AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ನ್ಯೂಸ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ಭಾಗ್ಯ.. !

ಕೊರೊನಾ ಬಂದು ಹೋದ ಮೇಲೆ ಶೈಕ್ಷಣಿಕ ವಲಯದಲ್ಲಿ ಸೃಷ್ಟಿಸಿರುವ ಅವಾಂತರ ಒಂದಲ್ಲ ಎರಡಲ್ಲ. ಮಕ್ಕಳ ಕಲಿಕೆ ಹಳ್ಳ ಹಿಡದಿದ್ದು ಕೆಲವು ವಿಷಯಗಳಲ್ಲಿ ಮಕ್ಕಳು ಇತ್ತೀಚೆಗೆ ಹಿಂದೆ ಬೀಳುತ್ತಿದ್ದು, ಖಾಸಗಿ ಶಾಲೆಗಳ ಪೋಷಕರು ಹೆಚ್ಚುವರಿ ಶಿಕ್ಷಣಕ್ಕಾಗಿ ಟೂಷನ್ ಮೊರೆ ಹೋಗುತ್ತಿದ್ದಾರೆ. ಆದ್ರೆ ಬಡ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಲಿಕಾ ಹಿನ್ನಡೆಯಾಗುತ್ತಿದೆ. ಈಗ ಇತಂಹ ಪೋಷಕರ ಮಕ್ಕಳಿಗೂ ಶಾಲಾ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ.

ಗುಡ್​ನ್ಯೂಸ್: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಫ್ರೀ ಟ್ಯೂಷನ್ ಭಾಗ್ಯ.. !
ಶಾಲಾ ವಿದ್ಯಾರ್ಥಿಗಳು
Vinay Kashappanavar
| Edited By: |

Updated on: Oct 17, 2024 | 10:17 PM

Share

ಬೆಂಗಳೂರು, (ಅಕ್ಟೋಬರ್ 17): ಕಳೆದ ಎರಡು ಮೂರು ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳಲ್ಲಿ ಗಣಿತ ವಿಜ್ಞಾನ ಇಂಗ್ಲೀಷ್ ವಿಷಯಗಳು ಕಬ್ಬಿಣದ ಕಡಲೆಯಾಗಿದೆ.. ಹೀಗಾಗಿಯೇ ಖಾಸಗಿ ಶಾಲಾ ಪೋಷಕರು ತಮ್ಮ ಮಕ್ಕಳಿಗೆ ಹೆಚ್ಚುವರಿ ಶಿಕ್ಷಣ ನೀಡಲು ಪ್ರೈವೆಟ್ ಟ್ಯೂಷನ್ ಸೆಂಟರ್ ಗಳಿಗೆ ಹಾಕುತ್ತಿದ್ದಾರೆ. ಹೆಚ್ಚುವರಿ ಶಿಕ್ಷಣಕ್ಕೆ ಇದು ಅನಕೂಲವಾಗುತ್ತಿದೆ. ತಗರತಿಯ ಹೆಚ್ಚುವರಿ ಸಮಸ್ಯೆಗಳನ್ನ ಈ ಕ್ಲಾಸ್ ಗಳಲ್ಲಿ ಸರಿಪಡಿಸಿಕೊಂಡು ಕಲಿಯುತ್ತಾರೆ. ಆದ್ರೆ ಇತಂಹ ಸೌಲಭ್ಯ ಬಡ ಪೋಷಕರ ಮಕ್ಕಳಿಗೆ ಇಲ್ಲದಂತಾಗಿತ್ತು. ದುಬಾರಿ ಹಣ ನೀಡಿ ಟ್ಯೂಷನ್ ಗೆ ಕಳಿಸಲು ಕಷ್ಟಪಡುತ್ತಿದ್ದರು. ಈಗ ಸರ್ಕಾರಿ ಶಾಲಾ ಮಕ್ಕಳಿಗೆ ಇತಂಹ ಸೌಲಭ್ಯವನ್ನ ಉಚಿತವಾಗಿ ನೀಡಲು ಕರ್ನಾಟಕ ಶಿಕ್ಷಣ ಇಲಾಖೆ ಮುಂದಾಗಿದೆ.

ಸರ್ಕಾರಿ ಶಾಲೆಗಳಿಗೆ ಬಂತ್ತು ಫ್ರೀ ಟ್ಯೂಷನ್ ಭಾಗ್ಯ

ಇಷ್ಟು ದಿನ ಪೋಷಕರು ಸಾವಿರಾರು ರೂಪಾಯಿ ಹಣ ಖರ್ಚುಮಾಡಿ ತಮ್ಮ ಮಕ್ಕಳನ್ನು ಖಾಸಗಿ ಟ್ಯೂಷನ್ ಸೆಂಟರ್ ಗಳಿಗೆ ಸೇರಿಸುತ್ತಿದ್ದರು. ವಿದ್ಯಾರ್ಥಿ ಯಾವ ತರಗತಿಯ ವಿಷಯದಲ್ಲಿ ಹಿಂದೆ ಇದ್ದಾನೆ ಎಂದು ಅರ್ಥ ಮಾಡಿಕೊಂಡು ಸ್ಪೆಷಲ್ ಟ್ಯೂಷನ್​ಗೆ ಕಳುಹಿಸುತ್ತಿದ್ದಾರೆ. ಈಗ ಈ ಭಾಗ್ಯ ಸರ್ಕಾರಿ ಶಾಲೆಗಳ ಮಕ್ಕಳಿಗೂ ಬರುತ್ತಿದೆ.

ಇದನ್ನೂ ಓದಿ: ಮುಂದಿನ‌ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಮುಂಜಾನೆ ಹಾಗೂ ಸಂಜೆ ಶಾಲೆಯ ಆರಂಭಕ್ಕೂ ಮೊದಲು ಒಂದು ಗಂಟೆ ಹಾಗೂ ಶಾಲೆ ಅವಧಿ ಮುಗದ ಬಳಿಕ ಒಂದು ಕ್ಲಾಸ್ ಶಿಕ್ಷಕರು ಮಕ್ಕಳಿಗೆ ವಿಶೇಷ ತರಗತಿ ತಗೆದುಕೊಳ್ಳುತ್ತಿದ್ದಾರೆ. 1 ರಿಂದ 12 ನೇ ತರಗತಿಯಲ್ಲಿನ ಮಕ್ಕಳಿಗೆ ಇದು ಆರಂಭವಾಗುತ್ತಿದೆ. ಯಾವ ತರಗತಿಯಲ್ಲಿ ಹಿನ್ನಡೆ ಇದ್ದಾರೆ ಎಂದು ಶಾಲಾ ಶಿಕ್ಷಕರೇ ಗುರುತಿಸಿ ಆ ವಿಷಯದಲ್ಲಿ ಹಿಂದಿರುವ ವಿದ್ಯಾರ್ಥಿಗಳನ್ನ ಈ ಸ್ಪೆಷಲ್ ಕ್ಲಾಸ್​ಗೆ ಕಳುಹಿಸುತ್ತಾರೆ.

ಒಟ್ಟಿನಲ್ಲಿ ಮಕ್ಕಳ ಶೈಕ್ಷಣಿಕ ಭವಿಷ್ಯದ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು ಸರ್ಕಾರಿ ಶಾಲಾ ಶಿಕ್ಷಕರನ್ನೇ ಬಳಕೆ ಮಾಡಿಕೊಂಡು ಶಾಲಾ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದೆ. ಆದ್ರೆ ಇದು ಹೇಳಿಕೆಗೆ ಮಾತ್ರ ಸೀಮಿತವಾಗುತ್ತಾ ಅಥವಾ ಜಾರಿಯಾಗುತ್ತಾ ಎಂದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ