AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

School Reopen: ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನಾರಂಭ

ಮೇ 31 ರಿಂದ ಅಧಿಕೃತವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಓಪನ್ ಆಗಿವೆ. ಮಕ್ಕಳ ಸ್ವಾಗತಕ್ಕಾಗಿ ಶಿಕ್ಷಕರು ಮತ್ತು ಸಿಬ್ಬಂದಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜಾಗಿದ್ದಾರೆ. ಅದಕ್ಕಾಗಿ ಶಿಕ್ಷಣ ಇಲಾಖೆ ಕೂಡ ಕೆಲ ಸೂಚನೆಗಳನ್ನ ನೀಡಿತ್ತು.

School Reopen: ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನಾರಂಭ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: May 31, 2023 | 7:06 AM

Share

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಪುನರಾರಂಭವಾಗಿವೆ(School Reopen). 2 ತಿಂಗಳು ಬೇಸಿಗೆ ರಜೆ ಬಳಿಕ 2023-24 ರ ಶೈಕ್ಷಣಿಕ ವರ್ಷ ಪ್ರಾರಂಭವಾಗ್ತಿದೆ. ಮೇ 29ರಂದೇ ಶಾಲೆಗಳಲ್ಲಿ ಚಟುವಟಿಕೆ ಶುರುವಾಗಿದ್ದು, ಮೇ 31 ರಿಂದ ಅಧಿಕೃತವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಓಪನ್ ಆಗಿವೆ. ಮಕ್ಕಳ ಸ್ವಾಗತಕ್ಕಾಗಿ ಶಿಕ್ಷಕರು(Teacher) ಮತ್ತು ಸಿಬ್ಬಂದಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡು ಸಜ್ಜಾಗಿದ್ದಾರೆ. ಅದಕ್ಕಾಗಿ ಶಿಕ್ಷಣ ಇಲಾಖೆ ಕೂಡ ಕೆಲ ಸೂಚನೆಗಳನ್ನ ನೀಡಿತ್ತು.

ಇಲಾಖೆ ಸೂಚನೆಯಂತೆ ಶಾಲಾ ಪ್ರಾರಂಭಕ್ಕೆ ಎಲ್ಲ ಶಾಲೆಗಳಲ್ಲೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎರಡು ದಿನಗಳ ಕಾಲ ಶಾಲೆಯ ಪ್ರತಿಯೊಂದು ಕೊಠಡಿ, ಶೌಚಾಲಯ, ಆವರಣ ಸೇರಿದಂತೆ ಶಾಲೆ ಸುತ್ತಮುತ್ತ ಎಲ್ಲವನ್ನೂ ಸ್ವಚ್ಛಗೊಳಿಸಲಾಗಿದೆ. ಎರಡು ತಿಂಗಳ ಬೇಸಿಗೆ ರಜೆ ಬಳಿಕ ಮರಳಿ ಶಾಲೆಗೆ ಬರುತ್ತಿರುವ ಮಕ್ಕಳನ್ನು ಸ್ವಾಗತಿಸಲು ಶಾಲೆಯನ್ನು ಸಿಂಗರಿಸಲಾಗಿದೆ. ಮಕ್ಕಳು ಖುಷಿ ಖುಸಿಯಾಗಿ ಪುಸ್ತಕ ಜೋಡಿಸ್ಕೊಂಡು, ಬ್ಯಾಗ್​​​ ಹಾಕೊಂಡು, ತಲೆ ಬಾಚ್ಕೊಂಡು, ಯೂನಿಫಾರ್ಮ್ ಹಾಕ್ಕೊಂಡು ರೆಡಿಯಾಗಿ ಶಾಲೆಗಳನ್ನು ಹೆಜ್ಜೆ ಇಡಲಿದ್ದಾರೆ. ಮಕ್ಕಳ ಸ್ವಾಗತಕ್ಕೆ ಟೀಚರ್ಸ್​ ರೆಡಿ ಆಗಿದ್ದಾರೆ.

ಇದನ್ನೂ ಓದಿ: Schools Reopen: ಬೇಸಿಗೆ ರಜೆಯ ನಂತರ ಶಾಲೆಗೆ ಹೋಗಲು ಮಕ್ಕಳನ್ನು ಮಾನಸಿಕವಾಗಿ ಸಿದ್ಧಗೊಳಿಸುವುದು ಹೇಗೆ?

ಇನ್ನು ಇದೇ ಮೊದಲ ಬಾರಿಗೆ ಸರ್ಕಾರಿ ಮತ್ತು ಅನುದಾನಿ ಶಾಲೆಗಳ ಮಕ್ಕಳಿಗೆ ಒಂದು ಜೊತೆ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ಶಾಲೆಗಳಿಗೆ ರವಾನಿಸಲಾಗಿದ್ದು, ಸಮವಸ್ತ್ರ ಹಾಗು ಪಠ್ಯಪುಸ್ತಕಗಳ ಕೊರತೆಯಾಗದಂತೆ ವಿತರಣೆಗೆ ಅಗತ್ಯ ಕ್ರಮ ವಹಿಸುವಂತೆ ಹಾಗೂ ಬಿಸಿಯೂಟವನ್ನು ಮೊದಲ ದಿನದಿಂದಲೇ ಆರಂಭಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಶಿಕ್ಷಣ ಇಲಾಖೆಯ ಸೂಚನೆ

  1. ಮೇ.31ಕ್ಕೆ ಮಕ್ಕಳಿಗೆ ಹೂ, ಚಾಕ್ಲೇಟ್, ಸಿಹಿ ನೀಡಿ ಸ್ವಾಗತಿಸಿ
  2. ಆಟದ ಮೈದಾನ, ತರಗತಿ, ಲೈಬ್ರರಿ ಸ್ವಚ್ಛಗೊಳಿಸಲು ಸೂಚನೆ
  3. ಮಳೆಗೆ ಶಾಲಾ ಕೊಠಡಿಗಳು ಸೋರದಂತೆ ಕ್ರಮ ಕೈಗೊಳ್ಳಿ
  4. ಮೊದಲ ದಿನದಿಂದ ಬಿಸಿಯೂಟ ಕಡ್ಡಾಯವಾಗಿ ನೀಡಿ
  5. ಪಾಠ ಮರೆತಿರುವ ಮಕ್ಕಳತ್ತ ವಿಶೇಷ ಗಮನ ಹರಿಸಿ
  6. ಅರ್ಧಕ್ಕೆ ಶಾಲೆ ಬಿಟ್ಟ ಮಕ್ಕಳ ಕರೆ ತರುವ ಯತ್ನ ಮಾಡ್ಬೇಕು
  7. ಗ್ರಾಮಗಳಲ್ಲಿ ಜಾಥಾ ಮಾಡಿ ಶಿಕ್ಷಣದ ಬಗ್ಗೆ ಅರಿವು ಮೂಡಿಸಿ
  8. ಸರ್ಕಾರದ ಸೌಲಭ್ಯಗಳ ಕುರಿತು ಕರಪತ್ರಗಳನ್ನ ಹಂಚಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು