AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Main 2021 Admit Card: 4ನೇ ಹಂತದ ಜೆಇಇ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್​ ಮಾಡಿಕೊಳ್ಳುವ ವಿಧಾನ ಇಲ್ಲಿದೆ

ಜಂಟಿ ಪ್ರವೇಶ ಪರೀಕ್ಷೆಯನ್ನು ಈ ಬಾರಿ ನಾಲ್ಕು ಹಂತಗಳಲ್ಲಿ ನಡೆಸಲಾಗಿದೆ. ಒಂದು ಮತ್ತು 2ನೇ ಹಂತ ಫೆಬ್ರವರಿ ಹಾಗೂ ಮಾರ್ಚ್​ನಲ್ಲಿ ನಡೆದಿತ್ತು. ಆದರೆ ಕೊರೊನಾ ಕಾರಣದಿಂದ ಮೂರು ಮತ್ತು ನಾಲ್ಕನೇ ಹಂತದ ಪರೀಕ್ಷೆ ನಡೆಸಲು ಹಿನ್ನಡೆಯಾಗಿತ್ತು.

JEE Main 2021 Admit Card: 4ನೇ ಹಂತದ ಜೆಇಇ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್​ ಮಾಡಿಕೊಳ್ಳುವ ವಿಧಾನ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 22, 2021 | 4:49 PM

Share

ಜೆಇಇ ಮುಖ್ಯ ಪರೀಕ್ಷೆ 2021 (JEE Main 2021)ರ ನಾಲ್ಕನೇ ಸೆಶನ್ಸ್​ನ ಪರೀಕ್ಷೆಯ ಪ್ರವೇಶ ಪತ್ರವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency-NTA) ಬಿಡುಗಡೆ ಮಾಡಿದ್ದು, ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರ (Admit Card)ವನ್ನು jeemain.nta.nic.in ವೆಬ್​ಸೈಟ್ ಮೂಲಕ ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ. ಜೆಇಇ ಮುಖ್ಯ ಪರೀಕ್ಷೆಯ ನಾಲ್ಕನೇ (ಕೊನೇ) ಹಂತದ ಪರೀಕ್ಷೆಗಳನ್ನು ಆಗಸ್ಟ್​ 26, 27, 31 ಮತ್ತು ಸೆಪ್ಟೆಂಬರ್​ 1, 2ರಂದು ನಡೆಸಲು ಎನ್​ಟಿಎ (NTA) ನಿರ್ಧರಿಸಿದ್ದು, ಈ ಹಂತದಲ್ಲಿ 7.3 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 

ಅಡ್ಮಿಟ್​ ಕಾರ್ಡ್ ಡೌನ್​ ಲೋಡ್ ಮಾಡಿಕೊಳ್ಳುವ ಸರಳ ವಿಧಾನ ಇಲ್ಲಿದೆ..

1. ಮೊದಲು ಜೆಇಇ ಅಧಿಕೃತ ವೆಬ್​ಸೈಟ್  jeemain.nta.nic.in.ಗೆ ಲಾಗಿನ್​ ಆಗಿ 2. ಅದರಲ್ಲಿ   Download JEE (Main) 2021 (Session – 4) Admit Card Paper (BE/B Tech/B Arch/ B Plan) ಎಂಬ ಹೆಸರಿನಲ್ಲಿ ಮೂರು ಲಿಂಕ್​ಗಳು ಕಾಣಿಸುತ್ತವೆ. ನೀವು ಯಾವುದೇ ಲಿಂಕ್​ ಮೇಲೆ ಕ್ಲಿಕ್​ ಮಾಡಬಹುದು 3. ಒಂದು ಹೊಸ ಪೇಜ್​ ತೆರೆದುಕೊಳ್ಳುತ್ತದೆ. 4. ಅದರಲ್ಲಿ ನಿಮ್ಮ ಅಪ್ಲಿಕೇಶನ್​ ನಂಬರ್​, ಪರೀಕ್ಷೆಯ ಸೆಶನ್ಸ್, ಹುಟ್ಟಿದ ದಿನ, ಸೆಕ್ಯೂರಿಟಿ ಪಿನ್​ಗಳನ್ನು ಕೇಳಲಾಗುತ್ತದೆ. ಅದನ್ನು ತುಂಬಿ, Submit ಎಂಬಲ್ಲಿ ಕ್ಲಿಕ್​ ಮಾಡಿ. 5. ಆಗ ಸ್ಕ್ರೀನ್​ ಮೇಲೆ ನಿಮ್ಮ ಪ್ರವೇಶ ಪತ್ರ ಕಾಣಿಸುತ್ತದೆ. 6. ಅದನ್ನು ಡೌನ್​ಲೋಡ್ ಮಾಡಿಕೊಳ್ಳಿ ಮತ್ತು ಪ್ರಿಂಟ್​ ತೆಗೆದಿಟ್ಟುಕೊಳ್ಳಿ.

ಜಂಟಿ ಪ್ರವೇಶ ಪರೀಕ್ಷೆಯನ್ನು ಈ ಬಾರಿ ನಾಲ್ಕು ಹಂತಗಳಲ್ಲಿ ನಡೆಸಲಾಗಿದೆ. ಒಂದು ಮತ್ತು 2ನೇ ಹಂತ ಫೆಬ್ರವರಿ ಹಾಗೂ ಮಾರ್ಚ್​ನಲ್ಲಿ ನಡೆದಿತ್ತು. ಆದರೆ ಕೊರೊನಾ ಕಾರಣದಿಂದ ಮೂರು ಮತ್ತು ನಾಲ್ಕನೇ ಹಂತದ ಪರೀಕ್ಷೆ ನಡೆಸಲು ಹಿನ್ನಡೆಯಾಗಿತ್ತು. ಜೆಇಇ ಮುಖ್ಯ ಪರೀಕ್ಷೆ ಸೆಶನ್ಸ್ 3ನ್ನು ಜುಲೈನಲ್ಲಿ ನಡೆಸಲಾಗಿದ್ದು, ಇದೀಗ ನಾಲ್ಕನೇ ಹಂತದ ಪರೀಕ್ಷೆ ಆಗಸ್ಟ್​ 26ರಿಂದ ನಡೆಯಲಿದೆ. ದೇಶದಲ್ಲಿ ಕೊರೊನಾ ಸ್ವಲ್ಪ ತಗ್ಗಿದ್ದು, ಲಸಿಕೆ ಅಭಿಯಾನವೂ ನಡೆಯುತ್ತಿದೆ. ಕೊವಿಡ್​ 19 ಸಂಬಂಧಪಟ್ಟ ಎಲ್ಲ ಮಾರ್ಗಸೂಚಿಗಳನ್ನೂ ಅನುಸರಿಸಿಯೇ ಪರೀಕ್ಷೆ ನಡೆಸುವುದಾಗಿ ಎನ್​​ಟಿಎ ತಿಳಿಸಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಮರದ ದಿಮ್ಮಿಗಳನ್ನು ಹೊತ್ತ ಟ್ರ್ಯಾಕ್ಟರ್​ ಹಿಮ್ಮುಖವಾಗಿ ಚಲಿಸಿ ಪಲ್ಟಿ; ಜಿಗಿದು ಬಚಾವಾದ ಚಾಲಕ

‘ಕೆಬಿಸಿ’ಯಲ್ಲಿ 5 ಕೋಟಿ ರೂ ಗೆದ್ದ ನಂತರ ಪ್ರಪಾತಕ್ಕೆ ಬಿದ್ದ ಬದುಕು; ನಂತರ ಏನಾಯಿತು? ಸುಶೀಲ್ ತೆರೆದಿಟ್ಟ ಜೀವನ ಕತೆ ಇಲ್ಲಿದೆ

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ