AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸಂಜೆ ಇಂಜಿನಿಯರಿಂಗ್‌ ಕಾಲೇಜುಗಳು ಕ್ಲೋಸ್‌; ರೆಗ್ಯುಲರ್ ಕಾಲೇಜು ಜತೆ ಸಂಜೆ ಕಾಲೇಜುಗಳ ಸಂಯೋಜನೆ

ಇಂಜಿನಿಯರಿಂಗ್ ಶಿಕ್ಷಣದ ಗುಣಮಟ್ಟದ ಮೇಲೆ ಪ್ರಭಾವ ಹಾಗೂ ಈ ಸಂಜೆಗಳ ಖರ್ಚು ದುಬಾರಿ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. 2020-21ನೇ ಶೈಕ್ಷಣಿಕ ವರ್ಷದಿಂದಲೇ ಸಂಜೆ ಕಾಜೇಜುಗಳು ಕ್ಲೋಸ್ ಆಗಲಿದೆ.

ಕರ್ನಾಟಕದಲ್ಲಿ ಸಂಜೆ ಇಂಜಿನಿಯರಿಂಗ್‌ ಕಾಲೇಜುಗಳು ಕ್ಲೋಸ್‌; ರೆಗ್ಯುಲರ್ ಕಾಲೇಜು ಜತೆ ಸಂಜೆ ಕಾಲೇಜುಗಳ ಸಂಯೋಜನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 29, 2021 | 3:22 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸಂಜೆ ಇಂಜಿನಿಯರಿಂಗ್‌ ಕಾಲೇಜುಗಳು ಕ್ಲೋಸ್‌ ಆಗಲಿದೆ. AICTE ಆದೇಶದಂತೆ ರಾಜ್ಯದ 12 ಸಂಜೆ ಕಾಲೇಜು ಬಂದ್ ಆಗಲಿದೆ. ಆಲ್ ಇಂಡಿಯಾ ಕೌನ್ಸೆಲಿಂಗ್ ಫಾರ್ ಟೆಕ್ನಿಕಲ್ ಎಜುಕೇಷನ್‌ ಆದೇಶದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸಂಜೆ ಕಾಲೇಜುಗಳು ಬಂದ್ ಆಗಲಿದೆ ಎಂದು ಹೇಳಲಾಗಿದೆ. ರೆಗ್ಯುಲರ್ ಕಾಲೇಜು ಜತೆ ಸಂಜೆ ಕಾಲೇಜುಗಳ ಸಂಯೋಜನೆ ಮಾಡಲಾಗುತ್ತದೆ. ಮುಂದೆ ಸಂಜೆ ಕಾಲೇಜುಗಳಲ್ಲಿ 5, 6, 7, 8ನೇ ಸೆಮಿಸ್ಟರ್‌ಗೆ ಮಾತ್ರ ಕ್ಲಾಸ್‌ ನಡೆಸಲಾಗುವ ಬಗ್ಗೆ ತಿಳಿಸಲಾಗಿದೆ.

ಸಂಜೆ ಇಂಜಿನಿಯರಿಂಗ್ ಕಾಲೇಜು ಕ್ಲೋಸ್ ಆಗುತ್ತಿರುವ ಹಿನ್ನೆಲೆಯಲ್ಲಿ ಡಿಪ್ಲೊಮಾ ಅಭ್ಯರ್ಥಿಗಳಿಗೆ ಸಂಕಷ್ಟ ಎದುರಾದಂತಾಗಿದೆ. ಇಂಜಿನಿಯರಿಂಗ್ ಶಿಕ್ಷಣದ ಗುಣಮಟ್ಟದ ಮೇಲೆ ಪ್ರಭಾವ ಹಾಗೂ ಈ ಸಂಜೆಗಳ ಖರ್ಚು ದುಬಾರಿ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. 2020-21ನೇ ಶೈಕ್ಷಣಿಕ ವರ್ಷದಿಂದಲೇ ಸಂಜೆ ಕಾಜೇಜುಗಳು ಕ್ಲೋಸ್ ಆಗಲಿದೆ. ರಾಜ್ಯದ 12 ಇಂಜಿನಿಯರಿಂಗ್ ಕಾಲೇಜುಗಳ ಬಂದ್ ಗೆ ಸೂಚನೆ ನೀಡಲಾಗಿದೆ.

ಬಂದ್ ಆಗಲಿರುವ ಸಂಜೆ ಎಂಜಿನಿಯರಿಂಗ್ ಕಾಲೇಜುಗಳ ವಿವರ ಹೀಗಿದೆ: – ಬಿಎಂಎಸ್ ಸಂಜೆ ಎಂಜಿನಿಯರಿಂಗ್ ‌ಕಾಲೇಜು, ಬೆಂಗಳೂರು – ಎಸ್ ಕೆಎಸ್ ಜೆಟಿಐ ಬೆಂಗಳೂರು – ಯುವಿಸಿಇ ಸಂಜೆ ಕಾಲೇಜು, ಬೆಂಗಳೂರು – ಜೈನ್ ಕಾಲೇಜು ಎಂಜಿನಿಯರಿಂಗ್, ಬೆಳಗಾವಿ – ಕೆ.ಎಲ್.ಎಸ್ ಗೋತೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಳಗಾವಿ – ಬಿಎಲ್ ಡಿಇ ಎಎಸ್ ವಿ.ಪಿ ಡಾ.ಪಿ.ಜಿ ಹಳಕಟ್ಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ವಿಜಯಪುರ – ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಟೆಕ್ನಾಲಜಿ – ಎ.ಶ್ಯಾಮರಾವ್ ಫೌಂಡೇಷನ್, ಶ್ರೀನಿವಾಸ್ ಸ್ಕೂಲ್ ಆಫ್ ಎಂಜಿನಿಯರಿಂಗ್ – ಪಿ.ಎ.ಕಾಲೇಜು ಆಫ್ ಎಂಜಿನಿಯರಿಂಗ್, ಮಂಗಳೂರು – ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ – ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು‌ – ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು, ಮಂಗಳೂರು

ಇದನ್ನೂ ಓದಿ: ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ

ಇದನ್ನೂ ಓದಿ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಪಿಠೋಪಕರಣಗಳ ವ್ಯವಸ್ಥೆ ಮಾಡಿ: ಹೆಚ್​ಡಿ ರೇವಣ್ಣ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ