AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE-Advanced Results 2022 : ಜೆಇಇ ಅಡ್ವಾನ್ಸ್ಡ್​ ಪರೀಕ್ಷೆಯ ಫಲಿತಾಂಶ ಪ್ರಕಟ, ಬೆಂಗಳೂರಿನ ವಿದ್ಯಾರ್ಥಿ ಶಿಶಿರ್ ಟಾಪರ್

ಜೆಇಇ ಅಡ್ವಾನ್ಸ್ಡ್‌ 2022 ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬೆಂಗಳೂರಿನ ವಿದ್ಯಾರ್ಥಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಕರ್ನಾಟಕ ಮೂಲದ ಕೆ ಶಿಶಿರ್ ಪ್ರಥಮ ಸ್ಥಾನ ಪಡೆದಿದ್ದಾರೆ

JEE-Advanced Results 2022 : ಜೆಇಇ ಅಡ್ವಾನ್ಸ್ಡ್​ ಪರೀಕ್ಷೆಯ ಫಲಿತಾಂಶ ಪ್ರಕಟ, ಬೆಂಗಳೂರಿನ ವಿದ್ಯಾರ್ಥಿ ಶಿಶಿರ್ ಟಾಪರ್
JEE
TV9 Web
| Edited By: |

Updated on: Sep 11, 2022 | 1:23 PM

Share

ಜೆಇಇ ಅಡ್ವಾನ್ಸ್ಡ್‌ 2022 ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬೆಂಗಳೂರಿನ ವಿದ್ಯಾರ್ಥಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಕರ್ನಾಟಕ ಮೂಲದ ಕೆ ಶಿಶಿರ್ ಪ್ರಥಮ ಸ್ಥಾನ ಪಡೆದಿದ್ದಾರೆ, ಇವರು ಐಐಟಿ ಝೋನ್​ನಿಂದ ಪರೀಕ್ಷೆ ಬರೆದವರು. ಹಾಗೆಯೇ ಪೋಲು ಲಕ್ಷ್ಮೀ ಸಾಯಿ  ಲೋಹಿತ್ ರೆಡ್ಡಿ ಎರಡನೇ ಮತ್ತು ಥಾಮಸ್ ಬಿಜು ಚೀರಂವೇಲಿಲ್ ಮೂರನೇ ಶ್ರೇಯಾಂಕ ಪಡೆದಿದ್ದಾರೆ. ಆಗಸ್ಟ್ 28ರಂದು ಪರೀಕ್ಷೆ ನಡೆದಿತ್ತು, ಜೆಇಇ ಅಡ್ವಾನ್ಸ್ಡ್‌ 2022 ಫಲಿತಾಂಶ – jeeadv.ac.in – ಜೆಇಇ ಅಡ್ವಾನ್ಸ್ಡ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಅಭ್ಯರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್ ಹಾಗೂ ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಲಾಗಿನ್‌ ಆಗಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಈ ವೆಬ್‌ಸೈಟ್‌ನ ಪರದೆ ಮೇಲೆ ಜೆಇಇ ಅಡ್ವಾನ್ಸ್ಡ್‌ 2022 ಸ್ಕೋರ್‌ಕಾರ್ಡ್‌ ಅನ್ನು ನೋಡಬಹುದಾಗಿದೆ. ಬಳಿಕ ಡೌನ್ಲೋಡ್‌ ಮಾಡಿಕೊಳ್ಳಬಹುದಾಗಿದ್ದು, ಪ್ರಿಂಟ್‌ಔಟ್‌ ಅನ್ನೂ ತೆಗೆದುಕೊಳ್ಳಬಹುದು.

ಆದರೆ ಈ ಬಾರಿ ಟಾಪ್ 10ರಲ್ಲಿ ಎಲ್ಲರೂ ಹುಡುಗರೇ ಇದ್ದಾರೆ, 16ನೇ ರ್ಯಾಂಕ್​ ಅನ್ನು ಐಐಟಿ ದೆಹಲಿ ಝೋನ್​ನ ತನಿಷ್ಕಾ ಕಾಬ್ರಾ ಪಡೆದಿದ್ದಾರೆ. ಹಾಗೆಯೇ ವಂಗಪಲ್ಲಿ ಸಾಯಿ ಸಿದ್ಧಾರ್ಥ್​ 4ನೇ ಸ್ಥಾನ, ಮಯಾಂಕ್ ಮೋಟ್ವಾನಿ 5ನೇ ಸ್ಥಾನ, ಪೋಲಿಸೆಟ್ಟಿ ಕಾರ್ತಿಕೇಯ 6ನೇ ಸ್ಥಾನ, ಪ್ರತೀಕ್ ಸಾಹೂ 7ನೇ ಸ್ಥಾನ, ಧೀರಜ್ ಕುರುಕುಂದಾ 8ನೇ ಸ್ಥಾನ, ಮಹಿತ್ 9ನೇ ಸ್ಥಾನ ಹಾಗೂ ಮಹೇಶ್ 10ನೇ ಸ್ಥಾನ ಪಡೆದಿದ್ದಾರೆ.

ಜೆಇಇ ಅಡ್ವಾನ್ಸ್ಡ್‌ 2022 ಫಲಿತಾಂಶ ವೀಕ್ಷಿಸುವುದು ಹೇಗೆ? -ಮೊದಲನೆಯದಾಗಿ ಜೆಇಇ ಅಡ್ವಾನ್ಸ್ಡ್‌ನ ಅಧಿಕೃತ ವೆಬ್‌ಸೈಟ್‌ jeeadv.ac.in ಗೆ ಭೇಟಿ ನೀಡಿ – ಹೋಂ ಪೇಜ್​ನಲ್ಲಿ ನಿಮಗೆ ಕಾಣಿಸುವ JEE Advanced Resullt ಲಿಂಕ್ ಮೇಲೆ ಕ್ಲಿಕ್ ಮಾಡಿ -ನಿಮ್ಮ ಅಪ್ಲಿಕೇಷನ್ ನಂಬರ್, ಡೇಟ್ ಆಫ್ ಬರ್ಥ್​, ಹಾಗೂ ಕೇಳಿರುವ ಇತರೆ ಮಾಹಿತಿಯನ್ನು ನಮೂದಿಸಿ ಸಬ್​ಮಿಟ್ ಕ್ಲಿಕ್ ಮಾಡಿ. — ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. – ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್‌ಲೋಡ್ ಮಾಡಿ. – ಅದರ ಹಾರ್ಡ್ ಕಾಪಿಯ ಪ್ರಿಂಟ್‌ ಔಟ್‌ ಅನ್ನು ಕೂಡ ನೀವು ತೆಗೆದಿಟ್ಟುಕೊಳ್ಳಬಹುದು.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?