AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯು ಪರೀಕ್ಷೆ ಇಲ್ಲದೆ ಎಲ್ಲರೂ ತೇರ್ಗಡೆ: ಪದವಿ ತರಗತಿಗೆ ಕೊಠಡಿ, ಉಪನ್ಯಾಸಕರ ಸಮಸ್ಯೆ ಸಾಧ್ಯತೆ; ಪರಿಹಾರ ಕ್ರಮಕ್ಕೆ ಮುಂದಾದ ಉನ್ನತ ಶಿಕ್ಷಣ ಇಲಾಖೆ

ಇದು ಕಾಲೇಜುಗಳಲ್ಲಿ ಸಮಸ್ಯೆ ಅರಿಯಲು ಸಹಕಾರಿಯಾಗಲಿದೆ. ಬಳಿಕ ಪದವಿ ತರಗತಿಗಳಿಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ ಎಂದು ಟಿವಿ 9ಗೆ ಬೆಂಗಳೂರು ಕೇಂದ್ರ ವಿಶ್ವ ವಿದ್ಯಾಲಯ ಕುಲಪತಿ ಲಿಂಗರಾಜ ಗಾಂಧಿ ಹೇಳಿಕೆ ನೀಡಿದ್ದಾರೆ.

ಪಿಯು ಪರೀಕ್ಷೆ ಇಲ್ಲದೆ ಎಲ್ಲರೂ ತೇರ್ಗಡೆ: ಪದವಿ ತರಗತಿಗೆ ಕೊಠಡಿ, ಉಪನ್ಯಾಸಕರ ಸಮಸ್ಯೆ ಸಾಧ್ಯತೆ; ಪರಿಹಾರ ಕ್ರಮಕ್ಕೆ ಮುಂದಾದ ಉನ್ನತ ಶಿಕ್ಷಣ ಇಲಾಖೆ
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on: Jul 24, 2021 | 2:48 PM

Share

ಬೆಂಗಳೂರು: ಪಿಯು ಪರೀಕ್ಷೆ ಇಲ್ಲದೆ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ ಪರಿಣಾಮ ಇದೀಗ ಪದವಿ ಕಾಲೇಜುಗಳಿಗೆ ಕಮಿಟಿ ರಚಿಸುವಂತೆ ಸೂಚನೆ ನೀಡಲಾಗಿದೆ. ಪದವಿ ಕಾಲೇಜುಗಳು ಕಮಿಟಿ ರಚಿಸುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ ಮತ್ತು ರಾಜ್ಯದ 73 ವಿಶ್ವ ವಿದ್ಯಾಲಯಗಳಿಗೂ ನಿರ್ದೇಶನ ನೀಡಲಾಗಿದೆ. ಈ ಪ್ರಕ್ರಿಯೆಗೆ ಕಾಲೇಜುಗಳ ಪ್ರಾಂಶುಪಾಲರಿಗೆ ಒಂದು ವಾರಗಳ ಗಡುವು ಕೂಡ ನೀಡಲಾಗಿದ್ದು, LIC (Local Enquiry committee) ರಚಿಸುವಂತೆ ನಿರ್ದೇಶನ ನೀಡಲಾಗಿದೆ.

ಈ ಬಾರಿ ಕೊರೊನಾ ಕಾರಣದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲದೆ ಸುಮಾರು 6,66,497 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಇದರಿಂದಾಗಿ ಮುಂದೆ ಪದವಿ ತರಗತಿಗಳಿಗೆ ಕೊಠಡಿಗಳು, ಉಪನ್ಯಾಸಕರ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಆ ಕಾರಣದಿಂದ ಎಲ್ಲಾ ಸರ್ಕಾರಿ, ಖಾಸಗಿ ಪದವಿ ಕಾಲೇಜುಗಳಿಗೂ ಕಮಿಟಿ ರಚಿಸುವಂತೆ ಆದೇಶ ಹೊರಡಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಿಂದ ರಾಜ್ಯದ 73 ವಿವಿಗಳಿಗೂ ನಿರ್ದೇಶನ ನೀಡಲಾಗಿದೆ.

ರಾಜ್ಯದಲ್ಲಿರುವ ಎಲ್ಲ 430 ಸರ್ಕಾರಿ ಕಾಲೇಜುಗಳು, 365 ಅನುದಾನಿತ ಕಾಲೇಜುಗಳು, ಹಾಗೂ 900ಕ್ಕೂ ಹೆಚ್ಚು ಕಾಲೇಜುಗಳಿಗೆ ಗಡುವು ನೀಡಲಾಗಿದೆ. ಜುಲೈ 31ರ ಒಳಗೆ ತಮ್ಮ ಕಾಲೇಜುಗಳಲ್ಲಿ ಲಭ್ಯವಿರುವ ಕಟ್ಟಡಗಳು, ಪ್ರಾಧ್ಯಾಪಕರು, ಗ್ರಂಥಾಲಯ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳ ಮಾಹಿತಿ ನೀಡಿಲು ಡೆಡ್ ಲೈನ್ ನೀಡಲಾಗಿದೆ.

ಇದು ಕಾಲೇಜುಗಳಲ್ಲಿ ಸಮಸ್ಯೆ ಅರಿಯಲು ಸಹಕಾರಿಯಾಗಲಿದೆ. ಬಳಿಕ ಪದವಿ ತರಗತಿಗಳಿಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ ಎಂದು ಟಿವಿ 9ಗೆ ಬೆಂಗಳೂರು ಕೇಂದ್ರ ವಿಶ್ವ ವಿದ್ಯಾಲಯ ಕುಲಪತಿ ಲಿಂಗರಾಜ ಗಾಂಧಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: 9, 10, 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಆ. 2 ರಿಂದ ಶಾಲೆ ಆರಂಭ? ಆರೋಗ್ಯ ಇಲಾಖೆ ಅನುಮತಿಗೆ ಕಾದಿರುವ ಶಿಕ್ಷಣ ಇಲಾಖೆ

Karnataka PUC Exams 2021: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

(Higher Education Ministry suggests Colleges of Karnataka to form a Committee)

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!