
ಬೆಂಗಳೂರು, (ಏಪ್ರಿಲ್ 06): ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Puc Exam Result) ನೋಡುವ ಭಾಗ್ಯ ಸಿಕ್ಕಿದೆ. ಭಾರೀ ಗೊಂದಲದ ನಡುವೆ ಇದೀಗ ರಾಜ್ಯ ಶಿಕ್ಷಣ ಇಲಾಖೆ ಇಂದು (ಏ.9) ಫಲಿತಾಂಶವನ್ನು ಘೋಷಣೆ ಮಾಡಲಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ (Madhu Bangarappa) ಅವರೇ ಸುದ್ದಿಗೋಷ್ಠಿಯಲ್ಲಿ ಏಪ್ರಿಲ್ ಮೊದಲ ವಾರದಲ್ಲೇ ಫಲಿತಾಂಶ ನೀಡುವುದಾಗಿ ಘೋಷಿಸಿದ್ದರು. ಹಾಗಾಗಿ ಏಪ್ರಿಲ್ 7ರಂದು ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಆದರೆ ಶಿಕ್ಷಣ ಏಪ್ರಿಲ್ 7ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್ ಅನೌನ್ಸ್ ಆಗುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ಹೇಳಿದ್ದರು. ಇದೀಗ ಬಹಳ ಕಾತರದಿಂದ ಕಾಯುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಈ ಮೊದಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಏಪ್ರಿಲ್ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದ್ದರು. ಹೀಗಾಗಿ ಪ್ರತಿವರ್ಷಕ್ಕಿಂತ ಈ ಬಾರಿ ಬೇಗ ರಿಸಲ್ಟ್ ಕೊಡುತ್ತಾರೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದರು. ಇದೀಗ ಅದರಂತೆ ಎಕ್ಸಾಂ ಬೋರ್ಡ್ ಅಧಿಕಾರಿಗಳು ಇಂದು ಫಲಿತಾಂಶ ಪ್ರಕಟ ಮಾಡಲಿದೆ.
ಮಾರ್ಚ್ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ರಾಜ್ಯಾದ್ಯಂತ ಸುಮಾರು 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಬೆನ್ನಲ್ಲೇ ಮೌಲ್ಯಮಾಪನ ಕಾರ್ಯ ಚುರುಕಿನಿಂದ ಸಾಗಿತ್ತು. ಆದರೆ, ಈಗ ಕೊನೆಯ ಕ್ಷಣದಲ್ಲಿ ಮೌಲ್ಯಮಾಪನ ಪ್ರಕ್ರಿಯೆಯ ಸಣ್ಣ ಪುಟ್ಟ ಕೆಲಸಗಳು ಬಾಕಿ ಇದೆ ಎಂದು ಹೇಳಿ ದಿನಾಂಕವನ್ನು ಮುಂದೂಡಲಾಗಿತ್ತು. ಇನ್ನೆರಡು ದಿನ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಕೂಡ ಹೇಳಲಾಗಿದೆ. ಇದೀಗ ಈ ಎಲ್ಲ ಗೊಂದಲಕ್ಕೆ ಶಿಕ್ಷಣ ಇಲಾಖೆ ಬ್ರೇಕ್ ಹಾಕಿ. ಇಂದು ಮಧ್ಯಾಹ್ನ ಫಲಿತಾಂಶ ಪ್ರಕಟ ಮಾಡಲಿದೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:08 pm, Mon, 6 April 26