್ತಿದ್ದಾರೆ.  ಅಂಥ ಕಾಲೇಜುಗಳಲ್ಲಿ ಹಿಜಾಬ್ (Hijab) ಮತ್ತು ಕೇಸರಿ ಶಾಲು (Saffron Shawl) ವಿವಾದ ಉದ್ಭವಿಸಿಲ್ಲ. ಬಿಜಾಪುರ, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ಕೆಲವು ಕಡೆ ಮಾತ್ರ ಸಂಘರ್ಷ ಉಂಟಾಗಿದೆ ಎಂದು ಅವರು ವಿವರಿಸಿದರು.

ಜಿಲ್ಲೆಗಳ ಸ್ಥಿತಿಗತಿ ನೋಡಿಕೊಂಡು, ಡಿಡಿಪಿಐ ಸಲಹೆ ಪಡೆದು ಎರಡು ಮೂರು ದಿನ ರಜೆ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಕೊವಿಡ್ ಕಾರಣದಿಂದ ಮಕ್ಕಳ ಶಿಕ್ಷಣಕ್ಕೆ ಈಗಾಗಲೇ ಹಿನ್ನಡೆ ಉಂಟಾಗಿದೆ. ಇದೀಗ ಮತ್ತೊಂದು ಕಾರಣಕ್ಕೆ ಶಿಕ್ಷಣಕ್ಕೆ ತೊಂದರೆಯಾಗಬಾರದು. ಮಕ್ಕಳು ಶಾಂತಿಯುತವಾಗಿ ಸಮವಸ್ತ್ರದಲ್ಲಿ ಬಂದು ಪರೀಕ್ಷೆ ಬರೆಯಬೇಕು ಎಂದು ಸೂಚಿಸಿದರು.

ರಾಷ್ಟ್ರಧ್ವಜ ಇಳಿಸಿ ಕೇಸರಿಧ್ವಜ ಹಾರಿಸಿದ್ದರೆ ಅದು ಖಂಡನೀಯ ಬೆಳವಣಿಗೆ. ಅಲ್ಲಿನ ಅಧಿಕಾರಿಗಳ ವರದಿ ತರಿಸಿಕೊಂಡು ತೀರ್ಮಾನ ಮಾಡುತ್ತೇವೆ. ಇಂಥ ಘಟನೆಗಳಿಂದ ಮಕ್ಕಳು ಖಂಡಿತ ಆತಂಕ್ಕೊಳಗಾಗುತ್ತಾರೆ. ಶಾಂತಿ ಕದಡುವುದು, ಕಾನೂನು ಸುವ್ಯವಸ್ಥೆಯನ್ನು ಕೈಗೆತ್ತಿಕೊಳ್ಳುವುದು ತಪ್ಪು. ಅಂಥ ಕೆಲಸವನ್ನು ಯಾರೂ ಮಾಡಬಾರದು. ಸರ್ಕಾರ ಎಲ್ಲ ಕಡೆ ಆ್ಯಕ್ಷನ್ ತೆಗೆದುಕೊಂಡಿದೆ. ಉಡುಪಿಯಲ್ಲಿ 20 ದಿನಕ್ಕೂ ಹೆಚ್ಚು ಕಾಲ ನಾವು ಶಾಂತಿ ಕಾಪಾಡಿದ್ದೆವು. ಉಡುಪಿಯ 9 ಪಿಯು ಕಾಲೇಜುಗಳಿಗೆ ವಿವಾದ ಹಬ್ಬಿರಲಿಲ್ಲ ಎಂದು ಹೇಳಿದರು.

ಮಕ್ಕಳು ಕೇವಲ ಹಿಜಾಬ್​​ಗೆ ಮಾತ್ರ ಬೇಡಿಕೆ ಇಟ್ಟಿಲ್ಲ. ಕೆಲ ಮಕ್ಕಳು ಶಾಲೆಯಲ್ಲಿ ನಮಾಜ್ ಮಾಡಲೂ ಅವಕಾಶ ಕೇಳಿದ್ದಾರೆ. ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ಕೆಲವು ರಾಜಕೀಯ ನಾಯಕರು ಈ ಘಟನೆಗೆ ತುಪ್ಪ ಸುರಿದು ಶಕ್ತಿ ತುಂಬಿದರು. ಇದರಿಂದ ಎಲ್ಲ ಕಡೆ ವಿವಾದ ಹರಡಿದೆ. ಪಾಕಿಸ್ತಾನ ಅಥವಾ ಬೇರೆ ಯಾವುದೇ ಪ್ರಚೋದನಾತ್ಮಕ ವಿಚಾರಗಳನ್ನು ಈ ವೇಳೆ ಪ್ರಸ್ತಾಪಿಸಬಾರದು. ವಿವಾದ ಬೆಳೆಸಲು ಎಸ್​ಡಿಪಿಐ ಸಂಘಟನೆ ಕಾರಣ ಅಂತ ಕೆಲ ವರದಿಗಳಿಂದ ತಿಳಿದು ಬಂದಿದೆ. ಇದರ ಬಗ್ಗೆ ತನಿಖೆ ಆಗಬೇಕು ಎಂದು ಸೂಚಿಸಿದರು.

ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಕು ಎನ್ನುವುದು ಬಿಜೆಪಿಯ ಉದ್ದೇಶವಾಗಿದ್ದರೆ ಉಡುಪಿಯಲ್ಲಿ ಒಂದು ತಿಂಗಳು ಶಾಂತಿಯನ್ನು ತಣ್ಣಗೆ ಕಾಪಾಡುತ್ತಿರಲಿಲ್ಲ. ಹಿಜಾಬ್ ಬೇಕೇಬೇಕು ಎಂಬುದು ನಿಮ್ಮ ನಿಲುವಾಗಿದ್ದರೆ ಆನ್​ಲೈನ್ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅಲ್ಲಿನ ಎಸ್​ಡಿಎಂ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ ಎಂದು ವಿವರಿಸಿದರು.

ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ವ್ಯಾಪಕವಾಗಿ ಹಬ್ಬುವುದರ ಹಿಂದೆ ಯಾರದೋ ಪ್ರಚೋದನೆ ಇದೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ತನಿಖೆ ಆಗಬೇಕು ಎನ್ನುವುದು ಸರ್ಕಾರದ ನಿಲುವು. ಆದರೆ ಈವರೆಗೆ ಆದೇಶ ಹೊರಡಿಸಿಲ್ಲ ಎಂದರು.

ಇದನ್ನೂ ಓದಿ: Hijab Row: ಶಿವಮೊಗ್ಗದಲ್ಲಿ ತಾರಕಕ್ಕೇರಿದ ಕೇಸರಿ ಶಾಲು- ಹಿಜಾಬ್ ಗಲಾಟೆ; ರಾಷ್ಟ್ರಧ್ವಜ ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ ವಿದ್ಯಾರ್ಥಿ ಇದನ್ನೂ ಓದಿ: Hijab: ಕರ್ನಾಟಕದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ, ಮಂಗಳೂರು, ಹಾಸನ, ಹರಿಹರದಲ್ಲಿ ಪ್ರತಿಭಟನೆ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್