AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka PUC Exam: ಇಂದಿನಿಂದ ಪಿಯು ಪರೀಕ್ಷೆಗಳು ಆರಂಭ, ಹಿಜಾಬ್ ಬದಿಗಿಟ್ಟು ಪರೀಕ್ಷೆಗೆ ಹಾಜರಾಗ್ತಾರಾ ವಿದ್ಯಾರ್ಥಿನಿಯರು?

ದ್ವೀತಿಯ ಪಿಯು ಪರೀಕ್ಷೆ.. ಮಕ್ಕಳ ಭವಿಷ್ಯಕ್ಕೆ ಈ ಪರೀಕ್ಷೆ ತುಂಬಾ ಮುಖ್ಯ. ಇಂದಿನಿಂದ ಮೇ 18ರವರೆಗೆ ಎಕ್ಸಾಂಗಳು ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ ಮಾಡಲಾಗಿದೆ. ಹಾಗೇ SSLC ರೀತಿಯಲ್ಲಿ ಪಿಯು ಪರೀಕ್ಷೆಗೂ ಸಮವಸ್ತ್ರ ನಿಯಮ ಜಾರಿಯಲ್ಲಿರಲಿದೆ.

Karnataka PUC Exam: ಇಂದಿನಿಂದ ಪಿಯು ಪರೀಕ್ಷೆಗಳು ಆರಂಭ, ಹಿಜಾಬ್ ಬದಿಗಿಟ್ಟು ಪರೀಕ್ಷೆಗೆ ಹಾಜರಾಗ್ತಾರಾ ವಿದ್ಯಾರ್ಥಿನಿಯರು?
ದ್ವಿತೀಯ ಪಿಯು ಎಕ್ಸಾಂ ಸಿದ್ಧತೆ
TV9 Web
| Updated By: ಆಯೇಷಾ ಬಾನು|

Updated on:Apr 22, 2022 | 12:16 PM

Share

ಬೆಂಗಳೂರು: ಹಿಜಾಬ್(Hijab) ಗೊಂದಲದ ನಡುವೆಯೇ SSLC#SSLC 2022 Exam) ಪರೀಕ್ಷೆ ಮುಗೀತು. ಈಗ ಇಂದಿನಿಂದ ಸೆಕೆಂಡ್ ಪಿಯುಸಿ(Karnataka PUC Exam) ಪರೀಕ್ಷೆಗಳು ಆರಂಭವಾಗ್ತಿದೆ. ಶಿಕ್ಷಣ ಇಲಾಖೆಗೆ ಮತ್ತೊಂದು ಟೆನ್ಷನ್ ಶುರುವಾಗಿದ್ದು, ಪರೀಕ್ಷೆ ಹೇಗೆ ನಡೆಯಲಿದೆ ಅನ್ನೊ ಗೊಂದಲ ಕಾಡ್ತಿದೆ. ದ್ವಿತೀಯ ಪಿಯು ಎಕ್ಸಾಂ ಇಂದಿನಿಂದ ಆರಂಭವಾಗ್ತಿದೆ. ವಿದ್ಯಾರ್ಥಿಗಳು ಹೊಸ ಹುಮ್ಮಸ್ಸಿನಿಂದ ಪರೀಕ್ಷೆಗೆ ಸಿದ್ಧರಾಗಿದ್ದಾರೆ. ಆದ್ರೆ ಇಂದಿನ ಎಕ್ಸಾಂ ಶಿಕ್ಷಣ ಇಲಾಖೆಗೆ ದೊಡ್ಡ ಸವಾಲಾಗಿದೆ. ಪರೀಕ್ಷೆ ಮೇಲೆ ಹಿಜಾಬ್ ಕರಿನೆರಳು ಬೀಳುವ ಆತಂಕ ಎದುರಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ಹಿಜಾಬ್ ಧರಿಸಿ ಬಂದ್ರೆ ನೋ ಎಂಟ್ರಿ ದ್ವೀತಿಯ ಪಿಯು ಪರೀಕ್ಷೆ.. ಮಕ್ಕಳ ಭವಿಷ್ಯಕ್ಕೆ ಈ ಪರೀಕ್ಷೆ ತುಂಬಾ ಮುಖ್ಯ. ಇಂದಿನಿಂದ ಮೇ 18ರವರೆಗೆ ಎಕ್ಸಾಂಗಳು ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ ಮಾಡಲಾಗಿದೆ. ಹಾಗೇ SSLC ರೀತಿಯಲ್ಲಿ ಪಿಯು ಪರೀಕ್ಷೆಗೂ ಸಮವಸ್ತ್ರ ನಿಯಮ ಜಾರಿಯಲ್ಲಿರಲಿದೆ. ಹಿಜಾಬ್ ಧರಿಸಿ ಬಂದ್ರೆ ಪರೀಕ್ಷೆಗೆ ಅವಕಾಶ ಇಲ್ಲ. ಹೀಗಾಗಿ ಪರೀಕ್ಷಾರ್ಥಿಗಳಿಗೆ ಸಮವಸ್ತ್ರ ಪಾಲನೆ ನಿಯಮ ಕಡ್ಡಾಯವಾಗಿದೆ. ಈಗಾಗ್ಲೇ ಆಯಾ ಕಾಲೇಜುಗಳ ಕಾಲೇಜು ಅಭಿವೃದ್ಧಿ ಕಮಿಟಿಗಳಿಗೆ ಸೂಚನೆ ನೀಡಿದ್ದು, ಕೋರ್ಟ್ ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಆರ್. ರಾಮಚಂದ್ರನ್ ಹೇಳಿದ್ದಾರೆ.

ಇನ್ನು ಈ ಬಾರಿ ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು, ಆರೂವರೆ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.. ಇನ್ನು ಎಕ್ಸಾಂ ಕೇಂದ್ರದ ಸುತ್ತ 144 ಸೆಕ್ಷನ್ ಹಾಕಲಾಗಿದ್ದು, 200 ಮೀಟರ್ ನಿಷೇಧಾಜ್ಞೆ ಜಾರಿಯಾಗಿದೆ. ಪರೀಕ್ಷೆ ಹಾಲ್ ಟಿಕೆಟ್ ತೋರಿಸಿ KSRTC ಹಾಗೂ BMTC ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ. ನಾಳೆಯ ಪರೀಕ್ಷೆಗೆ ವಿದ್ಯಾರ್ಥಿಗಳು ಸ್ವಲ್ಪ ಟೆನ್ಷನ್ನಲ್ಲೇ ತಯಾರಾಗಿದ್ದಾರೆ.

ಹಿಜಾಬ್ ಬದಿಗಿಟ್ಟು ಅಂತಿಮ ಪರೀಕ್ಷೆಗೆ ಹಾಜರಾಗ್ತಾರಾ ವಿದ್ಯಾರ್ಥಿನಿಯರು? ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರ ನಡೆ ತೀವ್ರ ಕುತೂಹಲ ಕೆರಳಿಸಿದೆ. ಪ್ರಾಯೋಗಿಕ ಪರೀಕ್ಷೆಯಿಂದ ದೂರ ಉಳಿದವರು ಅಂತಿಮ ಪರೀಕ್ಷೆ ಬರೆಯುತ್ತಾರಾ? ಅಥವಾ ಅಂತಿಮ ಪರೀಕ್ಷೆಯಿಂದಲೂ ಅಂತರ ಕಾಯ್ದುಕೊಳ್ತಾರಾ? ಭವಿಷ್ಯದಲ್ಲಿ ಪರೀಕ್ಷೆ ಮುಖ್ಯ ಅಂತ ಇಂದಿನ ಪರೀಕ್ಷೆಗೆ ಹಾಜರಾಗ್ತಾರಾ? ಹಿಜಾಬೇ ಬೇಕು ಅಂತ ದೂರು ಉಳಿಯುತ್ತಾರಾ? ಎಂಬ ನಾನಾ ಪ್ರೆಶ್ನೆಗಳು ಉದ್ಭವಿಸಿವೆ. ಇನ್ನು SSLC ಪರೀಕ್ಷೆಗೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಗೈರಾಗಿದ್ದರು. ಗೈರಾದವರಿಗೂ ಹಿಜಾಬ್ ಗೂ ಯಾವುದೇ ಸಂಬಂಧವಿಲ್ಲ ಎಂದು ಶಿಕ್ಷಣ ಇಲಾಖೆ ಹೇಳಿತ್ತು.

ವಿಷಯವಾರು ಗೈರಾದ ವಿದ್ಯಾರ್ಥಿಗಳ ವಿವರ ವಿಷಯ-ನೊಂದಣಿ-ಗೈರು -ಪ್ರಥಮ ಭಾಷೆ-8,96,399-20,994 -ದ್ವಿತೀಯ ಭಾಷೆ-8,68,206-22,063 -ಗಣಿತ-8,72,525-25,144 -ಸಮಾಜ ವಿಜ್ಞಾನ-8,70,429-24,873 -ತೃತೀಯ ಭಾಷೆ-8,67,215-24,868 -ವಿಜ್ಞಾನ-8,17,994-25,526

ವಿದ್ಯಾರ್ಥಿನಿಯರಿಗೆ ಹಿಜಾಬ್ ವಿಚಾರ ತೊಂದರೆ ಮಾಡಿಲ್ಲ ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ ನೀಡಿದ್ದು ವಿದ್ಯಾರ್ಥಿನಿಯರಿಗೆ ಹಿಜಾಬ್ ವಿಚಾರ ತೊಂದರೆ ಮಾಡಿಲ್ಲ. ಹೊರಗಡೆಯ ಜನರೇ ಈ ಬಗ್ಗೆ ಹೆಚ್ಚು ಚರ್ಚೆ ಮಾಡಿದ್ದಾರೆ. ಈ ಬಾರಿ 2 ಪ್ರಿಪರೇಟರಿ ಪರೀಕ್ಷೆ ಕೊಟ್ಟು ತಯಾರು ಮಾಡಿದ್ದೇವೆ. ಶಿಕ್ಷಕರ ಪ್ರಯತ್ನದಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹಾಲ್ ಟಿಕೆಟ್ ಪಡೆಯದ ಮಕ್ಕಳಿಗೆ ಅಹಂಕಾರ ಬಂದುಬಿಟ್ಟಿದೆ. ಕೋರ್ಟ್​ ಆದೇಶದಿಂದ ಸೋತಿದ್ದೀನಿ ಅನ್ನೋ ಮನಸ್ಥಿತಿಯಲ್ಲಿದ್ದಾರೆ. ಆ ಮನಸ್ಥಿತಿ ಸರಿಹೋಗಲಿಕ್ಕೆ ಸಮಯವೊಂದೇ ಈಗ ಪರಿಹಾರ. ವಿದ್ಯಾರ್ಥಿನಿಯರಿಗೆ ಹಿಜಾಬ್ ಮುಖ್ಯವಲ್ಲ, ಶಿಕ್ಷಣ ಮುಖ್ಯ. ಈಗಾಗಲೇ ಈ ಬಗ್ಗೆ ಮುಸ್ಲಿಂ ಮುಖಂಡರೇ ಹೇಳಿದ್ದಾರೆ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Karnataka Second PUC Exams: ಇನ್ನೂ ಹಾಲ್​ ಟಿಕೆಟ್​ ಪಡೆಯದ ಉಡುಪಿಯ ಆ 4 ವಿದ್ಯಾರ್ಥಿನಿಯರಿಗೆ ನಾಳೆಯಿಂದ ಅಗ್ನಿಪರೀಕ್ಷೆ

Published On - 7:01 am, Fri, 22 April 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!