AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದ ಹೈಕೋರ್ಟ್

ಸರ್ಕಾರದ ಕ್ರಮ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ ಶಾಸ್ತ್ರೀಯವಾದ ಕನ್ನಡ ಕಲಿಯುವಂತೆ ಆದೇಶದಲ್ಲಿ ಸೂಚಿಸಲಾಗಿಲ್ಲ. ಸಾಮಾನ್ಯ ಕನ್ನಡವನ್ನು ಕಲಿಸುವ ಉದ್ದೇಶದಿಂದ ಸರ್ಕಾರ ಆದೇಶ ನೀಡಿದೆ.

ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
TV9 Web
| Edited By: |

Updated on:Oct 26, 2021 | 5:33 PM

Share

ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ವಿವಾದಕ್ಕೆ ಒಳಗಾಗಿದೆ. ಸರ್ಕಾರದ ಕ್ರಮ ಪ್ರಶ್ನಿಸಿ ಸಂಸ್ಕೃತ ಭಾರತಿ ಕರ್ನಾಟಕ ಟ್ರಸ್ಟ್ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ತಿ ಹಾಗೂ ನ್ಯಾ. ಸಚಿನ್ ಶಂಕರ್ ಮಗದುಮ್ ರವರ ಪೀಠ ಸರ್ಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಆದೇಶಗಳನ್ನು ವಿದ್ಯಾರ್ಥಿಗಳ ಮೇಲೆ ಹೇರುವುದು ಸೂಕ್ತವಲ್ಲ. ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸಲಹೆ ನೀಡಿದೆ.

ಇದೇ ವೇಳೆ ಸರ್ಕಾರದ ಕ್ರಮ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ ಶಾಸ್ತ್ರೀಯವಾದ ಕನ್ನಡ ಕಲಿಯುವಂತೆ ಆದೇಶದಲ್ಲಿ ಸೂಚಿಸಲಾಗಿಲ್ಲ. ಸಾಮಾನ್ಯ ಕನ್ನಡವನ್ನು ಕಲಿಸುವ ಉದ್ದೇಶದಿಂದ ಸರ್ಕಾರ ಆದೇಶ ನೀಡಿದೆ. ಸರ್ಕಾರದ ಕ್ರಮ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಆಕ್ಷೇಪಣೆ ಸಲ್ಲಿಸುವುದಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಹೈಕೋರ್ಟ್​ನಲ್ಲಿ ವಾದ ಮಂಡಿಸಿದರು. ಆದರೆ ಸರ್ಕಾರದ ವಾದವನ್ನು ಹೈಕೋರ್ಟ್ ಒಪ್ಪಲಿಲ್ಲ. ಬದಲಿಗೆ ಸರ್ಕಾರದ ಆದೇಶ ಮರುಪರಿಶೀಲಿಸುವಂತೆ ಸಲಹೆ ನೀಡಿದೆ.

2020ರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಿಕೊಂಡಿರುವ ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಿದೆ. 2021-22 ರ ಸಾಲಿನ ಪದವಿ ತರಗತಿಗಳ ನಾಲ್ಕು ಸೆಮಿಸ್ಟರ್​ಗಳಲ್ಲಿ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆಗಸ್ಟ್ 7, ಸೆಪ್ಟೆಂಬರ್ 25 ರಂದು ಎರಡು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಎರಡು ಭಾಷೆಗಳ ಪೈಕಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಯಬೇಕೆಂದು ಸೂಚಿಸಿದೆ. ಕನ್ನಡ ಮತ್ತು ಕನ್ನಡೇತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪಠ್ಯಪುಸ್ತಕಗಳನ್ನೂ ಒದಗಿಸಲಾಗಿದೆ. ಆದರೆ ಸರ್ಕಾರದ ಕ್ರಮ ಪ್ರಶ್ನಿಸಿರುವ ಅರ್ಜಿದಾರರು ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದರಿಂದ ಆದೇಶ ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.

ಅರ್ಜಿದಾರರ ವಾದ ಹಲವು ವಿದ್ಯಾರ್ಥಿಗಳು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದಲ್ಲಿ ಕನ್ನಡ ಕಲಿತಿರುವುದಿಲ್ಲ. ಆದರೆ ಪದವಿ ಸೇರಿದ ಕೂಡಲೇ ಕನ್ನಡ ಕಲಿಯಬೇಕೆಂದು ಕಡ್ಡಾಯಗೊಳಿಸುವುದು ಸರಿಯಲ್ಲ. ನಮ್ಮ ರಾಜ್ಯವಲ್ಲದೇ, ಹೊರ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಸರ್ಕಾರದ ಕ್ರಮದಿಂದ ಈ ಎಲ್ಲಾ ವಿದ್ಯಾರ್ಥಿಗಳೂ ತೊಂದರೆ ಅನುಭವಿಸುವಂತಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ ಆಯ್ಕೆ ಆಧರಿತ ಶಿಕ್ಷಣ ಕ್ಕೆ ಅವಕಾಶ ಕಲ್ಪಿಸಲಾಗಿದೆಯೇ ಹೊರತು ಕನ್ನಡ ಕಲಿಕೆ ಕಡ್ಡಾಯಗೊಳಿಸಲು ಶಿಫಾರಸು ಮಾಡಲಾಗಿಲ್ಲ. ಹೀಗಿರುವಾಗ ಸರ್ಕಾರದ ಆದೇಶ ಏಕಪಕ್ಷೀಯವಾಗಿದೆ. ಸಂವಿಧಾನದ ಸಮಾನತೆ, ಅಭಿವ್ಯಕ್ತಿ ಹಾಗೂ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ. ಹೀಗಾಗಿ ಕನ್ನಡ ಕಲಿಕೆ ಕಡ್ಡಾಯ ಆದೇಶ ರದ್ದುಪಡಿಸಬೇಕೆಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಇದನ್ನೂ ಓದಿ

ಶಾಲೆಗೆ ಚಕ್ಕರ್ ಕೂಲಿಗೆ ಹಾಜರ್; ಟಿವಿ9 ವರದಿ ಪ್ರಸಾರವಾದ ಬೆನ್ನೆಲೆ ಎಚ್ಚೆತ್ತ ಅಧಿಕಾರಿಗಳು

ಶಿಕ್ಷಣ ವ್ಯವಸ್ಥೆ ಬದಲಾವಣೆಗೆ ಆಗ್ರಹಿಸಿ ಹಾಸನದಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಪ್ರಕರಣ; ಉನ್ನತ ಶಿಕ್ಷಣ ಸಚಿವರು ಹೇಳಿದ್ದು ಹೀಗೆ

Published On - 4:54 pm, Tue, 26 October 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು