AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka 2nd PUC Result 2025: ಸೆಕೆಂಡ್ ಪಿಯುಸಿ ಫಲಿತಾಂಶ ಇಂದು, ನೀವು ತಿಳಿಯಲೇಬೇಕಾದ ವಿಚಾರಗಳು ಇಲ್ಲಿವೆ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ 2025: ಸೆಕೆಂಡ್ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಫಲಿತಾಂಶವನ್ನು ಪತ್ರಿಕಾಗೋಷ್ಠಿ ಮೂಲಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದೆ. ಆನ್​ಲೈನ್ ಮೂಲಕವೂ ಫಲಿತಾಂಶ ಪರಿಶೀಲಿಸಬಹುದಾಗಿದೆ. ವಿವರಗಳಿಗೆ ಮುಂದೆ ಓದಿ.

Karnataka 2nd PUC Result 2025: ಸೆಕೆಂಡ್ ಪಿಯುಸಿ ಫಲಿತಾಂಶ ಇಂದು, ನೀವು ತಿಳಿಯಲೇಬೇಕಾದ ವಿಚಾರಗಳು ಇಲ್ಲಿವೆ
ಸಾಂದರ್ಭಿಕ ಚಿತ್ರ
Follow us
Ganapathi Sharma
| Updated By: Digi Tech Desk

Updated on:Apr 08, 2025 | 8:30 AM

ಬೆಂಗಳೂರು, ಏಪ್ರಿಲ್ 7: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) 2025 ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ  (Second PU Exam) ಫಲಿತಾಂಶವನ್ನು ಇಂದು ಪ್ರಕಟಿಸಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದ್ದು, ಆ ನಂತರ ವೆಬ್​ಸೈಟ್​​ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಮಾರ್ಚ್ 21 ರಂದು ಆನ್ಸರ್ ಕೀ (Second PUC Answer Key) ಬಿಡುಗಡೆ ಮಾಡಲಾಗಿತ್ತು.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025: ನೋಡುವುದು ಎಲ್ಲಿ?

ಪತ್ರಿಕಾಗೋಷ್ಠಿ ಮೂಲಕ ಕೆಎಸ್​​ಸಿಎಬಿ ಫಲಿತಾಂಶ ಪ್ರಕಟಿಸಲಿದೆ. ಆ ನಂತರ ಆನ್​ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಎರಡು ವೆಬ್​ಸೈಟ್​ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.

ಇದನ್ನೂ ಓದಿ
Image
ಪ್ರತಿಭಾವಂತ ಕ್ರಿಕೆಟ್​​ ಆಟಗಾರ ಇಂದು ಐಪಿಎಸ್ ಅಧಿಕಾರಿ
Image
ಸರ್ಕಾರಿ ಶಾಲಾ ಶಿಕ್ಷಕಿ ಎಡವಟ್ಟು: ಕಣ್ಣಿನ ದೃಷ್ಟಿ ಕಳೆದುಕೊಂಡ ಬಾಲಕ
Image
ಪರೀಕ್ಷೆಯ ನಂತರದ ಗೊಂದಲ ನಿವಾರಣೆ, ಸರಿಯಾದ ಕೋರ್ಸ್​ ಆಯ್ಕೆ ಹೇಗೆ?
Image
ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕ ಫಿಕ್ಸ್? ರಿಸಲ್ಟ್ ನೋಡೋದು ಹೇಗೆ?

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025: ಆನ್​ಲೈನ್​ನಲ್ಲಿ ಪರಿಶೀಲಿಸುವುದು ಹೇಗೆ?

  1. ಅಧಿಕೃತ ವೆಬ್‌ಸೈಟ್‌ಗೆ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
  2. ಹೋಂ ಪೇಜ್​ನಲ್ಲಿ, Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
  3. ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು.
  4. Second PU Results 2025 ಎಂಬುದು ಸ್ಕ್ರೀನ್​ನಲ್ಲಿ ಕಾಣಿಸುತ್ತದೆ.
  5. ನಂತರ ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್​ಲೋಡ್ ಮಾಡಲು ಅವಕಾಶ ಇರುತ್ತದೆ.

ಮಾರ್ಚ್ 1ರಿಂದ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ

ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ದ್ವಿತೀಯ ಪಿಯುಸಿ ಪರೀಕ್ಷೆ 2025: ಮುಖ್ಯಾಂಶಗಳು

  • ಪರೀಕ್ಷಾ ಅವಧಿ: ಮಾರ್ಚ್ 1 ರಿಂದ ಮಾರ್ಚ್ 20 ರ ವರೆಗೆ
  • ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ
  • ಫಸ್ಟ್ ಪೇಪರ್: ಕನ್ನಡ ಮತ್ತು ಅರೇಬಿಕ್
  • ಲಾಸ್ಟ್ ಪೇಪರ್: ಹಿಂದಿ
  • ಮಾಡೆಲ್ ಆನ್ಸರ್ ಕೀ: ಮಾರ್ಚ್ 21
  • ಅಧಿಕೃತ ಫಲಿತಾಂಶ ದಿನಾಂಕ: ಇನ್ನಷ್ಟೇ ಘೋಷಣೆಯಾಗಬೇಕಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಫಿಕ್ಸ್? ರಿಸಲ್ಟ್ ನೋಡೋದು ಹೇಗೆಂದು ಇಲ್ಲಿ ನೋಡಿ

ಕಳೆದ ಮೂರು ವರ್ಷಗಳ ದ್ವಿತೀಯ ಪಿಯುಸಿ ಫಲಿತಾಂಶಗಳಲ್ಲಿ ಹುಡುಗಿಯರು ನಿರಂತರವಾಗಿ ಹುಡುಗರಿಗಿಂತ ಮೇಲುಗೈ ಸಾಧಿಸಿದ್ದಾರೆ. 2022 ರಲ್ಲಿ ಶೇ 13.5 ರಷ್ಟು ಗಮನಾರ್ಹ ಅಂತರದೊಂದಿಗೆ ಮೇಲುಗೈ ಸಾಧಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:36 am, Mon, 7 April 25

22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!