AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IISc: ಜಂಟಿ ಸಂಶೋಧನೆಗಾಗಿ ಐಐಎಸ್​ಸಿಯೊಂದಿಗೆ ನೌಕಾಪಡೆ ಒಪ್ಪಂದ

‘ಆತ್ಮನಿರ್ಭರ್ ಭಾರತ’ದ ಆಶಯದೊಂದಿಗೆ ನೌಕಾಪಡೆಯನ್ನು ಸ್ವಾವಲಂಬಿಯಾಗಿಸುವ ಪ್ರಯತ್ನಕ್ಕೆ ಈ ಒಪ್ಪಂದವು ಹೊಸ ವೇಗ ನೀಡುವ ನಿರೀಕ್ಷೆಯನ್ನು ಹುಟ್ಟುಹಾಕಿದೆ.

IISc: ಜಂಟಿ ಸಂಶೋಧನೆಗಾಗಿ ಐಐಎಸ್​ಸಿಯೊಂದಿಗೆ ನೌಕಾಪಡೆ ಒಪ್ಪಂದ
ಇಂಡಿಯನ್ ಇನ್ಸ್'ಟಿಟ್ಯೂಟ್ ಆಫ್ ಸೈನ್ಸ್
TV9 Web
| Edited By: |

Updated on:Jul 31, 2022 | 1:57 PM

Share

ಬೆಂಗಳೂರು: ಭಾರತೀಯ ನೌಕಾಪಡೆಯು (Indian Navy) ವೈಮಾನಿಕ ಕ್ಷೇತ್ರದಲ್ಲಿ ವೈವಿಧ್ಯಮಯ ಸಂಶೋಧನೆಗಾಗಿ (Aviation Research) ಭಾರತೀಯ ವಿಜ್ಞಾನ ಸಂಸ್ಥೆಯೊಂದಿಗೆ (Indian Institute of Science – IISc) ಒಪ್ಪಂದ ಮಾಡಿಕೊಂಡಿದೆ. ‘ಆತ್ಮನಿರ್ಭರ್ ಭಾರತ’ದ ಆಶಯದೊಂದಿಗೆ ನೌಕಾಪಡೆಯನ್ನು ಸ್ವಾವಲಂಬಿಯಾಗಿಸುವ ಪ್ರಯತ್ನಕ್ಕೆ ಈ ಒಪ್ಪಂದವು ಹೊಸ ವೇಗ ನೀಡುವ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಮುಂದಿನ ದಿನಗಳಲ್ಲಿ ನೌಕಾಪಡೆಯ ತಂತ್ರಜ್ಞರು ಐಐಎಸ್​ಸಿಯಲ್ಲಿರುವ ವಿಷಯ ತಜ್ಞರೊಂದಿಗೆ ನೇರವಾಗಿ ಚರ್ಚಿಸಲು, ಜಂಟಿಯಾಗಿ ಸಂಶೋಧನಾ ಕಾರ್ಯಕ್ರಮ ಹಮ್ಮಿಕೊಳ್ಳಲು ಈ ಒಪ್ಪಂದ ನೆರವಾಗಲಿದೆ ಎಂದು ನೌಕಾಪಡೆ ಮತ್ತು ಐಐಎಸ್​ಸಿ ಹೊರಡಿಸಿರುವ ಜಂಟಿ ಹೇಳಿಕೆಯು ತಿಳಿಸಿದೆ.

ವೈಮಾನಿಕ ವಿನ್ಯಾಸ ಮತ್ತು ತಾಂತ್ರಿಕ ಶಿಕ್ಷಣ, ಪ್ರೊಪಲ್ಷನ್, ಉಕ್ಕಿನ ತಂತ್ರಜ್ಞಾನ, ಖನಿಜ ಮತ್ತು ಭೌತ ವಿಜ್ಞಾನ, ಲೋಹ ಅಥವಾ ಯಾವುದೇ ಸವೆಯುವಿಕೆಯ ಅಧ್ಯಯನ, ಸೆನ್ಸಾರ್​ಗಳು ಮತ್ತು ಇನ್​ಸ್ಟ್ರುಮೆಂಟೇಶನ್, ಪರಿಸರ ವಿಜ್ಞಾನ ಮತ್ತು ಎಂಜಿನಿಯರಿಂಗ್, ಇಂಧನ ವಿಜ್ಞಾನ ಮತ್ತು ಎಂಜಿನಿಯರಿಂಗ್, ನ್ಯಾನೊ ಟೆಕ್ನಾಲಜಿ, ಕೃತಕ ಬುದ್ಧಿಮತ್ತೆ, ದತ್ತಾಂಶ ವಿಷ್ಲೇಷಣೆ ಸೇರಿದಂತೆ ಹಲವು ವಿಭಾಗಗಳಲ್ಲಿ ಐಐಎಸ್​ಸಿ ಮತ್ತು ನೌಕಾಪಡೆಯು ಮುಂದಿನ ದಿನಗಳಲ್ಲಿ ಜಂಟಿಯಾಗಿ ಸಂಶೋಧನೆ ನಡೆಸಲಿವೆ.

ಐಐಎಸ್​ಸಿಯ ಬೋಧಕರು ಮತ್ತು ನೌಕಾಪಡೆ ಅಧಿಕಾರಿಗಳ ನಡುವೆ ಅರ್ಥಪೂರ್ಣ, ನಿಯಮಿತ ಸಂವಾದಕ್ಕೂ ಈ ಒಪ್ಪಂದವು ಅವಕಾಶ ಕಲ್ಪಿಸಿಕೊಡಲಿದೆ. ಜ್ಞಾಪನಾ ಪತ್ರಕ್ಕೆ (Memorandum of Understanding – MoU) ಐಐಎಸ್​ಸಿ ರಿಜಿಸ್ಟ್ರಾರ್​ ಕ್ಯಾಪ್ಟನ್ ಶ್ರೀಧರ್ ವಾರಿಯರ್, ನೌಕಾಪಡೆಯ ಕ್ಯಾಪ್ಟನ್ ಪಿ.ವಿನಾಯಗನ್ ಅವರು ಸಹಿ ಹಾಕಿದರು. ಈ ವೇಳೆ ನೌಕಾಪಡೆಯ ಹಿರಿಯ ಅಧಿಕಾರಿಗಳಾದ ರೇರ್ ಅಡ್ಮಿರಲ್ ದೀಪಕ್ ಬನ್ಸಾಲ್, ಕಮೋಡರ್ ರಾಜಾ ವಿನೋದ್ ಉಪಸ್ಥಿತರಿದ್ದರು.

Published On - 1:57 pm, Sun, 31 July 22

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ