AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ಆಕಾಂಕ್ಷಿಗಳಿಗೆ ಕೆಇಎ ಗುಡ್ ನ್ಯೂಸ್: ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ಹೊಸ ಮೊಬೈಲ್ ಆ್ಯಪ್ ಮತ್ತು ಪೋರ್ಟಲ್ ಅನ್ನು ಬಿಡುಗಡೆ ಮಾಡಿದೆ. ಆ ಮೂಲಕ ಸಿಇಟಿ ಅರ್ಜಿ ಸಲ್ಲಿಸಲು ಸೈಬರ್​​ ಸೆಂಟರ್​ಗೆ ಹೋಗಬೇಕಾಗಿಲ್ಲ. ಮೊಬೈಲ್ ಆ್ಯಪ್​​, ಪೋರ್ಟಲ್​ನಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ.

ಸಿಇಟಿ ಆಕಾಂಕ್ಷಿಗಳಿಗೆ ಕೆಇಎ ಗುಡ್ ನ್ಯೂಸ್: ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ
ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ ಕೆಇಎ
Vinay Kashappanavar
| Edited By: |

Updated on: May 12, 2025 | 1:17 PM

Share

ಬೆಂಗಳೂರು, ಮೇ 12: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಿಇಟಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಹೊಸ ಮೊಬೈಲ್ ಆ್ಯಪ್ (APP) ಮತ್ತು ಪೋರ್ಟಲ್ ಅನ್ನು ಬಿಡುಗಡೆ ಮಾಡಿದೆ. ಆ ಮೂಲಕ ಸಿಇಟಿ ಆಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್ ನ್ಯೂಸ್​ ನೀಡಿದೆ. ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಸುಧಾಕರ್​​ರಿಂದ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ.

ಇನ್ಮುಂದೆ ಸಿಇಟಿ ಅರ್ಜಿ ಸಲ್ಲಿಸಲು ಸೈಬರ್​​ ಸೆಂಟರ್​ಗೆ ಹೋಗಬೇಕಾಗಿಲ್ಲ. ಮೊಬೈಲ್ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೈಬರ್ ಸೆಂಟರ್​​ನಲ್ಲಿ ತಪ್ಪಾಗಿ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳು ಪರದಾಡುತ್ತಿದ್ದರು. ಇದೇ ಕಾರಣದಿಂದ ಅರ್ಹರಿಗೆ ಸಿಇಟಿ ಸೀಟ್​ ಮಿಸ್ ಆಗುತ್ತಿತ್ತು. ಹಾಗಾಗಿ ಕೆಇಎ ಮೊಬೈಲ್ ಆ್ಯಪ್, ಚಾಟ್ ಬಾಟ್ ಮತ್ತು ಪೊರ್ಟಲ್​​ ಅನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ
Image
ಜನಿವಾರ ತೆಗೆಸಿದ ವಿವಾದ: CET ಪರೀಕ್ಷೆಗೆ ವಸ್ತ್ರ ಸಂಹಿತೆ ಏನ್​ ಹೇಳುತ್ತೆ
Image
ಜನಿವಾರದಿಂದ ನೇಣು ಬಿಗಿದುಕೊಂಡರೆ? ಕಾಲೇಜು ಸಿಬ್ಬಂದಿಯ ಮೂರ್ಖ ವಾದ!
Image
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
Image
KCET Exam ಹಾಲ್ ಟಿಕೆಟ್​ ಬಿಡುಗಡೆ, ಆನ್​ಲೈನ್​ನಲ್ಲಿ ಡೌನ್‌ಲೋಡ್ ಮಾಡಿ

ಇದನ್ನೂ ಓದಿ: ಸೀಟ್ ಬ್ಲಾಕಿಂಗ್ ತಡೆಗೆ KEA ಹೊಸ ನಿಯಮ: 3 ವರ್ಷ ಬ್ಯಾನ್​

ಹೊಸ ಮೊಬೈಲ್​ ಆ್ಯಪ್​ನಿಂದ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ.​​ ಸಿಇಟಿ ಪರೀಕ್ಷೆಯ ಸಮಸ್ಯೆಗಳು, ಕಾಲೇಜುಗಳ ಸಮಗ್ರ ಮಾಹಿತಿ, ಆಯ್ಕೆ ಮಾಡುವ ಇಂಜಿನೀಯರಿಂಗ ಕಾಲೇಜು ಶುಲ್ಕ ಎಷ್ಟು? ಆ ಕಾಲೇಜಿನಲ್ಲಿ ಹಾಸ್ಟೇಲ್ ಶುಲ್ಕ ಏನಿದೆ? ಇತರೇ ಸೌಲಭ್ಯಗಳು ಏನಿದೆ ಎಂದು ಹಲವಾರು ಪ್ರಶ್ನೆಗಳಿಗೆ ಆ್ಯಪ್ ನಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ.

ಸಚಿವ ಸುಧಾಕರ್ ಟ್ವೀಟ್​

ಈ ಮೊಬೈಲ್ ಆ್ಯಪ್​​​​ ಮತ್ತು ಪೋರ್ಟಲ್​ನಲ್ಲಿ ಸಂಪೂರ್ಣ ಮಾಹಿತಿ ಸಿಗಲಿದೆ. ಪಠ್ಯಕ್ರಮ, ಕಾಲೇಜು ಮತ್ತು ಸೌಲಭ್ಯಗಳ ಮಾಹಿತಿಯೂ ಸಿಗಲಿದೆ. ವಿದ್ಯಾರ್ಥಿಗಳು ಪೋರ್ಟಲ್​ನಲ್ಲಿ ಒಮ್ಮೆ ಅರ್ಜಿ ತುಂಬಿದರೆ ಸಾಕು, ಪದೇ ಪದೆ ಅರ್ಜಿ ತುಂಬುವ ಅವಶ್ಯಕತೆ ಬರುವುದಿಲ್ಲ. ಆ್ಯಪ್​​ ಡೌನ್​ಲೋಡ್​ ಮಾಡಿಕೊಂಡು ಯುಜಿ-ಸಿಇಟಿ, ಪಿಜಿ-ಸಿಇಟಿ, ಡಿಸಿಇಟಿ ಅರ್ಜಿ ಭರ್ತಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಜನಿವಾರ ಧರಿಸಬಾರದೆಂದು ಪ್ರಾಧಿಕಾರವು ವಸ್ತ್ರಸಂಹಿತೆ ವಿಷಯದಲ್ಲಿ ಹೇಳಿಲ್ಲ: ಹೆಚ್ ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕ-ಕೆಇಎ

ಸಿಇಟಿ ಫಲಿತಾಂಶಕ್ಕೆ ರೆಡಿಯಿದ್ದೇವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಆದರೆ ಸಿಬಿಎಸ್ಇ ಫಲಿತಾಂಶ ಬರಬೇಕಿದೆ, ನೀಟ್ ಫಲಿತಾಂಶವೂ ಪ್ರಕಟವಾಗಬೇಕಿದೆ ಎಂದು ತಿಳಿಸಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್