AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸಂಜೆ ಇಂಜಿನಿಯರಿಂಗ್‌ ಕಾಲೇಜುಗಳು ಕ್ಲೋಸ್‌; ರೆಗ್ಯುಲರ್ ಕಾಲೇಜು ಜತೆ ಸಂಜೆ ಕಾಲೇಜುಗಳ ಸಂಯೋಜನೆ

ಇಂಜಿನಿಯರಿಂಗ್ ಶಿಕ್ಷಣದ ಗುಣಮಟ್ಟದ ಮೇಲೆ ಪ್ರಭಾವ ಹಾಗೂ ಈ ಸಂಜೆಗಳ ಖರ್ಚು ದುಬಾರಿ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. 2020-21ನೇ ಶೈಕ್ಷಣಿಕ ವರ್ಷದಿಂದಲೇ ಸಂಜೆ ಕಾಜೇಜುಗಳು ಕ್ಲೋಸ್ ಆಗಲಿದೆ.

ಕರ್ನಾಟಕದಲ್ಲಿ ಸಂಜೆ ಇಂಜಿನಿಯರಿಂಗ್‌ ಕಾಲೇಜುಗಳು ಕ್ಲೋಸ್‌; ರೆಗ್ಯುಲರ್ ಕಾಲೇಜು ಜತೆ ಸಂಜೆ ಕಾಲೇಜುಗಳ ಸಂಯೋಜನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 29, 2021 | 3:22 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸಂಜೆ ಇಂಜಿನಿಯರಿಂಗ್‌ ಕಾಲೇಜುಗಳು ಕ್ಲೋಸ್‌ ಆಗಲಿದೆ. AICTE ಆದೇಶದಂತೆ ರಾಜ್ಯದ 12 ಸಂಜೆ ಕಾಲೇಜು ಬಂದ್ ಆಗಲಿದೆ. ಆಲ್ ಇಂಡಿಯಾ ಕೌನ್ಸೆಲಿಂಗ್ ಫಾರ್ ಟೆಕ್ನಿಕಲ್ ಎಜುಕೇಷನ್‌ ಆದೇಶದಂತೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸಂಜೆ ಕಾಲೇಜುಗಳು ಬಂದ್ ಆಗಲಿದೆ ಎಂದು ಹೇಳಲಾಗಿದೆ. ರೆಗ್ಯುಲರ್ ಕಾಲೇಜು ಜತೆ ಸಂಜೆ ಕಾಲೇಜುಗಳ ಸಂಯೋಜನೆ ಮಾಡಲಾಗುತ್ತದೆ. ಮುಂದೆ ಸಂಜೆ ಕಾಲೇಜುಗಳಲ್ಲಿ 5, 6, 7, 8ನೇ ಸೆಮಿಸ್ಟರ್‌ಗೆ ಮಾತ್ರ ಕ್ಲಾಸ್‌ ನಡೆಸಲಾಗುವ ಬಗ್ಗೆ ತಿಳಿಸಲಾಗಿದೆ.

ಸಂಜೆ ಇಂಜಿನಿಯರಿಂಗ್ ಕಾಲೇಜು ಕ್ಲೋಸ್ ಆಗುತ್ತಿರುವ ಹಿನ್ನೆಲೆಯಲ್ಲಿ ಡಿಪ್ಲೊಮಾ ಅಭ್ಯರ್ಥಿಗಳಿಗೆ ಸಂಕಷ್ಟ ಎದುರಾದಂತಾಗಿದೆ. ಇಂಜಿನಿಯರಿಂಗ್ ಶಿಕ್ಷಣದ ಗುಣಮಟ್ಟದ ಮೇಲೆ ಪ್ರಭಾವ ಹಾಗೂ ಈ ಸಂಜೆಗಳ ಖರ್ಚು ದುಬಾರಿ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. 2020-21ನೇ ಶೈಕ್ಷಣಿಕ ವರ್ಷದಿಂದಲೇ ಸಂಜೆ ಕಾಜೇಜುಗಳು ಕ್ಲೋಸ್ ಆಗಲಿದೆ. ರಾಜ್ಯದ 12 ಇಂಜಿನಿಯರಿಂಗ್ ಕಾಲೇಜುಗಳ ಬಂದ್ ಗೆ ಸೂಚನೆ ನೀಡಲಾಗಿದೆ.

ಬಂದ್ ಆಗಲಿರುವ ಸಂಜೆ ಎಂಜಿನಿಯರಿಂಗ್ ಕಾಲೇಜುಗಳ ವಿವರ ಹೀಗಿದೆ: – ಬಿಎಂಎಸ್ ಸಂಜೆ ಎಂಜಿನಿಯರಿಂಗ್ ‌ಕಾಲೇಜು, ಬೆಂಗಳೂರು – ಎಸ್ ಕೆಎಸ್ ಜೆಟಿಐ ಬೆಂಗಳೂರು – ಯುವಿಸಿಇ ಸಂಜೆ ಕಾಲೇಜು, ಬೆಂಗಳೂರು – ಜೈನ್ ಕಾಲೇಜು ಎಂಜಿನಿಯರಿಂಗ್, ಬೆಳಗಾವಿ – ಕೆ.ಎಲ್.ಎಸ್ ಗೋತೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಳಗಾವಿ – ಬಿಎಲ್ ಡಿಇ ಎಎಸ್ ವಿ.ಪಿ ಡಾ.ಪಿ.ಜಿ ಹಳಕಟ್ಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ವಿಜಯಪುರ – ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಟೆಕ್ನಾಲಜಿ – ಎ.ಶ್ಯಾಮರಾವ್ ಫೌಂಡೇಷನ್, ಶ್ರೀನಿವಾಸ್ ಸ್ಕೂಲ್ ಆಫ್ ಎಂಜಿನಿಯರಿಂಗ್ – ಪಿ.ಎ.ಕಾಲೇಜು ಆಫ್ ಎಂಜಿನಿಯರಿಂಗ್, ಮಂಗಳೂರು – ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ – ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು‌ – ಸೇಂಟ್ ಜೋಸೆಫ್ ಎಂಜಿನಿಯರಿಂಗ್ ಕಾಲೇಜು, ಮಂಗಳೂರು

ಇದನ್ನೂ ಓದಿ: ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ, ಪೋಷಕರ ಆಕ್ರೋಶ

ಇದನ್ನೂ ಓದಿ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ಪಿಠೋಪಕರಣಗಳ ವ್ಯವಸ್ಥೆ ಮಾಡಿ: ಹೆಚ್​ಡಿ ರೇವಣ್ಣ

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ