AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!

ತೆಲಂಗಾಣದ ಗೊಲ್ಲೆ ಪ್ರವೀಣ್ ಕುಮಾರ್ ಬಡ ಕುಟುಂಬದಿಂದ ಬಂದವರು. ರಾತ್ರಿ ಕಾವಲುಗಾರನಾಗಿ ಕೆಲಸ ಮಾಡಿ ಓದಿದ ಇವರು, ಆರ್ಥಿಕ ಸವಾಲುಗಳ ನಡುವೆಯೂ ಸತತ 3 ಸರ್ಕಾರಿ ಉದ್ಯೋಗಗಳನ್ನು ಪಡೆದಿದ್ದಾರೆ. ಕಠಿಣ ಪರಿಶ್ರಮ, ತಾಳ್ಮೆ ಮತ್ತು ದೃಢ ಸಂಕಲ್ಪದಿಂದ ಯಶಸ್ಸು ಸಾಧಿಸಬಹುದು ಎಂಬ ಸಂದೇಶವನ್ನು ಇವರು ನೀಡುತ್ತಾರೆ. ಇವರ ಜೀವನ ಕಥೆ ಸಾಕಷ್ಟು ಯುವಜನತೆಗೆ ಪ್ರೇರಣೆಯಾಗಿದೆ.

ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!
ಪ್ರವೀಣ್ ಕುಮಾರ್
ಅಕ್ಷತಾ ವರ್ಕಾಡಿ
|

Updated on: Sep 09, 2026 | 1:42 PM

Share

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಗೊಲ್ಲೆ ಪ್ರವೀಣ್ ಕುಮಾರ್ ಅತ್ಯಂತ ಸರಳ ಕುಟುಂಬದಿಂದ ಬಂದವರು. ತಾಯಿ ಬೀಡಿ ಕಟ್ಟಿ ಮಕ್ಕಳನ್ನು ಬೆಳೆಸಿದ್ದು ಹಾಗೂ ಅಣ್ಣ ಮೇಸ್ತ್ರಿ ಕೆಲಸ ಮಾಡುತ್ತಿದ್ದಾರೆ. ಬಡ ಕುಟುಂಬದಲ್ಲಿ ಬೆಳೆದ ಪ್ರವೀಣ್, ಆರ್ಥಿಕ ಸವಾಲುಗಳ ನಡುವೆಯೇ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಿದರು. ತಮ್ಮ ಕುಟುಂಬಕ್ಕೆ ಆರ್ಥಿಕ ಹೊರೆಯಾಗಬಾರದು ಎಂಬ ದೃಢ ನಿರ್ಧಾರ ಅವರದಾಗಿತ್ತು.

ರಾತ್ರಿ ಕಾವಲುಗಾರನಾಗಿ ಸಾಗಿದ ಸಾಧನೆಯ ಹಾದಿ:

ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂ.ಕಾಮ್, ಬಿ.ಎಡ್ ಮತ್ತು ಎಂ.ಎಡ್ ವ್ಯಾಸಂಗ ಮಾಡುತ್ತಿದ್ದಾಗ, ತಮ್ಮ ವೈಯಕ್ತಿಕ ಖರ್ಚಿಗಾಗಿ ಪ್ರವೀಣ್ ವಿಶ್ವವಿದ್ಯಾಲಯದಲ್ಲೇ ರಾತ್ರಿ ಕಾವಲುಗಾರನಾಗಿ (Night Watchman) ಸೇರಿಕೊಂಡರು. ರಾತ್ರಿ ಕರ್ತವ್ಯ ನಿರ್ವಹಿಸುತ್ತಾ ಸಿಗುತ್ತಿದ್ದ ಸಮಯದಲ್ಲಿ ಕಷ್ಟಪಟ್ಟು ಓದಿದರು. ಕೆಲವರು ಇವರ ಕೆಲಸವನ್ನು ಗೇಲಿ ಮಾಡಿದರೂ, ಪ್ರವೀಣ್ ಆ ಮಾತುಗಳನ್ನು ನಿರ್ಲಕ್ಷಿಸಿ ತಮ್ಮ ಗುರಿಯತ್ತ ಮಾತ್ರ ಗಮನಹರಿಸಿದರು.

ಸತತ 3 ಸರ್ಕಾರಿ ಉದ್ಯೋಗಗಳ ಅದ್ಭುತ ಯಶಸ್ಸು:

ವರ್ಷಗಳ ನಿರಂತರ ಪರಿಶ್ರಮಕ್ಕೆ ಕೊನೆಗೂ ಅದ್ಭುತ ಫಲ ಸಿಕ್ಕಿತು. ಗುರುಕುಲ ಶಿಕ್ಷಣ ಸಂಸ್ಥೆಗಳಲ್ಲಿ ಜೂನಿಯರ್ ಲೆಕ್ಚರರ್ (ರಾಜ್ಯ ಮಟ್ಟದಲ್ಲಿ 17 ನೇ ರ್ಯಾಂಕ್), ಪಿಜಿಟಿ ಮತ್ತು ಟಿಜಿಟಿ ಹುದ್ದೆಗಳು ಸೇರಿದಂತೆ ಒಂದೇ ಬಾರಿಗೆ ಸತತವಾಗಿ 3 ಸರ್ಕಾರಿ ಉದ್ಯೋಗಗಳನ್ನು ಪಡೆದು ಪ್ರವೀಣ್ ಸಾಧನೆ ಮಾಡಿದರು. ತಾವು ಕಾವಲುಗಾರನಾಗಿ ಕೆಲಸ ಮಾಡಿದ ಕಚೇರಿಯಲ್ಲೇ ಸನ್ಮಾನ ಸ್ವೀಕರಿಸಿದ್ದು ಅವರ ಜೀವನದ ಅತ್ಯಂತ ಭಾವನಾತ್ಮಕ ಕ್ಷಣವಾಯಿತು.

ಇದನ್ನೂ ಓದಿ: ಕ್ಯಾಂಪಸ್ ಇಂಟರ್ವ್ಯೂಗೂ ಮುನ್ನವೇ ಒಲಿದ ಅದೃಷ್ಟ; ಭಾರತದ 21 ವರ್ಷದ ವಿದ್ಯಾರ್ಥಿಗೆ ನೆದರ್‌ಲ್ಯಾಂಡ್ಸ್ ಕಂಪನಿಯಿಂದ 2.5 ಕೋಟಿ ರೂ. ಜಾಬ್ ಆಫರ್!

ಪ್ರವೀಣ್ ನೀಡುವ ಸ್ಪೂರ್ತಿಯ ಸಂದೇಶ:

ಯಶಸ್ಸಿನ ನಂತರ ಮಾತನಾಡಿದ ಪ್ರವೀಣ್, “ಕೆಲವರಿಗೆ ಮೊದಲ ಪ್ರಯತ್ನದಲ್ಲೇ ಸಿಗಬಹುದು, ಇನ್ನು ಕೆಲವರಿಗೆ ಎರಡನೇ ಪ್ರಯತ್ನದಲ್ಲಿ ಸಿಗಬಹುದು. ಆದರೆ ತಾಳ್ಮೆಯಿಂದ ಕಾಯುತ್ತಾ ನಿರಂತರವಾಗಿ ಅಭ್ಯಾಸ ಮಾಡಿದರೆ ಯಶಸ್ಸು ಖಂಡಿತ ಸಿಗುತ್ತದೆ” ಎಂದು ಹೇಳುತ್ತಾರೆ. ಸೋಲಿಗೆ ಹೆದರದೆ ಮುನ್ನಡೆಯುವ ಪ್ರತಿಯೊಬ್ಬರಿಗೂ ಅವರ ಜೀವನದ ಪ್ರಯಾಣವೇ ದೊಡ್ಡ ಪ್ರೇರಣೆ.

ಶಿಕ್ಷಣಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!