AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Advanced Results 2021: ಜೆಇಇ ಅಡ್ವಾನ್ಸ್ಡ್ ಫಲಿತಾಂಶ ಪ್ರಕಟ; ಮೃದುಲ್ ಅಗರ್​ವಾಲ್​ಗೆ ಮೊದಲ ರ್ಯಾಂಕ್

ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ ರೋಲ್ ಸಂಖ್ಯೆ ಮತ್ತು ಇತರ ವಿವರಗಳನ್ನು ಭರ್ತಿ ಮಾಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಜೆಇಇ ಅಡ್ವಾನ್ಸ್ಡ್ ಫಲಿತಾಂಶದೊಂದಿಗೆ ಐಐಟಿ ಖರಗ್‌ಪುರವು ಅಖಿಲ ಭಾರತ ಟಾಪರ್‌ಗಳ ಪಟ್ಟಿಯನ್ನು ಕೂಡ ಪ್ರಕಟಿಸಿದೆ.

JEE Advanced Results 2021: ಜೆಇಇ ಅಡ್ವಾನ್ಸ್ಡ್ ಫಲಿತಾಂಶ ಪ್ರಕಟ; ಮೃದುಲ್ ಅಗರ್​ವಾಲ್​ಗೆ ಮೊದಲ ರ್ಯಾಂಕ್
ಮೊದಲ ರ್ಯಾಂಕ್ ಪಡೆದ ಮೃದುಲ್ ಅಗರ್​ವಾಲ್
TV9 Web
| Updated By: ಸುಷ್ಮಾ ಚಕ್ರೆ|

Updated on:Oct 15, 2021 | 12:39 PM

Share

ನವದೆಹಲಿ: ಖರಗ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಿಂದ ಜೆಇಇ ಅಡ್ವಾನ್ಸ್ಡ್​ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಫಲಿತಾಂಶವನ್ನು (JEE Advanced Result 2021) ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ jeeadv.ac.in ಕ್ಲಿಕ್​ ಮಾಡುವ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಬರೆದ 41,862 ಅಭ್ಯರ್ಥಿಗಳ ಪೈಕಿ ಐಐಟಿ ದೆಹಲಿಯ ಮೃದುಲ್ ಅಗರ್​ವಾಲ್ ಮೊದಲ ರ್ಯಾಂಕ್ ಪಡೆದಿದ್ದಾರೆ.

ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ ರೋಲ್ ಸಂಖ್ಯೆ ಮತ್ತು ಇತರ ವಿವರಗಳನ್ನು ಭರ್ತಿ ಮಾಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಜೆಇಇ ಅಡ್ವಾನ್ಸ್ಡ್ ಫಲಿತಾಂಶದೊಂದಿಗೆ, ಐಐಟಿ ಖರಗ್‌ಪುರವು ಅಖಿಲ ಭಾರತ ಟಾಪರ್‌ಗಳ ಪಟ್ಟಿಯನ್ನು ಕೂಡ ಪ್ರಕಟಿಸಿದೆ. ಜೆಇಇ ಅಧಿಕೃತ ವೆಬ್‌ಸೈಟ್‌ jeeadv.ac.inನಲ್ಲಿ ಫಲಿತಾಂಶ ಪ್ರಕಟಗೊಂಡಿದೆ. ಅಭ್ಯರ್ಥಿಗಳು ಜೆಇಇ ಅಡ್ವಾನ್ಸ್ಡ್-2021ರ ರೋಲ್ ಸಂಖ್ಯೆ, ಜನ್ಮದಿನಾಂಕ ಮತ್ತು ಫೋನ್ ನಂಬರ್​ಗಳ ಮೂಲಕ ಫಲಿತಾಂಶವನ್ನು ತಿಳಿದುಕೊಳ್ಳಬಹುದು. ಫಲಿತಾಂಶವು ಅಂಕಪಟ್ಟಿ ಮಾದರಿಯಲ್ಲಿ ಲಭ್ಯವಿರಲಿದ್ದು, ದೇಶದ ಟಾಪರ್‌ಗಳ ಪಟ್ಟಿ ಮತ್ತು ಇತರ ಸಂಬಂಧಿತ ಮಾಹಿತಿಯೂ ಇರಲಿದೆ.

ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ದೆಹಲಿಯ ಐಐಟಿಯ ಮೃದುಲ್ ಅಗರ್​ವಾಲ್ 360ಕ್ಕೆ 348 ಅಂಕಗಳನ್ನು ಪಡೆಯುವ ಮೂಲಕ ಟಾಪ್ ರ್ಯಾಂಕ್ ಪಡೆದಿದ್ದಾರೆ. ಐಐಟಿ ದೆಹಲಿಯ ಕಾವ್ಯ ಚೋಪ್ರಾ 360ಕ್ಕೆ 286 ಅಂಕಗಳನ್ನು ಪಡೆದು ಮಹಿಳೆಯರ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಜೆಇಇ ಅಡ್ವಾನ್ಸ್ಡ್-2021ರಲ್ಲಿ ರ್ಯಾಂಕ್ ಪಡೆದ ಎಲ್ಲ ಅಭ್ಯರ್ಥಿಗಳು ಜಂಟಿ ಸೀಟು ಹಂಚಿಕೆ ಪ್ರಾಧಿಕಾರ (JoSAA) ದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬಹುದು. ವಿದ್ಯಾರ್ಥಿಗಳು ಮೊದಲು ನೋಂದಾವಣೆ ಮಾಡಿಕೊಂಡು, ನಂತರ ತಮ್ಮ ಆದ್ಯತೆಯ ಕಾಲೇಜು ಮತ್ತು ಕೋರ್ಸ್‌ಗಳ ಆಯ್ಕೆಯನ್ನು ಭರ್ತಿ ಮಾಡಬೇಕು.

ಜೆಇಇ ಅಡ್ವಾನ್ಸ್ಡ್ 2021ರ ಫಲಿತಾಂಶವನ್ನು ಇಂದು ಘೋಷಿಸಲಾಗಿದೆ. JoSAA ಅಡಿಯಲ್ಲಿ ಮುಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ಅಭ್ಯರ್ಥಿ ಗಳ ನೋಂದಣಿ/ ಆಯ್ಕೆ ಪ್ರಕ್ರಿಯೆ ಅಕ್ಟೋಬರ್ 16ರಂದು ಆರಂಭವಾಗುತ್ತದೆ. ಮೊದಲ ಅಣಕು ಸೀಟು ಹಂಚಿಕೆಯನ್ನು ಅಕ್ಟೋಬರ್ 22ರಂದು 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಎರಡನೇ ಪಟ್ಟಿಯನ್ನು ಅಕ್ಟೋಬರ್ 24ರ ಬೆಳಿಗ್ಗೆ 10ಕ್ಕೆ ಬಿಡುಗಡೆ ಮಾಡಲಾಗುತ್ತದೆ. ಮೊದಲ ಹಂತದ ಸೀಟು ಹಂಚಿಕೆ ಪ್ರಕ್ರಿಯೆ ಅ. 27ರಂದು ನಡೆಯಲಿದೆ.

ಜೆಇಇ ಮೇನ್​ ಅರ್ಹ ಅಭ್ಯರ್ಥಿಗಳು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್ಐಟಿ), ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಮತ್ತು ಇತರ ಸರ್ಕಾರಿ ಅನುದಾನಿತ ತಾಂತ್ರಿಕ ಸಂಸ್ಥೆಗಳ (ಜಿಎಫ್‌ಟಿಐ) ಪ್ರವೇಶಕ್ಕಾಗಿ ನಡೆಯುವ ಜಂಟಿ ಸೀಟು ಹಂಚಿಕೆ ಪ್ರಾಧಿಕಾರ (JoSAA) ದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಜಂಟಿ ಸೀಟು ಹಂಚಿಕೆ ಪ್ರಕ್ರಿಯೆಯ ಮೂಲಕ ಅಭ್ಯರ್ಥಿಗಳಿಗೆ ಐಐಟಿಯಲ್ಲಿನ ಸೀಟು ಹಂಚಿಕೆ ನಡೆಯುತ್ತದೆ. ಜೆಇಇ ಮುಖ್ಯ ಪರೀಕ್ಷೆಯಲ್ಲಿ 44 ವಿದ್ಯಾರ್ಥಿಗಳು 100ಕ್ಕೆ ನೂರು ಅಂಕ​ ಗಳಿಸುವ ಮೂಲಕ ಸಾಧನೆ ಮಾಡಿದ್ದರು. ಕರ್ನಾಟಕದ ಗೌರವ್​ ದಾಸ್​ ಮೊದಲ ರ್ಯಾಂಕ್ ಗಳಿಸುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದರು.

ಇದನ್ನೂ ಓದಿ: JEE Main Results 2021: 44 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ; ಲಿಂಕ್ ಮೂಲಕ ಸ್ಕೋರ್​ಕಾರ್ಡ್​ ಡೌನ್​ಲೋಡ್​ ಮಾಡುವುದು ಹೇಗೆ?

JEE Main 2021 Admit Card: 4ನೇ ಹಂತದ ಜೆಇಇ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್​ ಮಾಡಿಕೊಳ್ಳುವ ವಿಧಾನ ಇಲ್ಲಿದೆ

Published On - 12:35 pm, Fri, 15 October 21

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ