AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IBPS SO Prelims Result 2021: ಐಬಿಪಿಎಸ್​ ಎಸ್​ಒ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ; ಜ.30ಕ್ಕೆ ಮುಖ್ಯ ಪರೀಕ್ಷೆ

ಸ್ಪೆಷಲಿಸ್ಟ್ ಆಫೀಸರ್​​ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1828 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಅದರಡಿ ಪೂರ್ವಭಾವಿ ಪರೀಕ್ಷೆಯೊಂದು ಮುಕ್ತಾಯಗೊಂಡಿದೆ. 2021ರ  ನವೆಂಬರ್​ 3ರಿಂದ ಅರ್ಜಿ ಸಲ್ಲಿಸುವಿಕೆ ಪ್ರಕ್ರಿಯೆ ಪ್ರಾರಂಭವಾಗಿತ್ತು

IBPS SO Prelims Result 2021: ಐಬಿಪಿಎಸ್​ ಎಸ್​ಒ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ; ಜ.30ಕ್ಕೆ ಮುಖ್ಯ ಪರೀಕ್ಷೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 19, 2022 | 3:20 PM

Share

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಸ್ಪೆಷಲಿಸ್ಟ್​ ಆಫೀಸರ್​​​ (SO)ಹುದ್ದೆ ನೇಮಕಾತಿಗಾಗಿ ಅಭ್ಯರ್ಥಿಗಳಿಗೆ ನಡೆಸಲಾಗಿದ್ದ ಪೂರ್ವಭಾವಿ ಪರೀಕ್ಷೆ (preliminary Exams) ಫಲಿತಾಂಶವನ್ನು ಐಬಿಪಿಎಸ್​ ತನ್ನ ಅಧಿಕೃತ ವೆಬ್​ಸೈಟ್​​ನಲ್ಲಿ  2022ರ ಜನವರಿ 18ರಂದು ಪ್ರಕಟಿಸಿದೆ. ಸ್ಪೆಷಲಿಸ್ಟ್ ಆಫೀಸರ್​ ಹುದ್ದೆಗೆ ಅರ್ಜಿ ಸಲ್ಲಿಸಿ, ಪೂರ್ವಭಾವಿ ಪರೀಕ್ಷೆ ಬರೆದವರು https://ibps.in. ವೆಬ್​ಸೈಟ್​ಗೆ ಭೇಟಿ ನೀಡಿ ಪರಿಶೀಲನೆ ಮಾಡಿಕೊಳ್ಳಬಹುದು. ಅಂದಹಾಗೇ, ಫಲಿತಾಂಶ ಜನವರಿ 24ರವರೆಗೂ ವೆಬ್​ಸೈಟ್​ನಲ್ಲಿ ಇರಲಿದೆ.

ರಿಸಲ್ಟ್ ನೋಡುವುದು ಹೇಗೆ? 1. ಮೊದಲು ಐಬಿಪಿಎಸ್​ನ ವೆಬ್​ಸೈಟ್​ https://ibps.in ಗೆ ಭೇಟಿ ನೀಡಿ 2. ಹೋಂ ಪೇಜ್​​ನಲ್ಲಿ ಕಾಣಿಸಿಕೊಳ್ಳುವ IBPS SO Prelims Result 2021 ಎಂಬ ಲಿಂಕ್​ ಮೇಲೆ ಕ್ಲಿಕ್​ ಮಾಡಿ. 3. ಅಲ್ಲಿ ನಿಮ್ಮ ನೋಂದಣಿ ನಂಬರ್​, ಹುಟ್ಟಿದ ದಿನಾಂಕ ನಮೂದಿಸಿ ಸಬ್​ಮಿಟ್​ ಬಟನ್​ ಮೇಲೆ ಕ್ಲಿಕ್​ ಮಾಡಿ 4. ಆಗ ಐಬಿಪಿಎಸ್​ ಎಸ್​ಒ ಪೂರ್ಭಭಾವಿ ಪರೀಕ್ಷೆ 2021ರ ನಿಮ್ಮ ಫಲಿತಾಂಶ ಅಲ್ಲಿ ಕಾಣಿಸಿಕೊಳ್ಳುತ್ತದೆ. 5. ಅದನ್ನು ಡೌನ್​ಲೋಡ್ ಮಾಡಿಕೊಳ್ಳಿ ಮತ್ತು ಅಗತ್ಯವಿರುವಷ್ಟು ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಐಬಿಪಿಎಸ್​ ಎಸ್​ಒ ಮುಖ್ಯ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ಈ ಪರೀಕ್ಷೆ ಜನವರಿ 30ರಂದು ನಡೆಯಲಿದೆ. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಪಾಸ್​ ಆದವರು ಮುಂದಿನ ಸುತ್ತು ಸಂದರ್ಶನವನ್ನು ಎದುರಿಸಬೇಕಾಗುತ್ತದೆ.  ಸ್ಪೆಷಲಿಸ್ಟ್ ಆಫೀಸರ್​​ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1828 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಅದರಡಿ ಪೂರ್ವಭಾವಿ ಪರೀಕ್ಷೆಯೊಂದು ಮುಕ್ತಾಯಗೊಂಡಿದೆ. 2021ರ  ನವೆಂಬರ್​ 3ರಿಂದ ಅರ್ಜಿ ಸಲ್ಲಿಸುವಿಕೆ ಪ್ರಕ್ರಿಯೆ ಪ್ರಾರಂಭವಾಗಿತ್ತು. ಡಿಸೆಂಬರ್​ 26ರಂದು ಪೂರ್ಭಾವಿ ಪರೀಕ್ಷೆ ನಡೆದಿತ್ತು. ಡಿಸೆಂಬರ್​ 10ರಂದು ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆಯಾಗಿತ್ತು.

ಇದನ್ನೂ ಓದಿ: ಅಪ್ಪ, ಅಮ್ಮ, ಅಪ್ಪು ಅವರನ್ನು ಕಳೆದುಕೊಂಡ ನೋವು ಕಾಡುತ್ತಿದೆ’ ಎಂದು ಬರ್ತ್​ಡೇ ಆಚರಣೆಗೆ ದುನಿಯಾ ವಿಜಯ್​ ಬ್ರೇಕ್​

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ