AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exams 2023: ಕಲಬುರಗಿಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ಮಾಡಿಕೊಟ್ಟ 16 ಪರೀಕ್ಷಾ ಸಿಬ್ಬಂದಿ ಅಮಾನತ್ತು

ಕಲಬುರಗಿಯಲ್ಲಿ ಎಸ್​ಎಸ್​ಎಲ್​ಸಿ ಬೋರ್ಡ್ ಪರೀಕ್ಷೆ ವೇಳೆ ಸಾಮೂಹಿಕ ನಕಲಿಗೆ ಅವಕಾಶ ಮಾಡಿಕೊಟ್ಟ 16 ಪರೀಕ್ಷಾ ಸಿಬ್ಬಂದಿಗಳನ್ನು ಅಮಾನತ್ತು ಮಾಡಲಾಗಿದೆ.

SSLC Exams 2023: ಕಲಬುರಗಿಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ಮಾಡಿಕೊಟ್ಟ 16 ಪರೀಕ್ಷಾ ಸಿಬ್ಬಂದಿ ಅಮಾನತ್ತು
ಅಫಜಲಪುರ ತಾಲೂಕಿನ ಸರ್ಕಾರಿ ಪ್ರೌಢಶಾಲೆ
ಆಯೇಷಾ ಬಾನು
|

Updated on:Apr 06, 2023 | 8:17 AM

Share

ಕಲಬುರಗಿ: ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಬೋರ್ಡ್ ಪರೀಕ್ಷೆ ನಡೆಯುತ್ತಿದ್ದು ಸಾಮೂಹಿಕ ನಕಲಿಗೆ ಅವಕಾಶ ಮಾಡಿಕೊಟ್ಟ ಪರೀಕ್ಷಾ ಸಿಬ್ಬಂದಿಗಳನ್ನು ಅಮಾನತ್ತು ಮಾಡಿ ಕಲಬುರಗಿ ಅಪರ ಪ್ರಾದೇಶಿಕ ಆಯುಕ್ತ ಈನಂದ ಪ್ರಕಾಶ್ ಆದೇಶ ಹೊರಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಗೊಬ್ಬುರು (ಬಿ)ಪರೀಕ್ಷಾ ಕೇಂದ್ರದಲ್ಲಿ ಏಪ್ರಿಲ್ 3ರಂದು ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲಾಗಿದೆ. ನಕಲು ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ 15 ಮಂದಿ ಕೊಠಡಿಯ ಮೇಲ್ವಿಚಾರಕರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರು ಸೋಮವಾರ ಅಮಾನತುಗೊಳಿಸಿದ್ದಾರೆ.

ಕರ್ತವ್ಯದಲ್ಲಿದ್ದ ಪರೀಕ್ಷಾ ಸಿಬ್ಬಂದಿ, ಮೇಲ್ವಿಚಾರಕರು ಗಣಿತ ಪರೀಕ್ಷೆಯಲ್ಲಿ ನಕಲು ಮಾಡಲು ಅವಕಾಶ ಮಾಡಿಕೊಟ್ಟು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಹೆಚ್ಚುವರಿ ಆಯುಕ್ತರು ಪ್ರಕಾಶ್ ಮೀನಾ ತಿಳಿಸಿದ್ದಾರೆ. ಪರೀಕ್ಷೆಗೆ ದಿಢೀರ್ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಸಲ್ಲಿಸಿದ ವರದಿ ಆಧರಿಸಿ ಅಮಾನತು ಆದೇಶ ಹೊರಡಿಸಲಾಗಿದೆ.

ಇಶಾ ಪಂತ್ ಭೇಟಿ ಕೊಟ್ಟಾಗ ಪರೀಕ್ಷಾ ಕೇಂದ್ರವನ್ನು ಪರಿಶೀಲಿಸಿದ್ದಾರೆ. ಆಗ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿರುವ ತೆರೆದ ಮೈದಾನದಲ್ಲಿ ಪರೀಕ್ಷೆ ಬರೆಯುತ್ತಿರುವುದು ಕಂಡುಬಂದಿದೆ. ಪ್ರಶ್ನೆಗಳಿಗೆ ಉತ್ತರಿಸಲು ಬುಕ್‌ಲೆಟ್‌ಗಳನ್ನು ಬಳಸಿ ಸಾಮೂಹಿಕ ನಕಲು ಮಾಡಿದ್ದು ಇದಕ್ಕೆ ಅವಕಾಶ ನೀಡಲಾಗಿದೆ ಎಂದು ಇಶಾ ಪಂತ್ ವರದಿ ನೀಡಿದ್ದಾರೆ. ಇದರ ಆಧಾರದ ಮೇಲೆ ಮುಖ್ಯಶಿಕ್ಷಕ ಗೋಳಾಲ್ಲಪ್ಪ ಗುರಪ್ಪ ಮತ್ತು 15 ಸಹಾಯಕ ಶಿಕ್ಷಕರಾದ ಭೀಮಾಶಂಕರ ಮಡಿವಾಳ, ರವೀಂದ್ರ, ದೇವೇಂದ್ರಪ್ಪ ಯರಗಲ್, ಸವಿತಾ ಬಾಯಿ ಜಮಾದಾರ್, ಅನಿತಾ, ನಾಗಮ್ಮ, ರೇವಣಸಿದ್ದಪ್ಪ, ಪರ್ವೀನ್ ಸುಲ್ತಾನ, ಬಾಬು ಪವಾರ್, ಕವಿತಾ, ಜಯಶ್ರೀ, ವಿದ್ಯಾವತಿ, ಗಾಯತ್ರಿ ಬಿರಾದಾರ್, ಮೀನಾಕ್ಷಿ ಮತ್ತು ಅರುಣಕುಮಾರ ಎಂಬುವವರನ್ನು ಅಮಾನತ್ತುಗೊಳಿಸಲಾಗಿದೆ.

ಇದನ್ನೂ ಓದಿ: SSLC Exams 2023: ಎಸ್​ಎಸ್​ಎಲ್​ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ! ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಾರ್ಚ್​ 31ರಿಂದ SSLC ಪರೀಕ್ಷೆ ಶುರುವಾಗಿದ್ದು, ಏಪ್ರಿಲ್ 15ಕ್ಕೆ ಮುಗಿಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:45ರವರೆಗೆ ಪರೀಕ್ಷೆ ನಡೆಯುತ್ತಿದ್ದು, 8 ಲಕ್ಷದ 42 ಸಾವಿರದ 811 ವಿದ್ಯಾರ್ಥಿಗಳು ಎಕ್ಸಾಂ ಎದುರಿಸುತ್ತಿದ್ದಾರೆ. ಎಕ್ಸಾಂ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. 200 ಮೀಟರ್ ನಿಷೇದಾಜ್ಞೆ ಜಾರಿಯಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTC ಹಾಗೂ BMTC ಬಸ್​​​ನಲ್ಲಿ ಉಚಿತ ಪ್ರಯಾಣ ಇರಲಿದೆ.

ಈ ವರುಷವೂ ಕೊರೊನಾ ಬ್ಯಾಚ್ ಎಂದು ಪರಿಗಣಿಸಿ 10 ಪರ್ಸೆಂಟ್ ಗ್ರೇಸ್ ಮಾರ್ಕ್ಸ್ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಭಾಷಾ ಹಾಗೂ ಕೋರ್ ಸೇರಿ ಮೂರು ವಿಷಯಗಳಿಗೆ ಮಾತ್ರ ಗ್ರೇಸ್ ಮಾರ್ಕ್ ನೀಡಲಿದ್ದು, ತೇರ್ಗಡೆ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯ ಆಗಲಿದೆ. ಇನ್ನೂ SSLC ರೀತಿಯಲ್ಲಿ ಪಿಯು ಪರೀಕ್ಷೆಗೂ ಸಮವಸ್ತ್ರ ನಿಯಮ ಜಾರಿಯಾಗಿದೆ. ಹಿಜಾಬ್ ಧರಿಸಿ ಬಂದ್ರೆ ಪರೀಕ್ಷೆಗೆ ಅವಕಾಶ ಇರಲ್ಲ. ಹೀಗಾಗಿ ಪರೀಕ್ಷಾರ್ಥಿಗಳಿಗೆ ಸಮವಸ್ತ್ರ ಪಾಲನೆ ನಿಯಮ ಕಡ್ಡಾಯ ಆಗಿದೆ.

ಕಲಬುರಗಿಯ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:47 am, Thu, 6 April 23

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ