AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIM: ಐಐಎಂ ಇಂದೋರ್ ವಿದ್ಯಾರ್ಥಿಗೆ ರೂ.1.14 ಕೋಟಿ ವೇತನ ಪ್ಯಾಕೇಜ್!

ಐಐಎಂ ಇಂದೋರ್ ವಿದ್ಯಾರ್ಥಿಯು ಅಂತಿಮ ಕ್ಯಾಂಪಸ್ ಪ್ಲೇಸ್ಮೆಂಟ್ ಅಲ್ಲಿ ದೇಶೀಯ ಕಂಪನಿ ಉದ್ಯೋಗಕ್ಕಾಗಿ ₹ 1.14 ಕೋಟಿ ವೇತನ ಪ್ಯಾಕೇಜ್ ಪಡೆದಿದ್ದಾರೆ.

IIM: ಐಐಎಂ ಇಂದೋರ್ ವಿದ್ಯಾರ್ಥಿಗೆ ರೂ.1.14 ಕೋಟಿ ವೇತನ ಪ್ಯಾಕೇಜ್!
IIMI
ನಯನಾ ಎಸ್​ಪಿ
|

Updated on: Mar 23, 2023 | 11:16 AM

Share

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಇಂದೋರ್‌ನ (IIM Indore) ವಿದ್ಯಾರ್ಥಿಯೊಬ್ಬರಿಗೆ ದೇಶೀಯ ಕಂಪನಿಯೊಂದು (Domestic company) ಉದ್ಯೋಗಕ್ಕಾಗಿ ವಾರ್ಷಿಕ ವೇತನ ₹ 1.14 ಕೋಟಿ ಪ್ಯಾಕೇಜ್ ಅನ್ನು ನೀಡಿದೆ ಎಂದು IIM-I ಅಧಿಕಾರಿಯೊಬ್ಬರು ಬುಧವಾರ (ಮಾರ್ಚ್ 22) ತಿಳಿಸಿದ್ದಾರೆ. ಇದು ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದ ಫೈನಲ್ ಕ್ಯಾಂಪಸ್ ಪ್ಲೇಸ್ಮೆಂಟ್ ಸಮಯದಲ್ಲಿ ನೀಡಲಾದ ಅತ್ಯಧಿಕ ವೇತನ ಪ್ಯಾಕೇಜ್ ಆಗಿದೆ ಮತ್ತು ಇದು ಹಿಂದಿನ ಬಾರಿಗಿಂತ ₹65 ಲಕ್ಷ ಹೆಚ್ಚಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಳೆದ ಬಾರಿ, IIM-I ವಿದ್ಯಾರ್ಥಿಗಳ ಕ್ಯಾಂಪಸ್ ಪ್ಲೇಸ್ಮೆಂಟ್ ಸಮಯದಲ್ಲಿ ನೀಡಲಾದ ಅತ್ಯಧಿಕ ವೇತನವು ₹ 49 ಲಕ್ಷವಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಬಾರಿಯ ಕ್ಯಾಂಪಸ್ ಪ್ಲೇಸ್ಮೆಂಟ್​ಗೆ, 160 ಕ್ಕೂ ಹೆಚ್ಚು ದೇಶೀಯ ಮತ್ತು ವಿದೇಶಿ ಕಂಪನಿಗಳು IIM-I ನ 568 ವಿದ್ಯಾರ್ಥಿಗಳಿಗೆ ಸರಾಸರಿ ₹30.21 ಲಕ್ಷ ವೇತನವನ್ನು ನೀಡಿವೆ.

ಆಫರ್‌ಗಳನ್ನು ಪಡೆದವರಲ್ಲಿ ಎರಡು ವರ್ಷಗಳ ಸ್ನಾತಕೋತ್ತರ ಕಾರ್ಯಕ್ರಮ (PGP) ಮತ್ತು ಐದು ವರ್ಷಗಳ ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಮ್ಯಾನೇಜ್‌ಮೆಂಟ್ (IPM) ವಿದ್ಯಾರ್ಥಿಗಳು ಸೇರಿದ್ದಾರೆ. ಎರಡೂ ಕೋರ್ಸ್‌ಗಳನ್ನು ಎಂಬಿಎಗೆ ಸಮಾನವೆಂದು ಪರಿಗಣಿಸಲಾಗುತ್ತದೆ ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಟ್ಟದ ವಿಷಯ ಸಂಗ್ರಹಕ್ಕಾಗಿ ಜಾನಪದ ವಿವಿ ಸ್ಥಾಪನೆ: ಸಿಎಂ ಬೊಮ್ಮಾಯಿ

IIM-I ನಿರ್ದೇಶಕ ಪ್ರೊ.ಹಿಮಾನ್ಶು ರೈ ಮಾತನಾಡಿ, ವಿದ್ಯಾರ್ಥಿಗಳಿಗೆ ವಿಶ್ವ ದರ್ಜೆಯ ನಿರ್ವಹಣಾ ಶಿಕ್ಷಣವನ್ನು ನೀಡುವ ಮೂಲಕ ಉದ್ಯಮದೊಂದಿಗೆ ನಮ್ಮ ಸಂಬಂಧವನ್ನು ಬಲಪಡಿಸಲು ನಾವು ಯಾವಾಗಲೂ ಸಿದ್ಧರಿದ್ದೇವೆ. ಸವಾಲಿನ ಸಮಯದ ಹೊರತಾಗಿಯೂ ನಮ್ಮ ವಿದ್ಯಾರ್ಥಿಗಳು ಪಡೆದ ಅತ್ಯುತ್ತಮ ಉದ್ಯೋಗಗಳು ಇದಕ್ಕೆ ಪುರಾವೆಯಾಗಿದೆ.

IIM-I ಪ್ರಕಾರ, ಅಂತಿಮ ನಿಯೋಜನೆಯ (ಕ್ಯಾಂಪಸ್ ಪ್ಲೇಸ್ಮೆಂಟ್) ಸಮಯದಲ್ಲಿ, ಹೆಚ್ಚಿನ ಸಂಖ್ಯೆಯ ಉದ್ಯೋಗ ಆಫರ್‌ಗಳು, ಶೇ.29, ಸಲಹಾ ಕ್ಷೇತ್ರದಿಂದ ಬಂದವು, ನಂತರ ಸಾಮಾನ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಗಳು ಶೇ.19, ಹಣಕಾಸು ಮತ್ತು ಮಾರ್ಕೆಟಿಂಗ್ ತಲಾ ಶೇ.18, ಮತ್ತು ಶೇ.16 ರಷ್ಟು ಮಾಹಿತಿ ತಂತ್ರಜ್ಞಾನ.

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?