AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIM: ಐಐಎಂ ಇಂದೋರ್ ವಿದ್ಯಾರ್ಥಿಗೆ ರೂ.1.14 ಕೋಟಿ ವೇತನ ಪ್ಯಾಕೇಜ್!

ಐಐಎಂ ಇಂದೋರ್ ವಿದ್ಯಾರ್ಥಿಯು ಅಂತಿಮ ಕ್ಯಾಂಪಸ್ ಪ್ಲೇಸ್ಮೆಂಟ್ ಅಲ್ಲಿ ದೇಶೀಯ ಕಂಪನಿ ಉದ್ಯೋಗಕ್ಕಾಗಿ ₹ 1.14 ಕೋಟಿ ವೇತನ ಪ್ಯಾಕೇಜ್ ಪಡೆದಿದ್ದಾರೆ.

IIM: ಐಐಎಂ ಇಂದೋರ್ ವಿದ್ಯಾರ್ಥಿಗೆ ರೂ.1.14 ಕೋಟಿ ವೇತನ ಪ್ಯಾಕೇಜ್!
IIMI
ನಯನಾ ಎಸ್​ಪಿ
ನಯನಾ ಎಸ್​ಪಿ|

Updated on: Mar 23, 2023 | 11:16 AM

Share

ಮುಖ್ಯಾಂಶಗಳು

  • IIM ಇಂದೋರ್‌ನ ವಿದ್ಯಾರ್ಥಿಯೊಬ್ಬರಿಗೆ ದೇಶೀಯ ಕಂಪನಿಯೊಂದು ವಾರ್ಷಿಕ ವೇತನ ₹ 1.14 ಕೋಟಿ ಪ್ಯಾಕೇಜ್ ಅನ್ನು ನೀಡಿದೆ
  • ಇದು ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದ ಫೈನಲ್ ಕ್ಯಾಂಪಸ್ ಪ್ಲೇಸ್ಮೆಂಟ್ ಸಮಯದಲ್ಲಿ ನೀಡಲಾದ ಅತ್ಯಧಿಕ ವೇತನ ಪ್ಯಾಕೇಜ್ ಆಗಿದೆ.
  • ಇದು ಹಿಂದಿನ ಬಾರಿಗಿಂತ ₹65 ಲಕ್ಷ ಹೆಚ್ಚಾಗಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಇಂದೋರ್‌ನ (IIM Indore) ವಿದ್ಯಾರ್ಥಿಯೊಬ್ಬರಿಗೆ ದೇಶೀಯ ಕಂಪನಿಯೊಂದು (Domestic company) ಉದ್ಯೋಗಕ್ಕಾಗಿ ವಾರ್ಷಿಕ ವೇತನ ₹ 1.14 ಕೋಟಿ ಪ್ಯಾಕೇಜ್ ಅನ್ನು ನೀಡಿದೆ ಎಂದು IIM-I ಅಧಿಕಾರಿಯೊಬ್ಬರು ಬುಧವಾರ (ಮಾರ್ಚ್ 22) ತಿಳಿಸಿದ್ದಾರೆ. ಇದು ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದ ಫೈನಲ್ ಕ್ಯಾಂಪಸ್ ಪ್ಲೇಸ್ಮೆಂಟ್ ಸಮಯದಲ್ಲಿ ನೀಡಲಾದ ಅತ್ಯಧಿಕ ವೇತನ ಪ್ಯಾಕೇಜ್ ಆಗಿದೆ ಮತ್ತು ಇದು ಹಿಂದಿನ ಬಾರಿಗಿಂತ ₹65 ಲಕ್ಷ ಹೆಚ್ಚಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕಳೆದ ಬಾರಿ, IIM-I ವಿದ್ಯಾರ್ಥಿಗಳ ಕ್ಯಾಂಪಸ್ ಪ್ಲೇಸ್ಮೆಂಟ್ ಸಮಯದಲ್ಲಿ ನೀಡಲಾದ ಅತ್ಯಧಿಕ ವೇತನವು ₹ 49 ಲಕ್ಷವಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಬಾರಿಯ ಕ್ಯಾಂಪಸ್ ಪ್ಲೇಸ್ಮೆಂಟ್​ಗೆ, 160 ಕ್ಕೂ ಹೆಚ್ಚು ದೇಶೀಯ ಮತ್ತು ವಿದೇಶಿ ಕಂಪನಿಗಳು IIM-I ನ 568 ವಿದ್ಯಾರ್ಥಿಗಳಿಗೆ ಸರಾಸರಿ ₹30.21 ಲಕ್ಷ ವೇತನವನ್ನು ನೀಡಿವೆ.

ಆಫರ್‌ಗಳನ್ನು ಪಡೆದವರಲ್ಲಿ ಎರಡು ವರ್ಷಗಳ ಸ್ನಾತಕೋತ್ತರ ಕಾರ್ಯಕ್ರಮ (PGP) ಮತ್ತು ಐದು ವರ್ಷಗಳ ಇಂಟಿಗ್ರೇಟೆಡ್ ಪ್ರೋಗ್ರಾಂ ಇನ್ ಮ್ಯಾನೇಜ್‌ಮೆಂಟ್ (IPM) ವಿದ್ಯಾರ್ಥಿಗಳು ಸೇರಿದ್ದಾರೆ. ಎರಡೂ ಕೋರ್ಸ್‌ಗಳನ್ನು ಎಂಬಿಎಗೆ ಸಮಾನವೆಂದು ಪರಿಗಣಿಸಲಾಗುತ್ತದೆ ಎಂದು ಅಧಿಕಾರಿ ಹೇಳಿದರು.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಟ್ಟದ ವಿಷಯ ಸಂಗ್ರಹಕ್ಕಾಗಿ ಜಾನಪದ ವಿವಿ ಸ್ಥಾಪನೆ: ಸಿಎಂ ಬೊಮ್ಮಾಯಿ

IIM-I ನಿರ್ದೇಶಕ ಪ್ರೊ.ಹಿಮಾನ್ಶು ರೈ ಮಾತನಾಡಿ, ವಿದ್ಯಾರ್ಥಿಗಳಿಗೆ ವಿಶ್ವ ದರ್ಜೆಯ ನಿರ್ವಹಣಾ ಶಿಕ್ಷಣವನ್ನು ನೀಡುವ ಮೂಲಕ ಉದ್ಯಮದೊಂದಿಗೆ ನಮ್ಮ ಸಂಬಂಧವನ್ನು ಬಲಪಡಿಸಲು ನಾವು ಯಾವಾಗಲೂ ಸಿದ್ಧರಿದ್ದೇವೆ. ಸವಾಲಿನ ಸಮಯದ ಹೊರತಾಗಿಯೂ ನಮ್ಮ ವಿದ್ಯಾರ್ಥಿಗಳು ಪಡೆದ ಅತ್ಯುತ್ತಮ ಉದ್ಯೋಗಗಳು ಇದಕ್ಕೆ ಪುರಾವೆಯಾಗಿದೆ.

IIM-I ಪ್ರಕಾರ, ಅಂತಿಮ ನಿಯೋಜನೆಯ (ಕ್ಯಾಂಪಸ್ ಪ್ಲೇಸ್ಮೆಂಟ್) ಸಮಯದಲ್ಲಿ, ಹೆಚ್ಚಿನ ಸಂಖ್ಯೆಯ ಉದ್ಯೋಗ ಆಫರ್‌ಗಳು, ಶೇ.29, ಸಲಹಾ ಕ್ಷೇತ್ರದಿಂದ ಬಂದವು, ನಂತರ ಸಾಮಾನ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಗಳು ಶೇ.19, ಹಣಕಾಸು ಮತ್ತು ಮಾರ್ಕೆಟಿಂಗ್ ತಲಾ ಶೇ.18, ಮತ್ತು ಶೇ.16 ರಷ್ಟು ಮಾಹಿತಿ ತಂತ್ರಜ್ಞಾನ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ