AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE Main 2021 Admit Card: 4ನೇ ಹಂತದ ಜೆಇಇ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್​ ಮಾಡಿಕೊಳ್ಳುವ ವಿಧಾನ ಇಲ್ಲಿದೆ

ಜಂಟಿ ಪ್ರವೇಶ ಪರೀಕ್ಷೆಯನ್ನು ಈ ಬಾರಿ ನಾಲ್ಕು ಹಂತಗಳಲ್ಲಿ ನಡೆಸಲಾಗಿದೆ. ಒಂದು ಮತ್ತು 2ನೇ ಹಂತ ಫೆಬ್ರವರಿ ಹಾಗೂ ಮಾರ್ಚ್​ನಲ್ಲಿ ನಡೆದಿತ್ತು. ಆದರೆ ಕೊರೊನಾ ಕಾರಣದಿಂದ ಮೂರು ಮತ್ತು ನಾಲ್ಕನೇ ಹಂತದ ಪರೀಕ್ಷೆ ನಡೆಸಲು ಹಿನ್ನಡೆಯಾಗಿತ್ತು.

JEE Main 2021 Admit Card: 4ನೇ ಹಂತದ ಜೆಇಇ ಮುಖ್ಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ; ಡೌನ್​ಲೋಡ್​ ಮಾಡಿಕೊಳ್ಳುವ ವಿಧಾನ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Updated By: Lakshmi Hegde|

Updated on: Aug 22, 2021 | 4:49 PM

Share

ಜೆಇಇ ಮುಖ್ಯ ಪರೀಕ್ಷೆ 2021 (JEE Main 2021)ರ ನಾಲ್ಕನೇ ಸೆಶನ್ಸ್​ನ ಪರೀಕ್ಷೆಯ ಪ್ರವೇಶ ಪತ್ರವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency-NTA) ಬಿಡುಗಡೆ ಮಾಡಿದ್ದು, ಪರೀಕ್ಷಾರ್ಥಿಗಳು ತಮ್ಮ ಪ್ರವೇಶ ಪತ್ರ (Admit Card)ವನ್ನು jeemain.nta.nic.in ವೆಬ್​ಸೈಟ್ ಮೂಲಕ ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ. ಜೆಇಇ ಮುಖ್ಯ ಪರೀಕ್ಷೆಯ ನಾಲ್ಕನೇ (ಕೊನೇ) ಹಂತದ ಪರೀಕ್ಷೆಗಳನ್ನು ಆಗಸ್ಟ್​ 26, 27, 31 ಮತ್ತು ಸೆಪ್ಟೆಂಬರ್​ 1, 2ರಂದು ನಡೆಸಲು ಎನ್​ಟಿಎ (NTA) ನಿರ್ಧರಿಸಿದ್ದು, ಈ ಹಂತದಲ್ಲಿ 7.3 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 

ಅಡ್ಮಿಟ್​ ಕಾರ್ಡ್ ಡೌನ್​ ಲೋಡ್ ಮಾಡಿಕೊಳ್ಳುವ ಸರಳ ವಿಧಾನ ಇಲ್ಲಿದೆ..

1. ಮೊದಲು ಜೆಇಇ ಅಧಿಕೃತ ವೆಬ್​ಸೈಟ್  jeemain.nta.nic.in.ಗೆ ಲಾಗಿನ್​ ಆಗಿ 2. ಅದರಲ್ಲಿ   Download JEE (Main) 2021 (Session – 4) Admit Card Paper (BE/B Tech/B Arch/ B Plan) ಎಂಬ ಹೆಸರಿನಲ್ಲಿ ಮೂರು ಲಿಂಕ್​ಗಳು ಕಾಣಿಸುತ್ತವೆ. ನೀವು ಯಾವುದೇ ಲಿಂಕ್​ ಮೇಲೆ ಕ್ಲಿಕ್​ ಮಾಡಬಹುದು 3. ಒಂದು ಹೊಸ ಪೇಜ್​ ತೆರೆದುಕೊಳ್ಳುತ್ತದೆ. 4. ಅದರಲ್ಲಿ ನಿಮ್ಮ ಅಪ್ಲಿಕೇಶನ್​ ನಂಬರ್​, ಪರೀಕ್ಷೆಯ ಸೆಶನ್ಸ್, ಹುಟ್ಟಿದ ದಿನ, ಸೆಕ್ಯೂರಿಟಿ ಪಿನ್​ಗಳನ್ನು ಕೇಳಲಾಗುತ್ತದೆ. ಅದನ್ನು ತುಂಬಿ, Submit ಎಂಬಲ್ಲಿ ಕ್ಲಿಕ್​ ಮಾಡಿ. 5. ಆಗ ಸ್ಕ್ರೀನ್​ ಮೇಲೆ ನಿಮ್ಮ ಪ್ರವೇಶ ಪತ್ರ ಕಾಣಿಸುತ್ತದೆ. 6. ಅದನ್ನು ಡೌನ್​ಲೋಡ್ ಮಾಡಿಕೊಳ್ಳಿ ಮತ್ತು ಪ್ರಿಂಟ್​ ತೆಗೆದಿಟ್ಟುಕೊಳ್ಳಿ.

ಜಂಟಿ ಪ್ರವೇಶ ಪರೀಕ್ಷೆಯನ್ನು ಈ ಬಾರಿ ನಾಲ್ಕು ಹಂತಗಳಲ್ಲಿ ನಡೆಸಲಾಗಿದೆ. ಒಂದು ಮತ್ತು 2ನೇ ಹಂತ ಫೆಬ್ರವರಿ ಹಾಗೂ ಮಾರ್ಚ್​ನಲ್ಲಿ ನಡೆದಿತ್ತು. ಆದರೆ ಕೊರೊನಾ ಕಾರಣದಿಂದ ಮೂರು ಮತ್ತು ನಾಲ್ಕನೇ ಹಂತದ ಪರೀಕ್ಷೆ ನಡೆಸಲು ಹಿನ್ನಡೆಯಾಗಿತ್ತು. ಜೆಇಇ ಮುಖ್ಯ ಪರೀಕ್ಷೆ ಸೆಶನ್ಸ್ 3ನ್ನು ಜುಲೈನಲ್ಲಿ ನಡೆಸಲಾಗಿದ್ದು, ಇದೀಗ ನಾಲ್ಕನೇ ಹಂತದ ಪರೀಕ್ಷೆ ಆಗಸ್ಟ್​ 26ರಿಂದ ನಡೆಯಲಿದೆ. ದೇಶದಲ್ಲಿ ಕೊರೊನಾ ಸ್ವಲ್ಪ ತಗ್ಗಿದ್ದು, ಲಸಿಕೆ ಅಭಿಯಾನವೂ ನಡೆಯುತ್ತಿದೆ. ಕೊವಿಡ್​ 19 ಸಂಬಂಧಪಟ್ಟ ಎಲ್ಲ ಮಾರ್ಗಸೂಚಿಗಳನ್ನೂ ಅನುಸರಿಸಿಯೇ ಪರೀಕ್ಷೆ ನಡೆಸುವುದಾಗಿ ಎನ್​​ಟಿಎ ತಿಳಿಸಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಮರದ ದಿಮ್ಮಿಗಳನ್ನು ಹೊತ್ತ ಟ್ರ್ಯಾಕ್ಟರ್​ ಹಿಮ್ಮುಖವಾಗಿ ಚಲಿಸಿ ಪಲ್ಟಿ; ಜಿಗಿದು ಬಚಾವಾದ ಚಾಲಕ

‘ಕೆಬಿಸಿ’ಯಲ್ಲಿ 5 ಕೋಟಿ ರೂ ಗೆದ್ದ ನಂತರ ಪ್ರಪಾತಕ್ಕೆ ಬಿದ್ದ ಬದುಕು; ನಂತರ ಏನಾಯಿತು? ಸುಶೀಲ್ ತೆರೆದಿಟ್ಟ ಜೀವನ ಕತೆ ಇಲ್ಲಿದೆ

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ