AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಿಷ್ಠ ಹಾಜರಾತಿಯಿಂದ ಪರೀಕ್ಷೆ ವಂಚಿತರಾಗಿದ್ದ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ

ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಗುಡ್ ನ್ಯೂಸ್ ನೀಡಿದ್ದು, ಕನಿಷ್ಠ ಹಾಜರಾತಿಯಿಂದ ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.

ಕನಿಷ್ಠ ಹಾಜರಾತಿಯಿಂದ ಪರೀಕ್ಷೆ ವಂಚಿತರಾಗಿದ್ದ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 17, 2023 | 5:18 PM

Share

ಬೆಂಗಳೂರು: 2022-23ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಹಾಜರಾಗದ ಕಲಾ ಮತ್ತು ವಾಣಿಜ್ಯ ವಿಭಾಗದ ಪಿ.ಯು.ಸಿ (PUC) ವಿದ್ಯಾರ್ಥಿಗಳಿಗೆ ಮೇ 23, 2023ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುಡ್ ನ್ಯೂಸ್ ನೀಡಿದೆ. ಕನಿಷ್ಠ ಹಾಜರಾತಿಯಿಂದ ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಉಪಯೋಗಿಸಿಕೊಳ್ಳಬಹುದಾಗಿದೆ.

ಪಿಯುಸಿ ದ್ವೀತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 75% ರಷ್ಟು ಹಾಜರಾತಿ ಇಲ್ಲದ ಕಾರಣಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗದಿಂದ 12 ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಮುಖ್ಯ ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ವಿದ್ಯಾರ್ಥಿಗಳಿಗೆ ಮಾತ್ರ ಮಂಡಳಿ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ.

ಇದನ್ನೂ ಓದಿ: CET 2023: ಸಿಇಟಿ ಅರ್ಜಿ ವಿವರಗಳನ್ನು ಮಾರ್ಪಡಿಸಲು ಕೊನೆಯ ಅವಕಾಶ

ದ್ವಿತೀಯ ಪಿಯುಸಿ ಪರೀಕ್ಷೆ 2023 ಕ್ಕೆ ಸುಮಾರು 7,26,195 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯದಲ್ಲಿ 1,109 ಪರೀಕ್ಷಾ ಕೇಂದ್ರಗಳು ತೆರೆಯಲಾಗಿತ್ತು. ಬೋರ್ಡ್ ಮಾರ್ಚ್ 29, 2023 ರವರೆಗೆ ಪರೀಕ್ಷೆಗಳು ನಡೆದಿದ್ದವು.

ಇದನ್ನೂ ಓದಿ: ನಕಲಿ ದಾಖಲೆ ನೀಡಿದ ವಿದ್ಯಾರ್ಥಿಗಳ ಪ್ರವೇಶ ರದ್ದು ಮಾಡಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಏಪ್ರಿಲ್ 21 ರಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಲಾಗಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ