AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IISc: ಜಂಟಿ ಸಂಶೋಧನೆಗಾಗಿ ಐಐಎಸ್​ಸಿಯೊಂದಿಗೆ ನೌಕಾಪಡೆ ಒಪ್ಪಂದ

‘ಆತ್ಮನಿರ್ಭರ್ ಭಾರತ’ದ ಆಶಯದೊಂದಿಗೆ ನೌಕಾಪಡೆಯನ್ನು ಸ್ವಾವಲಂಬಿಯಾಗಿಸುವ ಪ್ರಯತ್ನಕ್ಕೆ ಈ ಒಪ್ಪಂದವು ಹೊಸ ವೇಗ ನೀಡುವ ನಿರೀಕ್ಷೆಯನ್ನು ಹುಟ್ಟುಹಾಕಿದೆ.

IISc: ಜಂಟಿ ಸಂಶೋಧನೆಗಾಗಿ ಐಐಎಸ್​ಸಿಯೊಂದಿಗೆ ನೌಕಾಪಡೆ ಒಪ್ಪಂದ
ಇಂಡಿಯನ್ ಇನ್ಸ್'ಟಿಟ್ಯೂಟ್ ಆಫ್ ಸೈನ್ಸ್
TV9 Web
| Edited By: |

Updated on:Jul 31, 2022 | 1:57 PM

Share

ಬೆಂಗಳೂರು: ಭಾರತೀಯ ನೌಕಾಪಡೆಯು (Indian Navy) ವೈಮಾನಿಕ ಕ್ಷೇತ್ರದಲ್ಲಿ ವೈವಿಧ್ಯಮಯ ಸಂಶೋಧನೆಗಾಗಿ (Aviation Research) ಭಾರತೀಯ ವಿಜ್ಞಾನ ಸಂಸ್ಥೆಯೊಂದಿಗೆ (Indian Institute of Science – IISc) ಒಪ್ಪಂದ ಮಾಡಿಕೊಂಡಿದೆ. ‘ಆತ್ಮನಿರ್ಭರ್ ಭಾರತ’ದ ಆಶಯದೊಂದಿಗೆ ನೌಕಾಪಡೆಯನ್ನು ಸ್ವಾವಲಂಬಿಯಾಗಿಸುವ ಪ್ರಯತ್ನಕ್ಕೆ ಈ ಒಪ್ಪಂದವು ಹೊಸ ವೇಗ ನೀಡುವ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಮುಂದಿನ ದಿನಗಳಲ್ಲಿ ನೌಕಾಪಡೆಯ ತಂತ್ರಜ್ಞರು ಐಐಎಸ್​ಸಿಯಲ್ಲಿರುವ ವಿಷಯ ತಜ್ಞರೊಂದಿಗೆ ನೇರವಾಗಿ ಚರ್ಚಿಸಲು, ಜಂಟಿಯಾಗಿ ಸಂಶೋಧನಾ ಕಾರ್ಯಕ್ರಮ ಹಮ್ಮಿಕೊಳ್ಳಲು ಈ ಒಪ್ಪಂದ ನೆರವಾಗಲಿದೆ ಎಂದು ನೌಕಾಪಡೆ ಮತ್ತು ಐಐಎಸ್​ಸಿ ಹೊರಡಿಸಿರುವ ಜಂಟಿ ಹೇಳಿಕೆಯು ತಿಳಿಸಿದೆ.

ವೈಮಾನಿಕ ವಿನ್ಯಾಸ ಮತ್ತು ತಾಂತ್ರಿಕ ಶಿಕ್ಷಣ, ಪ್ರೊಪಲ್ಷನ್, ಉಕ್ಕಿನ ತಂತ್ರಜ್ಞಾನ, ಖನಿಜ ಮತ್ತು ಭೌತ ವಿಜ್ಞಾನ, ಲೋಹ ಅಥವಾ ಯಾವುದೇ ಸವೆಯುವಿಕೆಯ ಅಧ್ಯಯನ, ಸೆನ್ಸಾರ್​ಗಳು ಮತ್ತು ಇನ್​ಸ್ಟ್ರುಮೆಂಟೇಶನ್, ಪರಿಸರ ವಿಜ್ಞಾನ ಮತ್ತು ಎಂಜಿನಿಯರಿಂಗ್, ಇಂಧನ ವಿಜ್ಞಾನ ಮತ್ತು ಎಂಜಿನಿಯರಿಂಗ್, ನ್ಯಾನೊ ಟೆಕ್ನಾಲಜಿ, ಕೃತಕ ಬುದ್ಧಿಮತ್ತೆ, ದತ್ತಾಂಶ ವಿಷ್ಲೇಷಣೆ ಸೇರಿದಂತೆ ಹಲವು ವಿಭಾಗಗಳಲ್ಲಿ ಐಐಎಸ್​ಸಿ ಮತ್ತು ನೌಕಾಪಡೆಯು ಮುಂದಿನ ದಿನಗಳಲ್ಲಿ ಜಂಟಿಯಾಗಿ ಸಂಶೋಧನೆ ನಡೆಸಲಿವೆ.

ಐಐಎಸ್​ಸಿಯ ಬೋಧಕರು ಮತ್ತು ನೌಕಾಪಡೆ ಅಧಿಕಾರಿಗಳ ನಡುವೆ ಅರ್ಥಪೂರ್ಣ, ನಿಯಮಿತ ಸಂವಾದಕ್ಕೂ ಈ ಒಪ್ಪಂದವು ಅವಕಾಶ ಕಲ್ಪಿಸಿಕೊಡಲಿದೆ. ಜ್ಞಾಪನಾ ಪತ್ರಕ್ಕೆ (Memorandum of Understanding – MoU) ಐಐಎಸ್​ಸಿ ರಿಜಿಸ್ಟ್ರಾರ್​ ಕ್ಯಾಪ್ಟನ್ ಶ್ರೀಧರ್ ವಾರಿಯರ್, ನೌಕಾಪಡೆಯ ಕ್ಯಾಪ್ಟನ್ ಪಿ.ವಿನಾಯಗನ್ ಅವರು ಸಹಿ ಹಾಕಿದರು. ಈ ವೇಳೆ ನೌಕಾಪಡೆಯ ಹಿರಿಯ ಅಧಿಕಾರಿಗಳಾದ ರೇರ್ ಅಡ್ಮಿರಲ್ ದೀಪಕ್ ಬನ್ಸಾಲ್, ಕಮೋಡರ್ ರಾಜಾ ವಿನೋದ್ ಉಪಸ್ಥಿತರಿದ್ದರು.

Published On - 1:57 pm, Sun, 31 July 22

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!