AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಭಾರತ ನಂಬರ್ ಒನ್, 3.3 ಲಕ್ಷ ಭಾರತೀಯರು ಅಮೆರಿಕದ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ

ಅನೇಕ ವಿದ್ಯಾರ್ಥಿಗಳು ವಿದೇಶದಲ್ಲಿ ಓದಬೇಕು ಎನ್ನುವ ಬಯಕೆಯನ್ನು ಇಟ್ಟುಕೊಂಡಿರುತ್ತಾರೆ. ಹೀಗಾಗಿ ಉನ್ನತ್ತ ಶಿಕ್ಷಣ ಪಡೆಯಲು ಅದೆಷ್ಟೋ ವಿದ್ಯಾರ್ಥಿಗಳು ವಿದೇಶಕ್ಕೆ ತೆರಳುತ್ತಾರೆ. ಭಾರತೀಯ ವಿದ್ಯಾರ್ಥಿಗಳು ಯುಎಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ 15 ವರ್ಷಗಳಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಮೇರಿಕಾದಲ್ಲಿ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಲ್ಲಿ ಭಾರತ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಓಪನ್ ಡೋರ್ಸ್ 2024 ವರದಿಯಲ್ಲಿ ಬಹಿರಂಗವಾಗಿದೆ.

ಸಾಯಿನಂದಾ
| Edited By: |

Updated on:Nov 22, 2024 | 6:30 PM

Share

ವಿಶ್ವದರ್ಜೆಯ ಶಿಕ್ಷಣಕ್ಕಾಗಿ ವಿಶ್ವಾದ್ಯಂತ ಹೆಸರುವಾಸಿಯಾಗಿರುವ ವಿಶ್ವದ ರಾಷ್ಟ್ರಗಳಲ್ಲಿ ಅಮೆರಿಕವು ಒಂದು. ಹೀಗಾಗಿ ಭಾರತ ಸೇರಿದಂತೆ ಪ್ರಪಂಚದಾದ್ಯಂತದ ವಿದ್ಯಾರ್ಥಿಗಳು ಈ ದೇಶದಲ್ಲಿ ಅಧ್ಯಯನಕ್ಕೆಂದು ತೆರಳುತ್ತಾರೆ. ಆದರೆ ಉನ್ನತ ಹುದ್ದೆಯಿಂದ ಹಿಡಿದು ವ್ಯಾಪಾರದವರೆಗೆ ಭಾರತೀಯರು ಮುಂದಿದ್ದಾರೆ. ಆದಾಗ್ಯೂ, ಭಾರತೀಯರ ಪ್ರಾಬಲ್ಯವು ಸಾಮಾಜಿಕ ಕ್ಷೇತ್ರವನ್ನು ಮೀರಿ ಶಿಕ್ಷಣ ಕ್ಷೇತ್ರಕ್ಕೆ ವಿಸ್ತರಿಸಿದೆ. ಇದೀಗ ಅಮೇರಿಕಾಕ್ಕೆ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವಿಚಾರವು ಬಹಿರಂಗವಾಗಿದೆ.

ಮುಂಬೈನ ಯುಎಸ್ ಕಾನ್ಸುಲೇಟ್ ಜನರಲ್ ಮೈಕ್ ಕ್ಯಾಂಕಿ ಯವರು ಪತ್ರಿಕಾಗೋಷ್ಠಿಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು, ‘ನಾವು ಯುನೈಟೆಡ್ ಸ್ಟೇಟ್ಸ್‌ಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆಯ ಕುರಿತು ವಾರ್ಷಿಕ ವರದಿಯನ್ನು ನೀಡಿದ್ದೇವೆ. ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವವರ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಯುಎಸ್‌ಗೆ ವಿದ್ಯಾಭ್ಯಾಸಕ್ಕೆ ತೆರಳುವ ವಿದ್ಯಾರ್ಥಿಗಳಲ್ಲಿ ಭಾರತವು ನಂಬರ್ ಒನ್ ತಲುಪಿರುವುದು ನಮಗೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: 25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಉಚಿತ ನೀಟ್ ಕೋಚಿಂಗ್

2023-24ರ ಅವಧಿಯಲ್ಲಿ 331,600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಮೆರಿಕದ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ 23% ಹೆಚ್ಚಾಗಿದೆ. ಭಾರತೀಯ ಪದವಿ ವಿದ್ಯಾರ್ಥಿಗಳ ಸಂಖ್ಯೆಯು 196,567 ಕ್ಕೆ ತಲುಪಲು 19% ರಷ್ಟು ಹೆಚ್ಚಾಗಿದೆ. ಪದವಿಪೂರ್ವ ವಿದ್ಯಾರ್ಥಿಗಳ ಸಂಖ್ಯೆಯು 13% ರಂತೆ 36,053 ಕ್ಕೆ ಏರಿಕೆಯಾಗಿದೆ. ಆದರೆ ಪದವಿ ರಹಿತ ವಿದ್ಯಾರ್ಥಿಗಳ ಸಂಖ್ಯೆ 28% ರಷ್ಟು ಇಳಿಕೆ ಕಂಡಿದೆ ಎನ್ನಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:25 pm, Fri, 22 November 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ