AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IISc: ಜಂಟಿ ಸಂಶೋಧನೆಗಾಗಿ ಐಐಎಸ್​ಸಿಯೊಂದಿಗೆ ನೌಕಾಪಡೆ ಒಪ್ಪಂದ

‘ಆತ್ಮನಿರ್ಭರ್ ಭಾರತ’ದ ಆಶಯದೊಂದಿಗೆ ನೌಕಾಪಡೆಯನ್ನು ಸ್ವಾವಲಂಬಿಯಾಗಿಸುವ ಪ್ರಯತ್ನಕ್ಕೆ ಈ ಒಪ್ಪಂದವು ಹೊಸ ವೇಗ ನೀಡುವ ನಿರೀಕ್ಷೆಯನ್ನು ಹುಟ್ಟುಹಾಕಿದೆ.

IISc: ಜಂಟಿ ಸಂಶೋಧನೆಗಾಗಿ ಐಐಎಸ್​ಸಿಯೊಂದಿಗೆ ನೌಕಾಪಡೆ ಒಪ್ಪಂದ
ಇಂಡಿಯನ್ ಇನ್ಸ್'ಟಿಟ್ಯೂಟ್ ಆಫ್ ಸೈನ್ಸ್
TV9 Web
| Edited By: |

Updated on:Jul 31, 2022 | 1:57 PM

Share

ಬೆಂಗಳೂರು: ಭಾರತೀಯ ನೌಕಾಪಡೆಯು (Indian Navy) ವೈಮಾನಿಕ ಕ್ಷೇತ್ರದಲ್ಲಿ ವೈವಿಧ್ಯಮಯ ಸಂಶೋಧನೆಗಾಗಿ (Aviation Research) ಭಾರತೀಯ ವಿಜ್ಞಾನ ಸಂಸ್ಥೆಯೊಂದಿಗೆ (Indian Institute of Science – IISc) ಒಪ್ಪಂದ ಮಾಡಿಕೊಂಡಿದೆ. ‘ಆತ್ಮನಿರ್ಭರ್ ಭಾರತ’ದ ಆಶಯದೊಂದಿಗೆ ನೌಕಾಪಡೆಯನ್ನು ಸ್ವಾವಲಂಬಿಯಾಗಿಸುವ ಪ್ರಯತ್ನಕ್ಕೆ ಈ ಒಪ್ಪಂದವು ಹೊಸ ವೇಗ ನೀಡುವ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಮುಂದಿನ ದಿನಗಳಲ್ಲಿ ನೌಕಾಪಡೆಯ ತಂತ್ರಜ್ಞರು ಐಐಎಸ್​ಸಿಯಲ್ಲಿರುವ ವಿಷಯ ತಜ್ಞರೊಂದಿಗೆ ನೇರವಾಗಿ ಚರ್ಚಿಸಲು, ಜಂಟಿಯಾಗಿ ಸಂಶೋಧನಾ ಕಾರ್ಯಕ್ರಮ ಹಮ್ಮಿಕೊಳ್ಳಲು ಈ ಒಪ್ಪಂದ ನೆರವಾಗಲಿದೆ ಎಂದು ನೌಕಾಪಡೆ ಮತ್ತು ಐಐಎಸ್​ಸಿ ಹೊರಡಿಸಿರುವ ಜಂಟಿ ಹೇಳಿಕೆಯು ತಿಳಿಸಿದೆ.

ವೈಮಾನಿಕ ವಿನ್ಯಾಸ ಮತ್ತು ತಾಂತ್ರಿಕ ಶಿಕ್ಷಣ, ಪ್ರೊಪಲ್ಷನ್, ಉಕ್ಕಿನ ತಂತ್ರಜ್ಞಾನ, ಖನಿಜ ಮತ್ತು ಭೌತ ವಿಜ್ಞಾನ, ಲೋಹ ಅಥವಾ ಯಾವುದೇ ಸವೆಯುವಿಕೆಯ ಅಧ್ಯಯನ, ಸೆನ್ಸಾರ್​ಗಳು ಮತ್ತು ಇನ್​ಸ್ಟ್ರುಮೆಂಟೇಶನ್, ಪರಿಸರ ವಿಜ್ಞಾನ ಮತ್ತು ಎಂಜಿನಿಯರಿಂಗ್, ಇಂಧನ ವಿಜ್ಞಾನ ಮತ್ತು ಎಂಜಿನಿಯರಿಂಗ್, ನ್ಯಾನೊ ಟೆಕ್ನಾಲಜಿ, ಕೃತಕ ಬುದ್ಧಿಮತ್ತೆ, ದತ್ತಾಂಶ ವಿಷ್ಲೇಷಣೆ ಸೇರಿದಂತೆ ಹಲವು ವಿಭಾಗಗಳಲ್ಲಿ ಐಐಎಸ್​ಸಿ ಮತ್ತು ನೌಕಾಪಡೆಯು ಮುಂದಿನ ದಿನಗಳಲ್ಲಿ ಜಂಟಿಯಾಗಿ ಸಂಶೋಧನೆ ನಡೆಸಲಿವೆ.

ಐಐಎಸ್​ಸಿಯ ಬೋಧಕರು ಮತ್ತು ನೌಕಾಪಡೆ ಅಧಿಕಾರಿಗಳ ನಡುವೆ ಅರ್ಥಪೂರ್ಣ, ನಿಯಮಿತ ಸಂವಾದಕ್ಕೂ ಈ ಒಪ್ಪಂದವು ಅವಕಾಶ ಕಲ್ಪಿಸಿಕೊಡಲಿದೆ. ಜ್ಞಾಪನಾ ಪತ್ರಕ್ಕೆ (Memorandum of Understanding – MoU) ಐಐಎಸ್​ಸಿ ರಿಜಿಸ್ಟ್ರಾರ್​ ಕ್ಯಾಪ್ಟನ್ ಶ್ರೀಧರ್ ವಾರಿಯರ್, ನೌಕಾಪಡೆಯ ಕ್ಯಾಪ್ಟನ್ ಪಿ.ವಿನಾಯಗನ್ ಅವರು ಸಹಿ ಹಾಕಿದರು. ಈ ವೇಳೆ ನೌಕಾಪಡೆಯ ಹಿರಿಯ ಅಧಿಕಾರಿಗಳಾದ ರೇರ್ ಅಡ್ಮಿರಲ್ ದೀಪಕ್ ಬನ್ಸಾಲ್, ಕಮೋಡರ್ ರಾಜಾ ವಿನೋದ್ ಉಪಸ್ಥಿತರಿದ್ದರು.

Published On - 1:57 pm, Sun, 31 July 22

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!