AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 29ರಿಂದ ಸರ್ಕಾರಿ, ಪ್ರೌಢಶಾಲೆಗಳ ಪುನಾರಂಭ: ಶಿಥಿಲಾವಸ್ಥೆ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್​

2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದು, ಮೇ 29ರಿಂದ ರಾಜ್ಯದಲ್ಲಿ ಸರ್ಕಾರಿ, ಪ್ರೌಢಶಾಲೆಗಳ ಪುನಾರಂಭಗೊಳ್ಳಲಿವೆ ಎಂದು ತಿಳಿಸಿದೆ.

ಮೇ 29ರಿಂದ ಸರ್ಕಾರಿ, ಪ್ರೌಢಶಾಲೆಗಳ ಪುನಾರಂಭ: ಶಿಥಿಲಾವಸ್ಥೆ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:May 26, 2023 | 3:18 PM

Share

ಬೆಂಗಳೂರು: 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದ್ದು, ಮೇ 29ರಿಂದ ರಾಜ್ಯದಲ್ಲಿ ಸರ್ಕಾರಿ, ಪ್ರೌಢಶಾಲೆ (Govt, high schools) ಗಳ ಪುನಾರಂಭಗೊಳ್ಳಲಿವೆ ಎಂದು ತಿಳಿಸಿದೆ. ಜೊತೆಗೆ ಮುಂಗಾರು ಆರಂಭ ಹಿನ್ನಲೆ ಅಲರ್ಟ್ ಆಗಿರುವಂತೆ ಸೂಚನೆ ನೀಡಿದ್ದು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್​ ನೀಡಿದೆ. ಶಾಲೆ ಆರಂಭಕ್ಕೂ ಮೊದಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲು ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಬಿಸಿಯೂಟದಲ್ಲಿ ಸಿಹಿ ಉಪಹಾರ

ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಈಗಾಗಲೇ ಆರಂಭವಾಗಿದೆ. ಶಾಲಾ ಕೊಠಡಿ, ಶೌಚಾಲಯ, ಕಾಂಪೌಂಡ್​​ಗಳ ಶಿಥಿಲಗೊಂಡ ಬಗ್ಗೆ ಪರಿಶೀಲನೆ ನಡೆಸಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರ ಗಮನಕ್ಕೆ ತಂದು ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿಹಿ ಉಪಹಾರ ವಿತರಿಸಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Textbook Controversy: ಶಾಲಾರಂಭಕ್ಕೂ ಮುನ್ನವೇ ಮತ್ತೆ ಶುರುವಾಯ್ತು ಪಠ್ಯ ಪರಿಷ್ಕರಣೆ ದಂಗಲ್, ಹೆಡ್ಗೆವಾರ್ ಪಾಠಕ್ಕೆ ಬೀಳುತ್ತಾ ಬ್ರೇಕ್?

ಜೂನ್ 1ರಿಂದ ಶಾಲಾ ತರಗತಿಗಳನ್ನು ಆರಂಭಿಸುವ ಬಗ್ಗೆ ಸೂಚನೆ ನೀಡಿದ್ದು, ಮಳೆಯಿಂದಾಗಿ ಹಲವು ಭಾಗದಲ್ಲಿ ಹಳ್ಳ, ಕೊಳ್ಳ, ನದಿಗಳು ತುಂಬಿವೆ. ರಸ್ತೆ ಹಾಳಾಗಿದ್ದರೇ ಮಕ್ಕಳನ್ನು ಶಾಲೆಗೆ ಬರಲು ಒತ್ತಾಯಿಸಬಾರದು. ಅಧಿಕಾರಿಗಳ ಗಮನಕ್ಕೆ ತಂದು ಶಾಲೆಗೆ ರಜೆ ಘೋಷಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Text Book Row: ಮತ್ತೆ ಪರಿಷ್ಕರಣೆ ಆಗಲಿದೆಯೇ ಪಠ್ಯ ಪುಸ್ತಕ; ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ವಿವರ ಹೀಗಿದೆ

  • ಮೊದಲನೇ ಅವಧಿಯ ಶಾಲಾ ಕರ್ತವ್ಯ ದಿನಗಳು: ಮೇ 29, 2023 ರಿಂದ 02-10-2023ರ ವರೆಗೆ.
  • ಎರಡನೇ ಅವಧಿಯ ಶಾಲಾ ಕರ್ತವ್ಯ ದಿನಗಳು: 25-10-23 ರಿಂದ 10-04-24ರ ವರೆಗೆ.
  • ದಸರಾ ರಜೆ: 8-10- 23 ರಿಂದ 24-10-23ರ ವರೆಗೆ.
  • ಬೇಸಿಗೆ ರಜೆ: 11-4-24 ರಿಂದ 28-5-24ರ ವರೆಗೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:17 pm, Fri, 26 May 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!