AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಿಷ್ಠ ಹಾಜರಾತಿಯಿಂದ ಪರೀಕ್ಷೆ ವಂಚಿತರಾಗಿದ್ದ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ

ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಗುಡ್ ನ್ಯೂಸ್ ನೀಡಿದ್ದು, ಕನಿಷ್ಠ ಹಾಜರಾತಿಯಿಂದ ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.

ಕನಿಷ್ಠ ಹಾಜರಾತಿಯಿಂದ ಪರೀಕ್ಷೆ ವಂಚಿತರಾಗಿದ್ದ ಪಿಯು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 17, 2023 | 5:18 PM

Share

ಬೆಂಗಳೂರು: 2022-23ನೇ ಸಾಲಿನಲ್ಲಿ ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಹಾಜರಾಗದ ಕಲಾ ಮತ್ತು ವಾಣಿಜ್ಯ ವಿಭಾಗದ ಪಿ.ಯು.ಸಿ (PUC) ವಿದ್ಯಾರ್ಥಿಗಳಿಗೆ ಮೇ 23, 2023ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೊಂದಾಯಿಸಲು ಅವಕಾಶ ಕಲ್ಪಿಸಲಾಗಿದೆ. ಆ ಮೂಲಕ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುಡ್ ನ್ಯೂಸ್ ನೀಡಿದೆ. ಕನಿಷ್ಠ ಹಾಜರಾತಿಯಿಂದ ಪರೀಕ್ಷೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಉಪಯೋಗಿಸಿಕೊಳ್ಳಬಹುದಾಗಿದೆ.

ಪಿಯುಸಿ ದ್ವೀತಿಯ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 75% ರಷ್ಟು ಹಾಜರಾತಿ ಇಲ್ಲದ ಕಾರಣಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗದಿಂದ 12 ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಮುಖ್ಯ ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ವಿದ್ಯಾರ್ಥಿಗಳಿಗೆ ಮಾತ್ರ ಮಂಡಳಿ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ.

ಇದನ್ನೂ ಓದಿ: CET 2023: ಸಿಇಟಿ ಅರ್ಜಿ ವಿವರಗಳನ್ನು ಮಾರ್ಪಡಿಸಲು ಕೊನೆಯ ಅವಕಾಶ

ದ್ವಿತೀಯ ಪಿಯುಸಿ ಪರೀಕ್ಷೆ 2023 ಕ್ಕೆ ಸುಮಾರು 7,26,195 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯದಲ್ಲಿ 1,109 ಪರೀಕ್ಷಾ ಕೇಂದ್ರಗಳು ತೆರೆಯಲಾಗಿತ್ತು. ಬೋರ್ಡ್ ಮಾರ್ಚ್ 29, 2023 ರವರೆಗೆ ಪರೀಕ್ಷೆಗಳು ನಡೆದಿದ್ದವು.

ಇದನ್ನೂ ಓದಿ: ನಕಲಿ ದಾಖಲೆ ನೀಡಿದ ವಿದ್ಯಾರ್ಥಿಗಳ ಪ್ರವೇಶ ರದ್ದು ಮಾಡಿದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಏಪ್ರಿಲ್ 21 ರಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಲಾಗಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More