AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮತ್ತೊಂದು ಕೊಡುಗೆ: ಬೀದರ್​ನಲ್ಲಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆರೋಗ್ಯ ವಿವಿ ಅನುಮತಿ

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆರೋಗ್ಯ ವಿವಿಯಿಂದ ಅನುಮತಿ ನೀಡಲಾಗಿದೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮತ್ತೊಂದು ಕೊಡುಗೆ: ಬೀದರ್​ನಲ್ಲಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆರೋಗ್ಯ ವಿವಿ ಅನುಮತಿ
ಸಚಿವ ಡಾ.ಕೆ. ಸುಧಾಕರ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 30, 2022 | 9:51 PM

Share

ಬೀದರ್: ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ (BSc Nursing) ಆರಂಭಿಸಲು ಆರೋಗ್ಯ ವಿವಿಯಿಂದ ಅನುಮತಿ ನೀಡಲಾಗಿದೆ. ಈ ಕುರಿತಾಗಿ ಸಚಿವ ಡಾ. ಕೆ. ಸುಧಾಕರ ಅವರು ತಮ್ಮ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮತ್ತೊಂದು ಕೊಡುಗೆ. ಯಾದಗಿರಿಯಲ್ಲಿ 150 ಎಂಬಿಬಿಎಸ್ ಸೀಟುಗಳೊಂದಿಗೆ ನೂತನ ಸರ್ಕಾರಿ ಮೆಡಿಕಲ್ ಕಾಲೇಜಿನ ಆರಂಭಕ್ಕೆ ಅನುಮತಿ ದೊರೆತಿರುವ ಬೆನ್ನಲ್ಲೇ ಈಗ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ ಆರಂಭಿಸಲು ಆರೋಗ್ಯ ವಿವಿಯಿಂದ ಅನುಮತಿ ದೊರೆತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ಅಲ್ಪಾವಧಿ ಕೋರ್ಸ್ ಪ್ರಾರಂಭಕ್ಕೆ ಸರ್ಕಾರ ಚಿಂತನೆ: ಸಿಎಂ ಬೊಮ್ಮಾಯಿ

60 ಸೀಟುಗಳ ಪ್ರವೇಶಮಿತಿ

ರಾಜೀವ್​ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿನಿಯಮ, 1994ರ ಕಲಂ 45(5)ರಡಿ ಅಧಿಕಾರವನ್ನು ಚಲಾಯಿಸಿ, ಬೀದರ್​ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲೆಯಲ್ಲಿ ಬಿ.ಎಸ್ಸಿ ನರ್ಸಿಂಗ್​ ಕೋರ್ಸ್​ನ್ನು 60 ಸೀಟುಗಳ ಪ್ರವೇಶಮಿತಿಯೊಂದಿಗೆ 2022-23ನೇ ಸಾಲಿನಿಂದ ಹೊಸದಾಗಿ ಪ್ರಾರಂಭಿಸಲು ಅನುಮತಿ ನೀಡಿದ್ದು, ಕೆಲ ಷರತ್ತುಗಳನ್ನು ಸಹ ವಿಧಿಸಲಾಗಿದೆ.

ಇದನ್ನೂ ಓದಿ: Pariksha Pe Charcha 2023: ಪರೀಕ್ಷಾ ಪೇ ಚರ್ಚಾ 2023 ನೋಂದಣಿಗೆ ಇಂದು ಕೊನೆ ದಿನಾಂಕ

ವಿದ್ಯಾರ್ಥಿಗಳ ಕಲಿಕೆ ಅನುಕೂಲ

ಆರೋಗ್ಯ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ಈ ಹಿಂದೆಯೇ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸುತ್ತು. ಅದನ್ನು ಪರಿಶೀಲಿಸಿರುವ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ವೈದ್ಯಕೀಯ ಕ್ಷೇತ್ರಾಸಕ್ತ ವಿದ್ಯಾರ್ಥಿಗಳ ಕಲಿಕೆ ಅನುಕೂಲವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:37 pm, Fri, 30 December 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ