AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IBPS PO Admit card 2021: ಐಬಿಪಿಎಸ್​ ಆರ್​ಆರ್​ಬಿ ಸ್ಕೇಲ್​ 1 ಅಧಿಕಾರಿ ನೇಮಕಾತಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್ ಮಾಡುವ ವಿಧಾನ ಹೀಗಿದೆ

IBPS RRB PO Admit Card 2021: ಇದೀಗ ನಡೆಯುತ್ತಿರುವ ಪೂರ್ವಭಾವಿ ಪರೀಕ್ಷೆಯಲ್ಲಿ ಆಯ್ಕೆಯಾಗುವವರಿಗೆ ಸೆಪ್ಟೆಂಬರ್​ನಲ್ಲಿ ಐಬಿಪಿಎಸ್​ ಆರ್​ಆರ್​​ಬಿ ಮುಖ್ಯ ಪರೀಕ್ಷೆ ನಡೆಯಲಿದೆ.

IBPS PO Admit card 2021: ಐಬಿಪಿಎಸ್​ ಆರ್​ಆರ್​ಬಿ ಸ್ಕೇಲ್​ 1 ಅಧಿಕಾರಿ ನೇಮಕಾತಿ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್ ಮಾಡುವ ವಿಧಾನ ಹೀಗಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jul 17, 2021 | 4:27 PM

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಇನ್​ಸ್ಟಿಟ್ಯೂಟ್​ (IBPS)ನಿಂದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್​ (RRB)ಗಳ ಸ್ಕೇಲ್​ 1 ಅಧಿಕಾರಿಗಳ ಹುದ್ದೆಗಾಗಿ ನೇಮಕಾತಿ ಪೂರ್ವಭಾವಿ ಪರೀಕ್ಷೆ ಆಗಸ್ಟ್​ 1ರಿಂದ ಆಗಸ್ಟ್​ 7ರವರೆಗೆ ನಡೆಯಲಿದ್ದು, ಪರೀಕ್ಷಾರ್ಥಿಗಳ ಪ್ರವೇಶ ಪತ್ರ ಇಂದು (ಜು.17) ibps.in. ವೆಬ್​ಸೈಟ್​ನಲ್ಲಿ ಬಿಡುಗಡೆಯಾಗಿದೆ.

ಐಬಿಪಿಎಸ್​ ಆರ್​ಆರ್​ಬಿ ಸ್ಕೇಲ್​ 1 ಪರೀಕ್ಷೆಗಾಗಿ ಐಬಿಪಿಎಸ್​ ಅಧಿಸೂಚಿತ ವೆಕೆನ್ಸಿಗಳನ್ನು ಹೆಚ್ಚಿಸಿದೆ. ಅದರಲ್ಲಿ ಸ್ಕೇಲ್​ 1 ಅಧಿಕಾರಿಗಳ ಖಾಲಿಹುದ್ದೆಯನ್ನು 4,257 ರಿಂದ 4,716 ಕ್ಕೆ ಏರಿಕೆ ಮಾಡಲಾಗಿದೆ. ಐಬಿಪಿಎಸ್​ ಆರ್​ಆರ್​ಬಿ ಪೂರ್ವಭಾವಿ ಪರೀಕ್ಷೆಗಳು ಆಗಸ್ಟ್​ 1ರಿಂದ 7ರವರೆಗೆ ನಡೆಯುತ್ತವೆ. ಫಲಿತಾಂಶವೂ ಕೂಡ ಆಗಸ್ಟ್ ಕೊನೆಯೊಳಗೆ ಪ್ರಕಟಗೊಳ್ಳಲಿದೆ.

ಇನ್ನು ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರ ಡೌನ್​ಲೋಡ್ ಮಾಡಿಕೊಳ್ಳುವ ವಿಧಾನ ಹೀಗಿದೆ: 1. ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಇನ್​ಸ್ಟಿಟ್ಯೂಟ್​ನ ಅಧಿಕೃತ ವೆಬ್​ಸೈಟ್​ ibps.in ಗೆ ಭೇಟಿ ನೀಡಿ. 2. ಹೋಂಪೇಜ್​​ನಲ್ಲಿ ಕಾಣಿಸುವ ಸ್ಕ್ರಾಲಿಂಗ್​ ಲಿಂಕ್ ಮೇಲೆ ಕ್ಲಿಕ್​ ಮಾಡಿ 3. ಆಗ ಇನ್ನೊಂದು ಪೇಜ್​ ತೆರೆದುಕೊಳ್ಳುತ್ತದೆ. 4. ಅಲ್ಲಿ ನಿಮ್ಮ ಕ್ರೆಡೆನ್ಷಿಯಲ್​​ಗಳನ್ನು ನಮೂದಿಸಿ, ಲಾಗಿನ್​ ಆಗಿ 5. ಆಗ ಪ್ರವೇಶ ಪತ್ರ ಕಾಣಿಸುತ್ತದೆ. ಅದನ್ನು ಡೌನ್​ಲೋಡ್ ಮಾಡಿಕೊಳ್ಳಿ

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೆಡ್​ ಕಾಪಿಯೊಂದಿಗೆ ಮಾನ್ಯವಾಗಿರುವ ಐಡಿ ಪ್ರೂಫ್​ ಕೂಡ ಪರೀಕ್ಷಾ ಕೇಂದ್ರಕ್ಕೆ ತೆಗೆದುಕೊಂಡು ಹೋಗಬೇಕು. ಇದೀಗ ನಡೆಯುತ್ತಿರುವ ಪೂರ್ವಭಾವಿ ಪರೀಕ್ಷೆಯಲ್ಲಿ ಆಯ್ಕೆಯಾಗುವವರಿಗೆ ಸೆಪ್ಟೆಂಬರ್​ನಲ್ಲಿ ಐಬಿಪಿಎಸ್​ ಆರ್​ಆರ್​​ಬಿ ಮುಖ್ಯ ಪರೀಕ್ಷೆ ನಡೆಯಲಿದೆ. ಆಫೀಸರ್ ಸ್ಕೇಲ್ -1 ರ ಅಡಿಯಲ್ಲಿ ಹೊಸದಾಗಿ ನೇಮಕಗೊಳ್ಳುವವರಿಗೆ ಅಧಿಸೂಚನೆ ಪ್ರಕಾರ 30-35 ಸಾವಿರ ರೂ.ವೇತನ ನೀಡಲಾಗುತ್ತದೆ ಮತ್ತು ಹೆಚ್ಚುವರಿ ಭತ್ಯೆಗಳೂ ಇರಲಿವೆ.

ಇದನ್ನೂ ಓದಿ: ‘ನಿಮ್ಮ ಪಯಣ ನರಕವಾಗಲಿ’: ಇಂದ್ರಜಿತ್​ ಫೋಟೋ ಇಟ್ಟು ಶ್ರದ್ಧಾಂಜಲಿ ಕೋರಿದ ದರ್ಶನ್​ ಅಭಿಮಾನಿಗಳು</strong

IBPS RRB PO 2021 admit card released check here to know the Download process

Published On - 4:26 pm, Sat, 17 July 21

ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಮಿನಿಸ್ಟರ್ ಪಿಎ ಸರ್ಫ್ರಾಜ್​ರನ್ನು ರೂಪೇಶ್ ಬ್ಲ್ಯಾಕ್​ಮೇಲ್ ಮಾಡಿರುವ ಆರೋಪ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಯಾವ ಇಲಾಖೆ ಮೇಲೂ ಸರ್ಕಾರಕ್ಕೆ ನಿಯಂತ್ರಣವಿಲ್ಲ, ಅದೇ ನೋವು: ರಾಜು ಕಾಗೆ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಬಾಯಿಗೆ ಹುಲ್ಲು ತುರುಕಿ ಪ್ರಾಣಿಯಂತೆ ನಡೆಸಿ ವಿಕೃತಿ ತೋರಿದ ಜನ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಸಿದ್ದರಾಮಯ್ಯ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗುವುದು ಯಾಕೆ? ವಿಜಯೇಂದ್ರ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ಮ್ಯೂಸಿಕ್​ ಫೆಸ್ಟಿವಲ್​ನಲ್ಲಿ 140ಕ್ಕೂ ಅಧಿಕ ಜನರ ಮೇಲೆ ಸಿರಿಂಜ್ ದಾಳಿ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ