AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ದೂರು ದಾಖಲು​, ಕಪ್ಪುಪಟ್ಟಿಗೆ ಸೇರಿಸಲು ಚಿಂತನೆ

ಬೆಂಗಳೂರಿನ ನಾಗರಬಾವಿ ಬಳಿಯ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ಸಿಬಿಎಸ್​ಇ ಬೋರ್ಡ್ ಸಿಲಬಸ್​ ಎಂದು ಹೇಳಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲಾ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ರು. ಹೀಗಾಗಿ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ಶಿಕ್ಷಣ ಇಲಾಖೆ ಕ್ರಮಕ್ಕೆ ಮುಂದಾಗಿದೆ.

ಬೆಂಗಳೂರಿನ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ದೂರು ದಾಖಲು​, ಕಪ್ಪುಪಟ್ಟಿಗೆ ಸೇರಿಸಲು ಚಿಂತನೆ
ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ
Prajwal D'Souza
| Updated By: Digi Tech Desk|

Updated on:Apr 20, 2023 | 12:11 PM

Share

ಬೆಂಗಳೂರು: ಆರ್ಕಿಡ್ ಇಂಟರ್ನ್ಯಾಷನಲ್ ಸ್ಕೂಲ್ (orchid school)ಪದೇ ಪದೆ ವಿವಾದದಲ್ಲಿ ಸಿಲುಕುತ್ತಲೇ ಇದೆ. ಇದೀಗ ಬೆಂಗಳೂರಿನ(Bengaluru) ನಾಗರಬಾವಿಯಲ್ಲಿರುವ ಆರ್ಕಿಡ್ ಸ್ಕೂಲ್‌ನಾ ಮೋಸದಾಟಕ್ಕೆ ಪೋಷಕರು ಸಿಡಿದೆದ್ದಿದ್ದಾರೆ. ಯಾಕಂದ್ರೆ ಸಿಬಿಎಸ್‌ಇ ಶಿಕ್ಷಣಕ್ಕೆ ಮಾನ್ಯತೆಯೇ ಪಡೆದಿಲ್ಲ. ಆದ್ರೂ ಪೋಷಕರ ಬಳಿ ಸುಳ್ಳು ಹೇಳಿ, ಸಿಬಿಎಸ್​​ಸಿ ಪಾಠ ಮಾಡುತ್ತೇವೆ ಎಂದು ಲಕ್ಷ ಲಕ್ಷ ಫೀಸ್ ಕಿತ್ತುಕೊಂಡಿದೆ. ಆದರೆ ಈಗ ಸ್ಟೇಟ್ ಸಿಲೆಬಸ್‌ನಲ್ಲಿ ಎಕ್ಸಾಂ ಬರೆಯಿಸಲು ಮುಂದಾಗಿರುವುದು ಪೋಷಕರನ್ನ ಕೆರಳಿಸಿದೆ. ಇನ್ನು ಇದೀಗ ಆರ್ಕಿಡ್ ಶಾಲೆ ವಿರುದ್ಧ ಸಾರ್ವಜನಿಕ ಶಿಕ್ಷಣ ಇಲಾಖೆ ಇಂದು(ಜನವರಿ 25) ಕ್ರಿಮಿನಲ್ ಕೇಸ್ ದಾಖಲಿಸಿದೆ.

ಇದನ್ನೂ ಓದಿ: ಸಿಬಿಎಸ್​ಇ ಸುಳ್ಳು ನೆಪ ಹೇಳಿ ಲಕ್ಷಾಂತರ ಶುಲ್ಕ: ಆರ್ಕಿಡ್ ಇಂಟರ್​ನ್ಯಾಷನಲ್ ಸ್ಕೂಲ್ ವಿರುದ್ಧ ಪೋಷಕರ ಪ್ರತಿಭಟನೆ

ಸೇಂಟ್ ತೆರೇಸಾ ಎಜುಕೇಷನಲ್, ಕಲ್ಚರಲ್ ಆ್ಯಂಡ್ ಸೋಶಿಯಲ್ ಡೆವಲಪ್‌ಮೆಂಟ್ ಸೊಸೈಟಿಯ ಅಧ್ಯಕ್ಷ ರಾಲ್ಫ್ ಆಂಡ್ರೇಡ್, ಟ್ರಸ್ಟ್​ನ ಕಾರ್ಯದರ್ಶಿ ಸಂಜಯ್ ಎಲ್, ಆರ್ಕಿಡ್‌ ಇಂಟರ್‌ನ್ಯಾಷನಲ್‌ ಶಾಲೆಯ ಪ್ರಿನ್ಸಿಪಾಲ್ ಮಂಜುಳಾ ಬಿ. ಹಾಗೂ K12 ಟೆಕ್ನೋ ಸರ್ವೀಸಸ್ ಪ್ರೈವೇಟ್‌ ಲಿಮಿಟೆಡ್ ವಿರುದ್ಧ ದೂರು ದಾಖಲಾಗಿದೆ. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 420, 34 ಅಡಿಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನ್ಯೂಸ್ 9 ರೊಂದಿಗೆ ಮಾತನಾಡಿದ ಬೆಂಗಳೂರು ದಕ್ಷಿಣ ಬ್ಲಾಕ್ ಶಿಕ್ಷಣಾಧಿಕಾರಿ (ಬಿಇಒ) ರಾಜಶೇಖರ್ ಎಚ್‌ಜಿ, ಬೆಂಗಳೂರು ದಕ್ಷಿಣದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಬೈಲಾಂಜನಪ್ಪ ಅವರ ನಿರ್ದೇಶನದ ಮೇಲೆ ಶಾಲೆ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನ ನಾಗರಬಾವಿ ಬಳಿಯ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ಸಿಬಿಎಸ್​ಇ ಬೋರ್ಡ್ ಸಿಲಬಸ್​ ಎಂದು ಹೇಳಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲಾ ಮಂಡಳಿ ವಿರುದ್ಧ ನಿನ್ನೆ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ರು. ಹೀಗಾಗಿ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ಇಲಾಖೆ ದೂರು ದಾಖಲಿಸಿದೆ. ಅಲ್ಲದೇ ಆರ್ಕಿಡ್​ ಶಾಲಾ ಆಡಳಿತ ಮಂಡಳಿ ಸೇಂಟ್​​​​ ತೆರೇಸಾ ಸಂಸ್ಥೆ ಕಪ್ಪುಪಟ್ಟಿಗೆ ಸೇರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇನ್ನು ಆರ್ಕಿಡ್​ ಶಾಲಾ ಆಡಳಿತ ಮಂಡಳಿ ಹೊಸ ಶಾಲೆ ತೆರೆಯದಂತೆ ನಿರ್ಬಂಧ ಹೇರಲಾಗುತ್ತಿದೆ.

ವರದಿ: Prajwal D’Souza News9

Published On - 7:18 pm, Wed, 25 January 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?