AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka SSLC Result 2022: ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯವಾಣಿ, ಏನೇ ಒತ್ತಡವಿದ್ದರೂ ಕರೆ ಮಾಡಿ ನಿಮ್ಹಾನ್ಸ್ ವೈದ್ಯರೊಂದಿಗೆ ಮಾತಾಡಿ

080-46110007 ಸಂಖ್ಯೆಗೆ ಕರೆ ಮಾಡಿ ವಿದ್ಯಾರ್ಥಿಗಳು ಸಲಹೆ ಪಡೆಯಬಹುದು. ಸಹಾಯವಾಣಿ ಮೂಲಕ ವಿದ್ಯಾರ್ಥಿಗಳಿಗೆ ಟೆಲಿ ಕೌನ್ಸಿಲಿಂಗ್ ಮಾಡಲಾಗುತ್ತೆ. ಮಾನಸಿಕ ಆರೋಗ್ಯದ ಬಗ್ಗೆ ನಿಮ್ಹಾನ್ಸ್ ವೈದ್ಯರು ಮಾಹಿತಿ ನೀಡಲಿದ್ದಾರೆ.

Karnataka SSLC Result 2022: ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯವಾಣಿ, ಏನೇ ಒತ್ತಡವಿದ್ದರೂ ಕರೆ ಮಾಡಿ ನಿಮ್ಹಾನ್ಸ್ ವೈದ್ಯರೊಂದಿಗೆ ಮಾತಾಡಿ
ಸಾಂಧರ್ಬಿಕ ಚಿತ್ರ Image Credit source: Hindustan Times
TV9 Web
| Updated By: ಆಯೇಷಾ ಬಾನು|

Updated on:May 18, 2022 | 10:16 PM

Share

ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ ಹಿನ್ನೆಲೆ ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ನಿಮ್ಹಾನ್ಸ್ ಸಹಾಯದೊಂದಿಗೆ ರಾಜ್ಯ ಆರೋಗ್ಯ ಇಲಾಖೆ ಸಹಾಯವಾಣಿ ತೆರೆದಿದೆ. 080-46110007 ಸಂಖ್ಯೆಗೆ ಕರೆ ಮಾಡಿ ವಿದ್ಯಾರ್ಥಿಗಳು ಸಲಹೆ ಪಡೆಯಬಹುದು. ಸಹಾಯವಾಣಿ ಮೂಲಕ ವಿದ್ಯಾರ್ಥಿಗಳಿಗೆ ಟೆಲಿ ಕೌನ್ಸಿಲಿಂಗ್ ಮಾಡಲಾಗುತ್ತೆ. ಮಾನಸಿಕ ಆರೋಗ್ಯದ ಬಗ್ಗೆ ನಿಮ್ಹಾನ್ಸ್ ವೈದ್ಯರು ಮಾಹಿತಿ ನೀಡಲಿದ್ದಾರೆ.

ಆನ್​​ಲೈನ್​ನಲ್ಲಿ ಫಲಿತಾಂಶ ನೋಡುವುದು ಹೇಗೆ? ಇದರ ಮೇಲೆ ಕ್ಲಿಕ್ ಮಾಡಿ

ನಾಳೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ Karnataka SSLC Result 2022 | ಕರ್ನಾಟಕ SSLC ಫಲಿತಾಂಶ 2022: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (KSEEB) 10 ನೇ ತರಗತಿ (SSLC) ಫಲಿತಾಂಶವನ್ನು (Result) ನಾಳೆ (ಮೇ 19) ರಂದು ಪ್ರಕಟಿಸಲಿದೆ. SSLC ಫಲಿತಾಂಶ 2022 ಅನ್ನು ಅಧಿಕೃತ ವೆಬ್‌ಸೈಟ್‌- sslc.karnataka.gov.in ನಲ್ಲಿ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ SSLC ಪರೀಕ್ಷೆಯ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕು. ಕರ್ನಾಟಕ SSLC 2022 ಪರೀಕ್ಷೆಗಳು ಮಾರ್ಚ್ 28 ಮತ್ತು ಏಪ್ರಿಲ್ 11 ರ ನಡುವೆ ನಡೆದವು. ಈ ವರ್ಷ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು KSEEB 10 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದರು. ಇದನ್ನೂ ಓದಿ: ಉತ್ತರ ಪ್ರದೇಶ: ಲಖನೌ ವಿಶ್ವವಿದ್ಯಾಲಯದಲ್ಲಿ ದಲಿತ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆ

10 ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ವಿದ್ಯಾರ್ಥಿಗಳು ಕನಿಷ್ಠ 35 ಶೇಕಡಾ ಅಂಕಗಳನ್ನು ಗಳಿಸಬೇಕು. ವಿದ್ಯಾರ್ಥಿಗಳು ಎಲ್ಲಾ ವೈಯಕ್ತಿಕ ವಿಷಯಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಗಳಿಸಬೇಕು. ಒಂದು ಅಥವಾ ಎರಡು ವಿಷಯಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಪಡೆಯಲು ಸಾಧ್ಯವಾಗದವರು ಕಂಪಾರ್ಟ್‌ಮೆಂಟ್ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ.

Published On - 10:16 pm, Wed, 18 May 22

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು