AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Exam-3: ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ, ಇಲ್ಲಿದೆ ಟೈಮ್​ಟೇಬಲ್

ಕರ್ನಾಟಕದ ದ್ವಿತೀಯ ಪಿಯುಸಿ 3ನೇ ಪರೀಕ್ಷೆ ಜೂನ್ 6 ರಿಂದ 20 ರವರೆಗೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪರೀಕ್ಷೆ ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಪರೀಕ್ಷೆಯ ವೇಳಾಪಟ್ಟಿ, ಇತರ ವಿವರಗಳನ್ನು ಇಲ್ಲಿ ನೀಡಲಾಗಿದೆ.

Karnataka 2nd PUC Exam-3: ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ, ಇಲ್ಲಿದೆ ಟೈಮ್​ಟೇಬಲ್
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: May 17, 2025 | 4:33 PM

Share

ಬೆಂಗಳೂರು, ಮೇ 17: ಕರ್ನಾಟಕ ದ್ವಿತೀಯ ಪಿಯುಸಿ (Second PUC) 3ನೇ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ kseab.karnataka.gov.in/ ಇದರಲ್ಲಿ ಪ್ರಕಟಿಸಿದೆ. ಪರೀಕ್ಷೆಯು ಜೂನ್ 6 ರಿಂದ 20 ರ ರವರೆಗೆ ನಡೆಯಲಿದೆ. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 2 ರಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ 3 ನೇ ಪರೀಕ್ಷೆಗೆ ಹಾಜರಾಗಬಹುದು. ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 3 ರ ಹಾಲ್ ಟಿಕೆಟ್ ಅನ್ನು ಮಂಡಳಿಯು ಮೇ ಕೊನೆಯ ವಾರದಲ್ಲಿ ತಾತ್ಕಾಲಿಕವಾಗಿ ಬಿಡುಗಡೆ ಮಾಡುತ್ತದೆ.

2025 ರ ಕರ್ನಾಟಕ ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿಯ ವಿವರಗಳನ್ನು ಇಲ್ಲಿ ನೀಡಲಾಗಿದೆ. ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆಗಳು ನಡೆಯಲಿವೆ.

ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿ

ದಿನಾಂಕ ಮತ್ತು ವಿಷಯ (ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ)

  • ಜೂನ್ 6 – ಕನ್ನಡ, ಅರೇಬಿಕ್
  • ಜೂನ್ 10 – ಇತಿಹಾಸ, ಭೌತಶಾಸ್ತ್ರ
  • ಜೂನ್ 11 – ರಾಜ್ಯಶಾಸ್ತ್ರ, ಸ್ಟಾಟಿಸ್ಟಿಕ್ಸ್, ಜೀವಶಾಸ್ತ್ರ
  • ಜೂನ್ 12 – ಅರ್ಥಶಾಸ್ತ್ರ, ರಸಾಯನಶಾಸ್ತ್ರ
  • ಜೂನ್ 13 – ಇಂಗ್ಲಿಷ್
  • ಜೂನ್ 14 – ತರ್ಕಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್, ಗಣಿತ, ಶಿಕ್ಷಣ, ಹೋಮ್ ಸೈನ್ಸಸ್
  • ಜೂನ್ 16 – ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಜಿಯೋಗ್ರಫಿ
  • ಜೂನ್ 17 – ಐಚ್ಛಿಕ ಕನ್ನಡ, ಅಕೌಂಟೆನ್ಸಿ
  • ಜೂನ್ 18 – ಹಿಂದಿ
  • ಜೂನ್ 19 – ಮನೋವಿಜ್ಞಾನ, ಭೂಗೋಳಶಾಸ್ತ್ರ, ಮೂಲ ಗಣಿತ
  • ಜೂನ್ 20 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ (ಬೆಳಗಿನ ಅವಧಿ).
  • ಜೂನ್ 20 – ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಬ್ಯೂಟಿ ಆ್ಯಂಡ್ ವೆಲ್​ನೆಸ್ (ಮಧ್ಯಾಹ್ನದ ಅವಧಿ ಮಧ್ಯಾಹ್ನ 2.15 ರಿಂದ ಸಂಜೆ 4.30 ರವರೆಗೆ).

ಇದನ್ನೂ ಓದಿ: ದ್ವಿತೀಯ ಪಿಯುಸಿ -2 ಫಲಿತಾಂಶ ಪ್ರಕಟ, 3ನೇ ಬಾರಿಯ ಪರೀಕ್ಷೆಗೆ ದಿನಾಂಕ ಘೋಷಣೆ

ಇದನ್ನೂ ಓದಿ
Image
2nd PUC Exam-2 Result: ದ್ವಿತೀಯ ಪಿಯು ಪರೀಕ್ಷೆ -2 ಫಲಿತಾಂಶ ಪ್ರಕಟ
Image
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಯಂ ಶಿಕ್ಷಕರ ಕೊರತೆ
Image
ಬ್ರಿಟಿಷ್​ ಅಧಿಕಾರಿಗಳ ಮಕ್ಕಳು ಓದಿದ ಕೋಲಾರದ ಐತಿಹಾಸಿಕ ಶಾಲೆಯ ಕಥೆ ವ್ಯಥೆ!
Image
ಕ್ಯಾನ್ಸರ್ ಗೆದ್ದ ಬಾಲಕಿ, ಎಸ್​​ಎಸ್​ಎಲ್​​ಸಿ ಪರೀಕ್ಷೆಯಲ್ಲೂ ಟಾಪರ್

ಕರ್ನಾಟಕ ದ್ವಿತೀಯ ಪಿಯು ಪರೀಕ್ಷೆ-2 ರ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ 3ನೇ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ- 2 ರಲ್ಲಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎರಡನೇ ದ್ವಿತೀಯ ಪಿಯು ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ಹಾಜರಾಗಿದ್ದರು.

ಶಿಕ್ಷಣ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ