AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಬಿಆರ್‌ಟಿಎಸ್‌ ಬಸ್‌ ಕಾರ್ಯಾಚರಣೆ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲು ‘ಚಿಗರಿ ಮಿತ್ರ’ ಅಭಿಯಾನ ಪ್ರಾರಂಭ

ಸರ್ಕಾರಿ ಶಾಲೆಗಳ 6 ಮತ್ತು 7 ನೇ ತರಗತಿಯ ವಿದ್ಯಾರ್ಥಿಗಳಿಗೆ BRTS ಬಸ್ ಹೇಗೆ ಕಾರ್ಯ ನಿರ್ವಹಿಸುತ್ತದೆ ಮತ್ತು ಅದನ್ನು ಹೇಗೆ ಬಳಸುವುದು ಎಂಬುದರ ಕುರಿತು ಶಿಕ್ಷಣ ನೀಡುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ.

ಹುಬ್ಬಳ್ಳಿಯಲ್ಲಿ ಬಿಆರ್‌ಟಿಎಸ್‌ ಬಸ್‌ ಕಾರ್ಯಾಚರಣೆ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲು ‘ಚಿಗರಿ ಮಿತ್ರ’ ಅಭಿಯಾನ ಪ್ರಾರಂಭ
ಚಿಗರಿ ಮಿತ್ರImage Credit source: Deccan Herald
ನಯನಾ ಎಸ್​ಪಿ
|

Updated on:Aug 09, 2023 | 12:48 PM

Share

6 ಮತ್ತು 7ನೇ ತರಗತಿಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬಿಆರ್‌ಟಿಎಸ್ (BRTS) ಬಸ್‌ಗಳ ಕಾರ್ಯಾಚರಣೆ ಕುರಿತು ಶಿಕ್ಷಣ ಇಲಾಖೆ, ಧಾರವಾಡ ಮತ್ತು ಎಚ್‌ಡಿಬಿಆರ್‌ಟಿಎಸ್ (HDBRTS)(ಹುಬ್ಬಳ್ಳಿ-ಧಾರವಾಡ ಬಸ್ ರ್ಯಾಪಿಡ್ ಟ್ರಾನ್ಸಿಟ್ ಸಿಸ್ಟಮ್) ವತಿಯಿಂದ ‘ಚಿಗರಿ ಮಿತ್ರ’ ಅಭಿಯಾನವನ್ನು ಪ್ರಾರಂಭಿಸಲಾಯಿತು. ಈ ಉಪಕ್ರಮದಲ್ಲಿ ಹುಬ್ಬಳ್ಳಿಯ ಬಸವೇಶ್ವರ ನಗರದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಬಿಆರ್‌ಟಿಎಸ್ ಬಸ್‌ಗಳಲ್ಲಿ ಒಂದು ದಿನದ ಶೈಕ್ಷಣಿಕ ಪ್ರವಾಸದಲ್ಲಿ ಪಾಲ್ಗೊಂಡರು.

ಪ್ರವಾಸದ ಸಮಯದಲ್ಲಿ, ಕಂಟ್ರೋಲ್ ರೂಂ, ಸಿಗ್ನಲ್‌ಗಳು, ಬಸ್ ನಿಲ್ದಾಣಗಳು ಮತ್ತು ಒಟ್ಟಾರೆ ಕಾರ್ಯನಿರ್ವಹಣೆ ಸೇರಿದಂತೆ ಬಿಆರ್‌ಟಿಎಸ್ ಕಾರ್ಯಾಚರಣೆಗಳ ವಿವಿಧ ಅಂಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು. ಕಾರ್ಯಕ್ರಮವು ಬಿಆರ್‌ಟಿಎಸ್ ನಿಯಂತ್ರಣ ಕೇಂದ್ರದಲ್ಲಿ ಉದ್ಘಾಟನಾ ಸಮಾರಂಭದ ನಂತರ ಪವರ್‌ಪಾಯಿಂಟ್ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನದೊಂದಿಗೆ ಪ್ರಾರಂಭವಾಯಿತು. ಎಚ್-ಡಿ ಬಿಆರ್‌ಟಿಎಸ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಜೇಡೇನವರ್ ಅವರು ವಿದ್ಯಾರ್ಥಿಗಳಿಗೆ ಯೋಜನೆಯ ವಿವರಗಳು ಮತ್ತು ಕಾರ್ಯವೈಖರಿಯನ್ನು ವಿವರಿಸಿದರು.

ಮಕ್ಕಳಲ್ಲಿ ಸಾರ್ವಜನಿಕ ಸಾರಿಗೆ ನಿಯಮಗಳು ಮತ್ತು ಸುರಕ್ಷಿತ ಅಭ್ಯಾಸಗಳ ಅರಿವನ್ನು ಉತ್ತೇಜಿಸುವುದು ಅಭಿಯಾನದ ಗುರಿಯಾಗಿದೆ. ವಿದ್ಯಾರ್ಥಿಗಳಿಗೆ BRTS ನಿಯಮಗಳನ್ನು ಕಲಿಸಲಾಯಿತು ಮತ್ತು ಸಂವಾದಾತ್ಮಕ ಕಾರ್ಯಾಗಾರದಲ್ಲಿ ಹೆಚ್ಚಿನ ಮಾಹಿತಿಯನ್ನು ಒದಗಿಸಲಾಯಿತು. ಸರ್ಕಾರಿ ಶಾಲೆಗಳಲ್ಲಿ 6 ಮತ್ತು 7 ನೇ ತರಗತಿಯ ಒಟ್ಟು 67,281 ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವಂತೆ ಪ್ರತಿ ತಿಂಗಳು ಎರಡು ಸೆಷನ್ಗಳನ್ನು ನಡೆಸಲು ಉಪಕ್ರಮವು ಯೋಜಿಸಿದೆ.

ಇದನ್ನೂ ಓದಿ: ಗ್ರಾಮೀಣ ಭಾರತದ ಅರ್ಧದಷ್ಟು ವಿದ್ಯಾರ್ಥಿಗಳು ಸ್ಮಾರ್ಟ್‌ಫೋನ್‌ ಹೊಂದಿದ್ದರೂ ಅದನ್ನು ಮನರಂಜನೆಗಾಗಿ ಬಳಸುತ್ತಾರೆ: ವರದಿ

ಎಚ್‌ಡಿ ಬಿಆರ್‌ಟಿಎಸ್‌ನ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ ಬಂಜಂತ್ರಿ ಅವರು ಅಭಿಯಾನದ ಯಶಸ್ಸಿನ ಬಗ್ಗೆ ಸಂತಸ ವ್ಯಕ್ತಪಡಿಸಿದರು, ವಿದ್ಯಾರ್ಥಿಗಳು ಚಿಗರಿ ಬಸ್‌ನಲ್ಲಿ ಪ್ರಯಾಣಿಸುವ ಮತ್ತು ಅಧಿಕಾರಿಗಳೊಂದಿಗೆ ಸಂವಾದದ ಅನುಭವವನ್ನು ಆನಂದಿಸಿದರು. ಕಲಿಕಾ ಪ್ರಕ್ರಿಯೆಗೆ ಪುಷ್ಟಿ ನೀಡುವ ರಸಪ್ರಶ್ನೆ ಸ್ಪರ್ಧೆಯೂ ನಡೆಯಿತು. ವಿದ್ಯಾರ್ಥಿನಿ ಯಶೋದಾ ಬಿ, BRTS ಸೇವೆಯು ಸುರಕ್ಷಿತವಾಗಿದೆ ಮತ್ತು ಉತ್ತಮವಾಗಿ ನಿರ್ವಹಿಸಲ್ಪಟ್ಟಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿಯಲ್ಲಿ ಹಂಚಿಕೊಂಡಿದ್ದಾರೆ.

ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:09 am, Wed, 9 August 23

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ