AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಶಿಕ್ಷಣ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಸಂಪೂರ್ಣ ಮಾಹಿತಿ

International Day of Education 2025: ಶಿಕ್ಷಣವು ಪ್ರತಿಯೊಬ್ಬರ ಮೂಲಭೂತ ಹಕ್ಕು. ಪ್ರತಿಯೊಬ್ಬ ವ್ಯಕ್ತಿಯೂ ಶಿಕ್ಷಣ ಪಡೆಯುವುದರಿಂದ ಆ ದೇಶವು ಪ್ರಗತಿ ಹೊಂದಲು ಸಾಧ್ಯ. ಅದಲ್ಲದೇ, ಜಾಗತಿಕ ಶಾಂತಿ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಶಿಕ್ಷಣದ ಕೊಡುಗೆಯನ್ನು ನೆನಪಿಸಿಕೊಳ್ಳುವುದು ಹಾಗೂ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಜಾಗೃತಿ ಮೂಡಿಸುವುದೇ ಈ ಅಂತಾರಾಷ್ಟ್ರೀಯ ಶಿಕ್ಷಣ ದಿನದ ಉದ್ದೇಶವಾಗಿದೆ. ಈ ದಿನದ ಇತಿಹಾಸ ಹಾಗೂ ಮಹತ್ವ ಸೇರಿದಂತೆ ಇನ್ನಿತ್ತರ ಮಾಹಿತಿ ಇಲ್ಲಿದೆ.

ಅಂತಾರಾಷ್ಟ್ರೀಯ ಶಿಕ್ಷಣ ದಿನ ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಸಂಪೂರ್ಣ ಮಾಹಿತಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jan 24, 2025 | 9:29 AM

Share

ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕು. ಆದರೆ ಇಂದು ಬಡತನ ಸೇರಿದಂತೆ ಇನ್ನಿತ್ತರ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ವ್ಯಕ್ತಿಯೊಬ್ಬ ಸುಶಿಕ್ಷಿತರಾಗಿದ್ದರೆ ಮಾತ್ರ ಸಮಾಜದಲ್ಲಿ ಸ್ಥಾನಮಾನ ಹಾಗೂ ಗೌರವ ಸಿಗಲು ಸಾಧ್ಯ. ಒಂದು ದೇಶದ ಪ್ರಗತಿಯಲ್ಲಿ ಶಿಕ್ಷಣವು ಪ್ರಮುಖ ಪಾತ್ರವಹಿಸುತ್ತದೆ. ಒಂದು ವೇಳೆ ಶಿಕ್ಷಣದಿಂದ ವಂಚಿತರಾಗಿದ್ದರೆ ಬದುಕಿನುದ್ದಕ್ಕೂ ಹೋರಾಟಬೇಕಾಗುತ್ತದೆ. ಹೀಗಾಗಿ ಶಿಕ್ಷಣದ ಮಹತ್ವವನ್ನು ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತಿದೆ.

ಅಂತಾರಾಷ್ಟ್ರೀಯ ಶಿಕ್ಷಣ ದಿನದ ಇತಿಹಾಸ

ಅಂತಾರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲು, ಡಿಸೆಂಬರ್ 3, 2018 ರಂದು, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ನೈಜೀರಿಯಾ ಹಾಗೂ 58 ಇತರ ಸದಸ್ಯ ರಾಷ್ಟ್ರಗಳಿಂದ ಸಹ ಈ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿತು. ಅಂದಿನಿಂದ ಪ್ರತಿ ವರ್ಷವು ಜನವರಿ 24 ರಂದು ಅಂತಾರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಅಂತಾರಾಷ್ಟ್ರೀಯ ಶಿಕ್ಷಣ ದಿನದ ಮಹತ್ವ

ಅಂತಾರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸುವ ಮುಖ್ಯ ಉದ್ದೇಶವೆಂದರೆ ಜಗತ್ತಿನಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸುವುದು. ಶಾಂತಿ ಮತ್ತು ಅಭಿವೃದ್ಧಿಯು ಮಾನವ ಜೀವನದಲ್ಲಿ ಅತ್ಯಂತ ಮುಖ್ಯವಾದ ವಿಷಯಗಳಾಗಿದೆ. ಅದನ್ನು ಸಾಧಿಸುವ ಏಕೈಕ ಮಾರ್ಗವೆಂದರೆ ಅದುವೇ ಶಿಕ್ಷಣ. ವಿವಿಧ ಅಂಕಿ ಅಂಶಗಳ ಪ್ರಕಾರ, ಪ್ರಪಂಚದಾದ್ಯಂತ ಲಕ್ಷಾಂತರ ಮಕ್ಕಳು ಇನ್ನೂ ಶಾಲೆಗೆ ಹೋಗುತ್ತಿಲ್ಲ.

ಶಾಲೆಗೆ ಹೋಗುವ ಮಕ್ಕಳು ಕೋಟಿಗಟ್ಟಲೆ ಇದ್ದರೂ, ಗುಣಮಟ್ಟದ ಶಿಕ್ಷಣದಲ್ಲಿ ತೀವ್ರ ಕೊರತೆ ಇದೆ. ಹೀಗಾಗಿ ಹೆಚ್ಚಿನ ಸಂಖ್ಯೆಯ ಮಕ್ಕಳು ಸರಿಯಾದ ಶಿಕ್ಷಣವನ್ನು ಪಡೆಯುತ್ತಿಲ್ಲ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಶಿಕ್ಷಣದ ಮಹತ್ವ ಸಾರುವ ಸಲುವಾಗಿ ಅಭಿಯಾನ, ಕಾರ್ಯಾಗಾರಗಳು ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತವೆ.

ಇದನ್ನೂ ಓದಿ: ಗಣರಾಜ್ಯೋತ್ಸವ ದಿನ ಆಕರ್ಷಕವಾಗಿ ಕಾಣಿಸ್ಬೇಕಾ? ಹಾಗಾದ್ರೆ ಈ ರೀತಿ ಡ್ರೆಸ್ ಮಾಡ್ಕೊಳ್ಳಿ

ಶಿಕ್ಷಣದ ಬಗೆಗಿನ ಮಹಾನ್ ವ್ಯಕ್ತಿಗಳ ನುಡಿಮುತ್ತುಗಳು

* ಸಂಪತ್ತಿಗಿಂತ ಜ್ಞಾನಕ್ಕೆ ಆದ್ಯತೆ ನೀಡಿ ಏಕೆಂದರೆ ಒಂದು ಕ್ಷಣಿಕ, ಮತ್ತೊಂದು ಶಾಶ್ವತ – ಸಾಕ್ರಟೀಸ್.

* ಶಿಕ್ಷಣದ ಬೇರುಗಳು ಕಹಿಯಾಗಿಯೇ ಇರಬಹುದು, ಆದರೆ ಫಲ ಸಿಹಿಯಾಗಿಯೇ ಇರುತ್ತದೆ – ಅರಿಸ್ಟಾಟಲ್.

* ಮನುಷ್ಯರಲ್ಲಿ ಪ್ರೇಮವನ್ನು ಮೂಡಿಸುವ ಸರಳ ಜೀವನವನ್ನು ಕಲಿಸುವ ವಿದ್ಯೆಯೇ ಶ್ರೇಷ್ಠವಾದದ್ದು – ಟಾಲ್ಸ್ ಟಾಯ್.

* ವಿದ್ಯಾಭ್ಯಾಸ ಯಾವ ದಿಕ್ಕಿನಲ್ಲಿ ಮನುಷ್ಯನನ್ನು ನಡೆಸುವುದೋ ಅದೇ ಅವನ ಭವಿಷ್ಯವನ್ನು ನಿರ್ಧರಿಸುವುದು – ಪ್ಲೇಟೋ.

* ವಿದ್ಯೆಯೊಂದಿಗೆ ಆದರ್ಶ ಗುಣಗಳು ನಿನ್ನಲ್ಲಿ ಬರದಿದ್ದರೆ, ನೀನು ಓದಿದ್ದು ವ್ಯರ್ಥ – ಪ್ರೇಮಚಂದ್ರ.

* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ – ಡಾ. ಎಸ್ ರಾಧಾಕೃಷ್ಣನ್.

* ಮನುಷ್ಯನಿಗೆ ಯಾವುದು ಗೊತ್ತಿಲ್ಲವೋ ಅದನ್ನು ತಿಳಿಸುವುದು ವಿದ್ಯಾಭ್ಯಾಸ ಗುರಿಯಲ್ಲ. ಹೇಗೆ ವರ್ತಿಸಬೇಕೆಂದು ತಿಳಿಸುವುದೇ ವಿದ್ಯಾಭ್ಯಾಸದ ಗುರಿ – ಜಾನ್ ರಸ್ಕಿನ್.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ