AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Success Story: ಕಿವುಡ ತಂದೆಯ ಕನಸು ನನಸಾಗಿಸಿದ ಮಗ; AI ಎಂಜಿನಿಯರ್ ಆಗಿ 1.06 ಕೋಟಿ ರೂ. ಪ್ಯಾಕೇಜ್ ಪಡೆದ ಅಖಿಲೇಶ್

ಆಂಧ್ರಪ್ರದೇಶದ ಗ್ರಾಮೀಣ ಹಿನ್ನೆಲೆಯ ಅಖಿಲೇಶ್, ಕೆನಡಾ ಮೂಲದ AI ಕಂಪನಿಯಲ್ಲಿ ವರ್ಷಕ್ಕೆ 1.06 ಕೋಟಿ ರೂ. (CTC) ವಾರ್ಷಿಕ ವೇತನದೊಂದಿಗೆ AI ಎಂಜಿನಿಯರ್ ಆಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದ ಯುವಕ ವಿಶ್ವದರ್ಜೆಯ ತಂತ್ರಜ್ಞಾನ ಕಂಪನಿಯಲ್ಲಿ ಸ್ಥಾನ ಪಡೆದಿರುವುದು ಅನೇಕ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.

Success Story: ಕಿವುಡ ತಂದೆಯ ಕನಸು ನನಸಾಗಿಸಿದ ಮಗ; AI ಎಂಜಿನಿಯರ್ ಆಗಿ 1.06 ಕೋಟಿ ರೂ. ಪ್ಯಾಕೇಜ್ ಪಡೆದ ಅಖಿಲೇಶ್
1.06 ಕೋಟಿ ರೂ. ಪ್ಯಾಕೇಜ್ ಪಡೆದ ಅಖಿಲೇಶ್
ಅಕ್ಷತಾ ವರ್ಕಾಡಿ
|

Updated on: Jul 28, 2026 | 3:19 PM

Share

ಮುಖ್ಯಾಂಶಗಳು

  • ಕಿವುಡ ಮತ್ತು ಮೂಕ ತಂದೆಯ ಕನಸನ್ನು ನನಸಾಗಿಸಿದ ಮಗ
  • AI ಎಂಜಿನಿಯರ್ ಆಗಿ ವರ್ಷಕ್ಕೆ 1.06 ಕೋಟಿ ರೂ. ಪ್ಯಾಕೇಜ್ ಪಡೆದ ಅಖಿಲೇಶ್
  • ಟೈಲರಿಂಗ್ ಮಾಡಿ ಮಕ್ಕಳನ್ನು ಓದಿಸಿದ ತಂದೆ-ತಾಯಿಯ ತ್ಯಾಗಕ್ಕೆ ಸಿಕ್ಕ ಅಮೂಲ್ಯ ಪ್ರತಿಫಲ

ಕಷ್ಟಪಟ್ಟು ದುಡಿಯುವ ಪೋಷಕರ ತ್ಯಾಗ, ಮಕ್ಕಳ ಪರಿಶ್ರಮ ಮತ್ತು ಸರಿಯಾದ ಮಾರ್ಗದರ್ಶನ ಒಂದಾದರೆ ಯಾವುದೇ ಕನಸನ್ನೂ ನನಸಾಗಿಸಬಹುದು ಎಂಬುದಕ್ಕೆ ಆಂಧ್ರ ಪ್ರದೇಶದ ಕಾಕಿನಾಡ ಮೂಲದ ಅಖಿಲೇಶ್ ಉತ್ತಮ ಉದಾಹರಣೆಯಾಗಿದ್ದಾರೆ. ಕಿವುಡ ಮತ್ತು ಮೂಕ ತಂದೆಯ ಮಗನಾದ ಅಖಿಲೇಶ್ ಇದೀಗ ಕೆನಡಾ ಮೂಲದ AI ಕಂಪನಿಯಲ್ಲಿ ವರ್ಷಕ್ಕೆ 1.06 ಕೋಟಿ ರೂ. (CTC) ವೇತನದೊಂದಿಗೆ AI ಎಂಜಿನಿಯರ್ ಆಗಿ ಆಯ್ಕೆಯಾಗಿದ್ದು, ಅವರ ಸಾಧನೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

ಟೈಲರಿಂಗ್ ವೃತ್ತಿಯಲ್ಲೇ ಮಕ್ಕಳ ಭವಿಷ್ಯ ಕಟ್ಟಿದ ಪೋಷಕರು:

ಕಾಕಿನಾಡ ಜಿಲ್ಲೆಯ ಕುತುಕುಡುಮಿಲ್ಲಿ ಎಂಬ ಸಣ್ಣ ಗ್ರಾಮದ ಗಂಗಾಧರ ರಾವ್ ಮತ್ತು ಮಾಲತಿ ದಂಪತಿ ಅತ್ಯಂತ ಸರಳ ಜೀವನ ನಡೆಸುತ್ತಿದ್ದರು. ಕಿವುಡ ಮತ್ತು ಮೂಕರಾಗಿರುವ ಗಂಗಾಧರ ರಾವ್ ಟೈಲರಿಂಗ್ ವೃತ್ತಿಯ ಮೂಲಕ ಕುಟುಂಬವನ್ನು ಪೋಷಿಸುತ್ತಿದ್ದರು. ಅವರ ಪತ್ನಿ ಮಾಲತಿ ಕೂಡ ಬಟ್ಟೆಗಳಿಗೆ ಕರಕುಶಲ ಕೆಲಸ ಮಾಡಿ ಕುಟುಂಬದ ಆದಾಯಕ್ಕೆ ಕೈಜೋಡಿಸುತ್ತಿದ್ದರು. ಆರ್ಥಿಕ ಸವಾಲುಗಳ ನಡುವೆಯೂ ತಮ್ಮ ಇಬ್ಬರು ಮಕ್ಕಳ ಶಿಕ್ಷಣಕ್ಕೆ ಯಾವುದೇ ಕೊರತೆಯಾಗದಂತೆ ನೋಡಿಕೊಂಡ ಈ ದಂಪತಿಯ ಪರಿಶ್ರಮಕ್ಕೆ ಇಂದು ಅದ್ಭುತ ಪ್ರತಿಫಲ ದೊರೆತಿದೆ.

ಡೇಟಾ ಸೈನ್ಸ್‌ನಿಂದ AI ಎಂಜಿನಿಯರ್‌ವರೆಗೆ ಯಶಸ್ಸಿನ ಪಯಣ:

ಅಖಿಲೇಶ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕೊತಪಲ್ಲಿಯಲ್ಲಿ ಪೂರ್ಣಗೊಳಿಸಿ, ನಂತರ ಖಾಸಗಿ ಕಾಲೇಜಿನಲ್ಲಿ ಪ್ರೌಡ ಶಿಕ್ಷಣ ಮುಗಿಸಿದರು. ಬಳಿಕ ಸುರಂಪಲೆಮ್‌ನ ಆದಿತ್ಯ ವಿಶ್ವವಿದ್ಯಾಲಯದಲ್ಲಿ ಡೇಟಾ ಸೈನ್ಸ್ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ ಪಡೆದರು. ವಿದ್ಯಾರ್ಥಿ ಜೀವನದಿಂದಲೇ ತಾಂತ್ರಿಕ ಕೌಶಲ್ಯಗಳನ್ನು ಬೆಳೆಸಿಕೊಂಡಿದ್ದ ಅವರು ಕ್ಯಾಂಪಸ್ ಪ್ಲೇಸ್‌ಮೆಂಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಕೆನಡಾ ಮೂಲದ QuantRise Tech AI ಕಂಪನಿಯಿಂದ ವರ್ಷಕ್ಕೆ 1.06 ಕೋಟಿ ರೂ. (CTC) ವೇತನದ ಆಫರ್ ಲೆಟರ್ ಪಡೆದರು.

ಮನೆಯಿಂದಲೇ ಕೆಲಸ ಆರಂಭಿಸಿದ ಅಖಿಲೇಶ್:

ವಿಶೇಷವೆಂದರೆ, ಅಖಿಲೇಶ್ ಈಗಾಗಲೇ ಕಂಪನಿಗೆ ಸೇರಿದ್ದು, ಸಂಪೂರ್ಣವಾಗಿ Work From Home (WFH) ಮಾದರಿಯಲ್ಲಿ AI ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದ ಯುವಕ ವಿಶ್ವದರ್ಜೆಯ ತಂತ್ರಜ್ಞಾನ ಕಂಪನಿಯಲ್ಲಿ ಸ್ಥಾನ ಪಡೆದಿರುವುದು ಅನೇಕ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದೆ.

ಇದನ್ನೂ ಓದಿ: ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

ಅದೇ ವಿಶ್ವವಿದ್ಯಾಲಯದ ಮತ್ತೊಬ್ಬ ವಿದ್ಯಾರ್ಥಿಗೂ 1.06 ಕೋಟಿ ರೂ. ಪ್ಯಾಕೇಜ್:

ಅಖಿಲೇಶ್ ಮಾತ್ರವಲ್ಲ, ಆದಿತ್ಯ ವಿಶ್ವವಿದ್ಯಾಲಯದ ಮತ್ತೊಬ್ಬ ವಿದ್ಯಾರ್ಥಿ ರಾಜೇಶ್ ಕೂಡ ಅದೇ ಕಂಪನಿಯಲ್ಲಿ ವರ್ಷಕ್ಕೆ 1.06 ಕೋಟಿ ರೂ. ವಾರ್ಷಿಕ ವೇತನದೊಂದಿಗೆ ಉದ್ಯೋಗ ಪಡೆದಿದ್ದಾರೆ. ವಿಶ್ವವಿದ್ಯಾಲಯದ ಆಡಳಿತದ ಪ್ರಕಾರ, ಮೊದಲ ವರ್ಷದಂದೇ ವಿದ್ಯಾರ್ಥಿಗಳಿಗೆ ವಿಶೇಷ ಪ್ಲೇಸ್‌ಮೆಂಟ್ ತರಬೇತಿ, ಸಂವಹನ ಕೌಶಲ್ಯ ಅಭಿವೃದ್ಧಿ ಹಾಗೂ ತಾಂತ್ರಿಕ ತರಬೇತಿ ನೀಡಲಾಗುತ್ತಿದ್ದು, ಅಂತರರಾಷ್ಟ್ರೀಯ ಮಟ್ಟದ ಉದ್ಯೋಗಗಳಿಗೆ ಅವರನ್ನು ಸಿದ್ಧಗೊಳಿಸಲಾಗುತ್ತಿದೆ.

ಸಾಧನೆ ನೀಡಿದ ಮಹತ್ವದ ಸಂದೇಶ:

ಅಖಿಲೇಶ್ ಅವರ ಯಶಸ್ಸು ಮತ್ತೊಮ್ಮೆ ಒಂದು ಸತ್ಯವನ್ನು ಸಾಬೀತುಪಡಿಸಿದೆ. ಕುಟುಂಬದ ಆರ್ಥಿಕ ಪರಿಸ್ಥಿತಿ ಅಥವಾ ಹಿನ್ನೆಲೆ ಯಶಸ್ಸಿಗೆ ಅಡ್ಡಿಯಾಗುವುದಿಲ್ಲ. ಪೋಷಕರ ತ್ಯಾಗ, ನಿರಂತರ ಪರಿಶ್ರಮ, ಉತ್ತಮ ಶಿಕ್ಷಣ ಮತ್ತು ಸರಿಯಾದ ಮಾರ್ಗದರ್ಶನ ಇದ್ದರೆ ಜಾಗತಿಕ ಮಟ್ಟದ ಅವಕಾಶಗಳನ್ನು ಸಾಧಿಸಬಹುದು. ಪ್ರಸ್ತುತ ಅಖಿಲೇಶ್ ಅವರ ಈ ಸಾಧನೆಗೆ ಕುಟುಂಬ ಸದಸ್ಯರು, ಗ್ರಾಮಸ್ಥರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸುತ್ತಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ